Mangaluru “ಭಾರತ್‌ ಜೋಡೋ ಯಾತ್ರೆ’ಯಿಂದ ಹೊಸ ಶಕ್ತಿ: ಸೆಂಥಿಲ್‌


Team Udayavani, Sep 4, 2024, 6:50 AM IST

Mangaluru “ಭಾರತ್‌ ಜೋಡೋ ಯಾತ್ರೆ’ಯಿಂದ ಹೊಸ ಶಕ್ತಿ: ಸೆಂಥಿಲ್‌

ಮಂಗಳೂರು: ರಾಹುಲ್‌ ಗಾಂಧಿ ಕೈಗೊಂಡ ಭಾರತ್‌ ಜೋಡೋ ಯಾತ್ರೆ 2029 ರ ಚುನಾವಣೆಯನ್ನು ಹೊಸ ಭರವಸೆ ಯೊಂದಿಗೆ ಎದುರಿಸುವ ಶಕ್ತಿ ನೀಡಿದೆ ಎಂದು ತಿರುವಳ್ಳೂರು ಸಂಸದ ಸಸಿಕಾಂತ್‌ ಸೆಂಥಿಲ್‌ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ, ಮಂಗ ಳೂರು ನಗರ ಮತ್ತು ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ಮಂಗಳವಾರ ಆಯೋ ಜಿಸಲಾದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಅವರು ಮಾತನಾಡಿದರು.

ಸಂವಿಧಾನವನ್ನು ಉಳಿಸಲು ಸಾಧ್ಯವಾಗು ವುದಿದ್ದರೆ ಅದು ಕಾಂಗ್ರೆಸ್‌ನಿಂದ ಮಾತ್ರ. ಗ್ರಾಮ ಮಟ್ಟದಿಂದಲೇ ಪಕ್ಷವನ್ನು ವ್ಯವಸ್ಥಿತವಾಗಿ ಮೇಲೆತ್ತುವ ಕೆಲಸ ಆಗಬೇಕು. ಆ ಕಾರ್ಯ ಈ. ಜಿಲ್ಲೆಯಿಂದಲೇ ಆರಂಭವಾಗಲಿ ಎಂದರು.

ಸಂಘಟನೆಗಾಗಿ ಕೆಲಸ
ಕಾರ್ಯಕರ್ತರ ಧ್ವನಿ ಪಕ್ಷದ ಮುಖಂಡರಿಗೆ ತಲುಪಿಸುವ ಕೆಲಸ ನಡೆಯಲಿದೆ. ಬ್ಲಾಕ್‌ ಮಟ್ಟಕ್ಕಿಂತ ಕೆಳಗಿ ನವರ ಜತೆಗೆ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಕ್ಷದಲ್ಲಿ ಸಿದ್ಧಾಂತ, ಸಂಘಟನೆ ಮತ್ತು ನಾಯಕತ್ವ ಎನ್ನುವ ಮೂರು ವಿಭಾಗವಿದೆ. ಸಂಘಟನೆ ಸಂಬಂಧ ಕಾರ್ಯ ಕರ್ತರು ಮತ್ತು ಮುಖಂಡರಲ್ಲಿ ಇರುವ ಆಂತರವನ್ನು ಸರಿಪಡಿಸಬೇಕು. ಆದ್ದರಿಂದ ನಾನು ಸಂಘಟನೆ ಸಂಬಂಧ ಕೆಲಸ ಮಾಡುವೆ ಎಂದರು.

ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ಶಾಸಕ ಅಶೋಕ್‌ ಕುಮಾರ್‌ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮುಖಂಡರಾದ ಪದ್ಮರಾಜ್‌ ಆರ್‌., ಕಣಚೂರು ಮೋನು, ರಕ್ಷಿತ್‌ ಶಿವರಾಮ್‌, ನಗರ ಬ್ಲಾಕ್‌ ಅಧ್ಯಕ್ಷ ಪ್ರಕಾಶ್‌ ಸಾಲ್ಯಾನ್‌, ದಕ್ಷಿಣ ಬ್ಲಾಕ್‌ ಅಧ್ಯಕ್ಷ ಅಬ್ದುಲ್‌ ಸಲೀಂ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಶಾಸಕ ಜೆ.ಆರ್‌. ಲೋಬೋ ಸ್ವಾಗತಿಸಿದರು. ರೋಹಿತ್‌ ಉಳ್ಳಾಲ್‌ ನಿರೂಪಿಸಿದರು.

ಮೋದಿ ಪ್ರಧಾನಿಯಾದಾಗ ಬೆಚ್ಚಿಬಿದ್ದೆ !
2002ರಿಂದಲೇ ರಾಜಕೀಯವನ್ನು ಹತ್ತಿರದಿಂದ ನೋಡುತ್ತಿದ್ದೆ. ಗೋದ್ರಾ ಗಲಭೆಗೆ ನೇರ ಕಾರಣರಾದ ವ್ಯಕ್ತಿಯೇ 2014 ರಲ್ಲಿ ಪ್ರಧಾನಿಯಾದಾಗ ಭಯ ಶುರುವಾಯಿತು. 2019ರ ಚುನಾವಣೆಯಲ್ಲಿ ಮತ್ತೆ ಬಹುಮತದಲ್ಲಿ ಆಯ್ಕೆಯಾದಾಗ ಬೆಚ್ಚಿಬಿದ್ದೆ. ಈ ರಾಜಕೀಯವನ್ನು ನಿಲ್ಲಿಸಬೇಕು ಎಂದು ಮನಸ್ಸಿನಲ್ಲಿತ್ತು. ಆದರೆ ಕಚೇರಿಯಲ್ಲಿ ರಾಜಕೀಯ ಮಾಡಿಲ್ಲ. ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದು ಪಡಿಸಿದಾಗ ನನ್ನೊಳಗಿನ ಆಕ್ರೋಶ ಹೆಚ್ಚಾಯಿತು. ಈ ವೇಳೆ ಪತ್ನಿ ಮಂಗಳೂರಿಗೆ ಬಂದಿದ್ದಳು. ಅವಳಲ್ಲಿ ಈ ಸಂಬಂಧ ಚರ್ಚಿಸಿ ರಾಜೀನಾಮೆ ಕೊಟ್ಟೆ. ಇದನ್ನು ರಾಜಕೀಯವಾಗಿ ಎದುರಿಸಬೇಕೆಂದು ಇಷ್ಟಪಟ್ಟು ಕಾಂಗ್ರೆಸ್‌ ಸೇರಿದೆ. ಪಕ್ಷವು ಹಲವು ದೊಡ್ಡ ಹೊಣೆಗಳನ್ನು ನೀಡಿದೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚನೆ ಬಂದಾಗ 15 ದಿನ ಮಾತ್ರ ಕ್ಷೇತ್ರದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ನಾನೇನು ಮಾಡಿಲ್ಲ ಜನರೇ ಅತೀ ಹೆಚ್ಚು ಬಹುಮತದಿಂದ ಗೆಲ್ಲಿಸಿದರು ಎಂದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.