ಉಪ್ಪಿನಂಗಡಿ ಪೊಲೀಸ್‌ ಠಾಣೆ ಹೊಸ ಕಟ್ಟಡ ನನೆಗುದಿಗೆ


Team Udayavani, Jul 2, 2018, 3:00 AM IST

police-station-1-7.jpg

ಉಪ್ಪಿನಂಗಡಿ: ಶತಮಾನ ಕಂಡಿದ್ದ ಉಪ್ಪಿನಂಗಡಿ ಹಳೇ ಪೊಲೀಸ್‌ ಠಾಣೆಯ ಕಟ್ಟಡವನ್ನು ಕೆಡವಿ 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಠಾಣಾ ಕಟ್ಟಡದ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನನೆಗುದಿಗೆ ಬೀಳುವಂತಾಗಿದೆ. ತ್ವರಿತಗತಿಯಲ್ಲಿ ನೂತನ ಪೊಲೀಸ್‌ ಠಾಣೆ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದೆಂದು ಭರವಸೆ ನೀಡಿ, ಎಂಟು ತಿಂಗಳ ಹಿಂದೆ ಹಳೇ ಕಟ್ಟಡವನ್ನು ಕೆಡವಲಾಗಿತ್ತು. ಪೊಲೀಸ್‌ ಠಾಣೆಯನ್ನು ತಾತ್ಕಾಲಿಕವಾಗಿ ಸನಿಹದಲ್ಲಿರುವ ವೃತ್ತ ನಿರೀಕ್ಷಕರ ವಸತಿ ಗೃಹಕ್ಕೆ ವರ್ಗಾಯಿಸಲಾಗಿತ್ತು. ಬಳಿಕ ಕರ್ನಾಟಕ ರಾಜ್ಯ ಗೃಹ ಮಂಡಳಿ ಮೂಲಕ ನೂತನ ಕಟ್ಟಡ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದ್ದು, ಅದರಂತೆ ಕುಂದಾಪುರ ಮೂಲದ ಗುತ್ತಿಗೆದಾರರು ಗೃಹ ಮಂಡಳಿಯ ಮುಖಾಂತರ ಕಾಮಗಾರಿ ನಡೆಸುವ ಗುತ್ತಿಗೆ ಪಡೆದುಕೊಂಡು ಬಹಳಷ್ಟು ವಿಳಂಬಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.


ಕಟ್ಟಡದ ಪಿಲ್ಲರ್‌ ಗುಂಡಿಗಳನ್ನು ತೋಡಿ ಕಣ್ಮರೆಯಾಗಿದ್ದ ಗುತ್ತಿಗೆದಾರರ ಕಾರ್ಯವೈಖರಿಯ ಬಗ್ಗೆ ಈ ಹಿಂದೆ ‘ಸುದಿನ’ದಲ್ಲಿ ವರದಿಗಳು ಪ್ರಕಟವಾದ ಬಳಿಕ ಪಿಲ್ಲರ್‌ ಗುಂಡಿಗಳಲ್ಲಿ ಕಬ್ಬಿಣದ ರಾಡ್‌ ಗಳನ್ನು ಅಳವಡಿಸುವ ಕಾರ್ಯವನ್ನು ಮಾಡಲಾಯಿತು. ಆದರೆ ಅಳವಡಿಸಲಾದ ಕಬ್ಬಿಣ ಪಟ್ಟಿಗಳಿಗೆ ಕಾಂಕ್ರೀಟ್‌ ಬೆಡ್‌ ಹಾಕದೇ ಗುತ್ತಿಗೆದಾರರು ಸುಮ್ಮನಾಗಿದ್ದು, ಈ ತನಕ ಕಾಮಗಾರಿ ಒಂದಿನಿತೂ ಪ್ರಗತಿ ಕಾಣದೆ ತಟಸ್ಥವಾಗಿ ಉಳಿದಿದೆ. ಈ ಮಧ್ಯೆ ಮಳೆಗಾಲ ಪ್ರಾರಂಭವಾದ ಕಾರಣದಿಂದ ಪಿಲ್ಲರ್‌ ಗುಂಡಿಗಳ ಮಣ್ಣು ಕುಸಿದು ಬಿದ್ದು, ಕಬ್ಬಿಣ ಮಣ್ಣಿನಲ್ಲಿ ಹೂತು ಹೋದಂತಿದೆ. ಅಳವಡಿಸಲಾದ ಕಬ್ಬಿಣವು ತುಕ್ಕು ಹಿಡಿದು ಸಾಮರ್ಥ್ಯ ಕುಸಿತಕ್ಕೆ ಸಿಲುಕುವ ಅಪಾಯಕ್ಕೆ ಒಳಗಾಗಿದೆ. ಇದು ಸಾಲದೆಂಬಂತೆ, ಸತತ ಸುರಿದ ಮಳೆಯಿಂದ ಪಿಲ್ಲರ್‌ ಗುಂಡಿ ತುಂಬಾ ನೀರು ನಿಂತು ಸೊಳ್ಳೆ ಉತ್ಪಾದನಾ ಕೇಂದ್ರವಾಗಿಯೂ ಪರಿವರ್ತನೆಗೊಂಡಿದೆ.

