
ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಸಾರಿಗೆ ರಾಷ್ಟ್ರೀಕರಣವಿಲ್ಲ: ರಾಮಲಿಂಗಾ
Team Udayavani, Mar 21, 2017, 12:28 PM IST

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಸಾರಿಗೆಯನ್ನು ರಾಷ್ಟ್ರೀಕರಣಗೊಳಿಸುವ ಉದ್ದೇಶ ಸರಕಾರಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಐವನ್ ಡಿ’ಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಿರುವ ಎಲ್ಲ ಖಾಸಗಿ ಪ್ರವರ್ತಕರನ್ನು ಉಳಿಸಿಕೊಂಡು ಕರ್ನಾಟಕ ರಾಜ್ಯಾದ್ಯಂತ ಅನ್ವಯಿಸುವಂತೆ ಹೊಸ ಸಮಗ್ರ ಪ್ರದೇಶ ಯೋಜನೆಯ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉದ್ದೇಶಿತ ಪ್ರದೇಶ ಯೋಜನೆಯನ್ನು ಮೋಟಾರು ವಾಹನಗಳ ಅಧಿನಿಯಮ 1988ರ 99 ಮತ್ತು 100ನೇ ಕಲಂ ಮೇರೆಗೆ ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿದೆ. ಈ ಸಮಗ್ರ ಪ್ರದೇಶ ಯೋಜನೆಯಿಂದ ಈಗ ಚಾಲ್ತಿಯಲ್ಲಿರುವ ಯಾವುದೇ ಖಾಸಗಿ ಪ್ರವರ್ತಕರಿಗೆ ಧಕ್ಕೆಯಾಗುವುದಿಲ್ಲ ಎಂದವರು ತಿಳಿಸಿದರು.
ಉದ್ದೇಶಿತ ಹೊಸ ಸಮಗ್ರ ಯೋಜನೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಪ್ರವರ್ತಕರು ಹೈಕೋರ್ಟ್ನಲ್ಲಿ ರಿಟ್ ಮನವಿಯನ್ನು ದಾಖಲಿಸಿದ್ದು, ಮಧ್ಯಾಂತರ ತಡೆಯಾಜ್ಞೆ ನೀಡಿದ್ದು, ಈ ವಿಷಯವು ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ತಿಳಿಸಿದ ಅವರು, ಸಮಗ್ರ ಪ್ರದೇಶ ಯೋಜನೆಯಿಂದ ಈಗ ಚಾಲ್ತಿಯಲ್ಲಿರುವ ಲೀಗಲಿ ವಾಲಿಡ್ ಪರ್ಮಿಟ್ ಹೊಂದಿರುವ ಯಾವುದೇ ಖಾಸಗಿ ಪ್ರವರ್ತಕರಿಗೆ ಧಕ್ಕೆ ಆಗುವುದಿಲ್ಲ ಎಂದವರು ತಿಳಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ

Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.