Wenlock Hospital: ನಾಳೆ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ಉದ್ಘಾಟನೆ
Team Udayavani, Aug 14, 2024, 6:20 AM IST
ಮಂಗಳೂರು: ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಯಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ ಆ. 15ರಂದು ಸಂಜೆ 3ಕ್ಕೆ ನಡೆಯಲಿದೆ ಎಂದು ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕಿ ಡಾ| ಜೆಸಿಂತ ಡಿಸೋಜಾ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ಸ್ಪೀಕರ್ ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್. ಅವರು ಉಪಸ್ಥಿತಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಉದ್ಘಾಟಿಸುವರು.ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಸಚಿವ ದಿನೇಶ್ ಅವರು ಸ್ಮಾರ್ಟ್ ಸಿಟಿಯಿಂದ 7 ಕೋಟಿ ರೂ. ವೆಚ್ಚದ ಆಧುನಿಕ ವೈದ್ಯಕೀಯ ಯಂತ್ರೋಪ ಕರಣಗಳನ್ನು ಒದಗಿಸಿದ್ದಾರೆ. ಸರಕಾರದ ವತಿಯಿಂದ 2 ಕೋಟಿ ರೂ. ಹಾಗೂ ಕೆಎಂಸಿ ವತಿಯಿಂದ 4 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.
56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಸರ್ಜಿಕಲ್ ಕಟ್ಟಡವು ತಳ, ನೆಲ ಸೇರಿ 7 ಅಂತಸ್ತು ಗಳನ್ನು ಹೊಂದಿದೆ. 250 ಹಾಸಿಗೆಗಳ ಸೌಲಭ್ಯವಿದ್ದು, 4ನೇ ಅಂತಸ್ತಿನವರೆಗೆ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ರೇಡಿಯಾಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರ ಚಿಕಿತ್ಸಾ ಕೊಠಡಿಗಳಿವೆ ಎಂದು ಅವರು ವಿವರಿಸಿದರು.
ಡಾ| ನವೀನ್, ಡಾ| ಸದಾನಂದ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.