ಸರಕಾರಿ ಕಾಮಗಾರಿಯೊಂದನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಬದ್ಧತೆಯನ್ನು ತೋರದಿರುವ ಗುತ್ತಿಗೆದಾರರ ನಡೆಯಿಂದಾಗಿ ಮಳೆಗಾಲದ ಮುನ್ನ ಹೊಸ ಪೊಲೀಸ್‌ ಠಾಣೆಗೆ ಪ್ರವೇಶ ಪಡೆಯಬೇಕೆಂಬ ಕನಸು ಕಂಡಿದ್ದ ಪೊಲೀಸ್‌ ಅಧಿಕಾರಿಗಳಿಗೆ ನಿರಾಶೆ ಕಾಡಿದೆ. ಪಿಲ್ಲರ್‌ ಗುಂಡಿಯೊಳಗೆ ಸೂಕ್ತ ಕಾಂಕ್ರೀಟ್‌ ಬೆಡ್‌ ಹಾಕದೆ ಪಿಲ್ಲರ್‌ ಬಾಬ್ತು ಕಬ್ಬಿಣದ ಪಟ್ಟಿಗಳನ್ನು ಅಳವಡಿಸಿದ್ದು, ಅಳವಡಿಸಲಾದ ಕಬ್ಬಿಣವು ಕಡಿಮೆ ಸಾಂದ್ರತೆಯಿಂದ ಕೂಡಿದೆ. ತತ್ಪರಿಣಾಮ ಎಂಜಿನಿಯರಿಂಗ್‌ ವಿಭಾಗ ಅನುಮೋದಿಸುತ್ತಿಲ್ಲ ಎಂಬ ಮಾಹಿತಿಯೂ ಲಭಿಸಿದ್ದು, ಈಗ ಅಳವಡಿಸಲಾದ ಕಬ್ಬಿಣದ ರಾಡ್‌ಗಳನ್ನು ತೆರವುಗೊಳಿಸಿ ಹೆಚ್ಚಿನ ಸಾಂದ್ರತೆಯ ಕಬ್ಬಿಣದ ಸರಳುಗಳನ್ನು ಅಳವಡಿಸಬೇಕಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸ್‌ ಠಾಣೆ ಪ್ರಸಕ್ತ ಇಕ್ಕಟ್ಟಾದ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಯೋಜಿತ ನೂತನ ಠಾಣಾ ಕಟ್ಟಡವು ಉತ್ತಮ ಗುಣಮಟ್ಟದಲ್ಲಿ ತ್ವರಿತವಾಗಿ ನಿರ್ಮಾಣಗೊಂಡರೆ ನಾಗರಿಕ ಸಮಾಜಕ್ಕೆ ಅನುಕೂಲವಾಗುತ್ತದೆ ಎಂದು ಸ್ಥಳೀಯರಾದ ಯು. ರಾಜೇಶ್‌ ಪೈ ಪ್ರತಿಕ್ರಿಯಿಸಿದ್ದಾರೆ.

— ಎಂ.ಎಸ್‌. ಭಟ್‌

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.