ಹೊಸ ಕಾಂಕ್ರೀಟ್‌ ರಸ್ತೆ: ಒಂದು ಭಾಗ ಸಂಚಾರಕ್ಕೆ ಮುಕ್ತ


Team Udayavani, Jan 3, 2021, 12:09 PM IST

ಹೊಸ ಕಾಂಕ್ರೀಟ್‌ ರಸ್ತೆ: ಒಂದು ಭಾಗ ಸಂಚಾರಕ್ಕೆ ಮುಕ್ತ

ಮಹಾನಗರ, ಜ. 2: ಹಂಪನಕಟ್ಟೆ ಜಂಕ್ಷನ್‌ನಲ್ಲಿ ಒಂದು ಭಾಗದ ರಸ್ತೆ ಕಾಮ ಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಹಂಪನಕಟ್ಟೆ ಜಂಕ್ಷನ್‌ನಿಂದ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ರಸ್ತೆ(ಲೈಟ್‌ ಹೌಸ್‌ ಹಿಲ್‌) ಕಡೆಗೆ ಹೋಗುವ ವಾಹನಗಳು ಈಗ ಹೊಸ ರಸ್ತೆಯಲ್ಲೇ ಸಂಚರಿಸಲು ಅವಕಾಶ ನೀಡಲಾಗಿದೆ.

ಹಂಪನಕಟ್ಟೆ ಜಂಕ್ಷನ್‌- ಬಾವುಟಗುಡ್ಡೆ ರಸ್ತೆಯ ಕಾಂಕ್ರೀಟ್‌, ಫ‌ುಟ್‌ಪಾತ್‌ ಹಾಗೂ ಒಳಚರಂಡಿ ಕಾಮಗಾರಿಯನ್ನು ನ.  8ರಂದು ಆರಂಭಿಸಿ, ಭರದಿಂದ ನಡೆಸ ಲಾಗಿತ್ತು. ಇದೀಗ 180 ಮೀ. ಉದ್ದದ ರಸ್ತೆಯ ಒಂದು ಭಾಗದ ಕಾಂಕ್ರೀಟ್‌ ಕಾಮಗಾರಿ ಪೂರ್ಣಗೊಂಡಿದೆ.

ಕಾಮಗಾರಿ ಹಿನ್ನೆಲೆ ನ. 8ರಿಂದಲೇ ಹಂಪನಕಟ್ಟೆ ಪರಿಸರದಲ್ಲಿ ಸಂಚಾರ ಬದಲಾವಣೆ ಮಾಡಲಾಗಿತ್ತು. ಲೈಟ್‌ಹೌಸ್‌ ಹಿಲ್‌ – ಬಾವುಟಗುಡ್ಡೆ – ಜ್ಯೋತಿ ವೃತ್ತ ಕಡೆಗೆ ಸಂಚರಿಸುವ ವಾಹನ ಗಳು ಕೆ.ಎಸ್‌. ರಾವ್‌ ರಸ್ತೆಯಾಗಿ ಹಳೆ ಬಸ್‌ ನಿಲ್ದಾಣದೊಳಗಿಂದ ತೆರಳಲು ಪರ್ಯಾಯ ವ್ಯವಸ್ಥೆ ಮಾಡಿಕೊಡ ಲಾಗಿತ್ತು. ಈಗ ಹಂಪನಕಟ್ಟೆ ಜಂಕ್ಷನ್‌ ಮುಖಾಂತರವೇ ಸಂಚರಿಸಬಹುದು. ಇನ್ನೊಂದು ಭಾಗದ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಜ್ಯೋತಿ – ಮಿಲಾಗ್ರಿಸ್‌ ಮೂಲಕ ಹಂಪನಕಟ್ಟೆ ಜಂಕ್ಷನ್‌ ಕಡೆಗೆ ಬರಲು ಅವಕಾಶ ಸದ್ಯಕ್ಕಿಲ್ಲ.

ಪರ್ಯಾಯ ವ್ಯವಸ್ಥೆಯಂತೆ ಜ್ಯೋತಿ ವೃತ್ತ ಕಡೆಯಿಂದ ಬರುವ ವಾಹನಗಳು ಮಿಲಾಗ್ರಿಸ್‌ ರಸ್ತೆ-ವೆನಾÉಕ್‌ ಆಸ್ಪತ್ರೆ ಸಮೀಪದ ರಸ್ತೆ-ರೈಲು ನಿಲ್ದಾಣ ರಸ್ತೆಯಾಗಿ ಸ್ಟೇಟ್‌ಬ್ಯಾಂಕ್‌ ಕಡೆಗೆ ಸಂಚರಿಸಬೇಕಾಗಿದೆ.

ರಥಬೀದಿ: ಹೊಸ ರಸ್ತೆ ಬಿರುಕು :  ರಥಬೀದಿಯಲ್ಲಿ ಇತ್ತೀಚೆಗೆ ನಿರ್ಮಾ ಣಗೊಂಡ ನೂತನ ಕಾಂಕ್ರೀಟ್‌ ರಸ್ತೆಯ ಕೆಲವೆಡೆ ಬಿರುಕು ಕಾಣಸಿಕೊಂಡ ಹಿನ್ನೆಲೆ ಯಲ್ಲಿ ಅದನ್ನು  ಅಗೆದು ತೇಪೆ ಹಾಕಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹಂಪನಕಟ್ಟೆ ಜಂಕ್ಷನ್‌ ರಸ್ತೆಯ ಒಂದು ಭಾಗದ ಕಾಮಗಾರಿ ಪೂರ್ಣಗೊಂಡು ಅದರಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನೊಂದು ಭಾಗದ ಕಾಮಗಾರಿ ಬಾಕಿ ಇದೆ. ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಈಗ ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿ ನಡೆಯುತ್ತಿಲ್ಲ. ಕಾಮಗಾರಿ ಮತ್ತೆ ಶೀಘ್ರ ಆರಂಭವಾಗುವ ನಿರೀಕ್ಷೆ ಇದೆ. ರಥಬೀದಿಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಸಮೀಕ್ಷೆ ನಡೆಸಲು ಎನ್‌ಐಟಿಕೆ ತಜ್ಞರಿಗೆ ತಿಳಿಸುತ್ತೇನೆ.  ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.