ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ


Team Udayavani, May 31, 2023, 9:43 AM IST

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಮಂಗಳೂರು: ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ  ಬುಧವಾರ ಬೆಳಗ್ಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವೇಣೂರು ಸೇರಿ ಒಟ್ಟು 16 ಕಡೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದ.ಕ ಜಿಲ್ಲೆಯ 16 ಕಡೆಗಳಲ್ಲಿ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿ,ಮನೆ, ಕಚೇರಿ,ಹಾಗೂ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲ ಸಮಯದಿಂದ ಎನ್‌ ಐಎ ದಕ್ಷಿಣ ಭಾರತದ ಪಿಎಫ್ ಐ ಹವಾಲಾ ಹಣ ಜಾಲ ಭೇದಿಸುತ್ತಿದೆ. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧೆಡೆ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ.

ಎಲ್ಲೆಲ್ಲಿ ದಾಳಿ?: ಬೆಳ್ತಂಗಡಿ ತಾಲೂಕಿನ ಎರಡು ಕಡೆ ,ವೇಣೂರು ಹಾಗೂ ಉರುವಾಲುನಲ್ಲಿ ಎನ್ ಐಎ ದಾಳಿ ನಡಸಿದ್ದು, ಉರುವಾಲು ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಮಹಮ್ಮದ್ ಕೈಸ್ ಮನೆಗೆ ದಾಳಿ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಬೆಳ್ತಂಗಡಿ ಪೆರಿಂಜೆಯ ಬದ್ರುದ್ದೀನ್ ಎಂಬಾತನ ಮನೆ,ಮೂಡಬಿದ್ರೆ ಪಟ್ಟಾಡಿಯಲ್ಲಿ ಟೈಲ್ಸ್ ಅಂಗಡಿ ಹೊಂದಿರುವ ಬದ್ರುದ್ದೀನ್ ಎಂಬಾತನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪುಂಜಾಲಕಟ್ಟೆ ಪೊಲೀಸರು ಹಾಗೂ ವೇಣೂರು ಪೊಲೀಸರು ಎನ್.ಐ.ಎ ದಾಳಿಯ ಮನೆಗೆ ಭದ್ರತೆ ಒದಗಿಸಿದ್ದಾರೆ.

ಇದನ್ನೂ ಓದಿ: Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬಿಹಾರದ  ಪಾಟ್ನಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣದ ಜಾಡನ್ನು ಹಿಡಿದು ಈ ದಾಳಿಯನ್ನು ನಡೆಸಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಎನ್‌ ಐಎ ದಾಳಿ ನಡೆಸಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್, ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ.  ಅವರನ್ನು ಈ ಸಂಬಂಧ ಬಂಧಿಸಿತ್ತು.

ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆ ಪತ್ತೆಹಚ್ಚಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.