ಫಿಟ್ನೆಸ್ ವಿಷಯದಲ್ಲಿ ರಾಜಿ ಇಲ್ಲ: ಡಾ| ಬೋರಲಿಂಗಯ್ಯ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ಧ್ವಜ, ಕಲ್ಯಾಣ ದಿನಾಚರಣೆ
Team Udayavani, Apr 3, 2024, 1:02 AM IST
ಮಂಗಳೂರು: ಪೊಲೀಸ್ ಅಧಿ ಕಾರಿಗಳು ತಮ್ಮ ಫಿಟ್ನೆಸ್ ವಿಷಯದಲ್ಲಿ ರಾಜಿ ಯಾಗುವಂತಿಲ್ಲ. ತರಬೇತಿ ಅವಧಿಯಲ್ಲಿ ಕಲಿಸಿಕೊಟ್ಟ ವ್ಯಾಯಾಮಗಳನ್ನು ಸೇವಾ ಅವಧಿಯಲ್ಲೂ ನಿತ್ಯವೂ ಮಾಡುವ ಮೂಲಕ ದೈಹಿಕವಾಗಿ ಸದೃಢರಾಗಿರಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಉಪಮಹಾ ನಿರೀಕ್ಷಕ ಡಾ| ಎಂ.ಬಿ. ಬೋರಲಿಂಗಯ್ಯ ಹೇ ಳಿದರು.
ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾದ “ಪೊಲೀಸ್ಧ್ವಜ ದಿನಾಚರಣೆ’ ಮತ್ತು “ಕಲ್ಯಾಣ ದಿನಾ ಚರಣೆ’ಯಲ್ಲಿ ಅವರು ಮಾತನಾಡಿದರು.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ನಗರ ಪೊಲೀಸ್ನ ಐವರು ಸಿಬಂದಿ ಸಾವನ್ನಪ್ಪಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದೇ ಸಾವಿಗೆ ಕಾರಣ ಎಂದರು.
ಎಸ್ಪಿ ಸಿ.ಬಿ. ರಿಷ್ಯಂತ್ ಮಾತನಾಡಿದರು. ನಿವೃತ್ತ ಪೊಲೀಸ್ ನಿರೀಕ್ಷಕ ಮಧುಸೂದನ್ ಎನ್. ರಾವ್ ಮುಖ್ಯ ಅತಿಥಿ ಯಾಗಿದ್ದರು. ಕಳೆದ ಸಾಲಿನಲ್ಲಿ ನಿವೃತ್ತರಾದ 52 ಮಂದಿ ಪೊಲೀಸ್ಅಧಿಕಾರಿ ಮತ್ತು ಸಿಬಂದಿಯನ್ನು ಸಮ್ಮಾನಿಸಲಾಯಿತು. ಪೊಲೀಸ್ ಧ್ವಜದ ಸ್ಟ್ಯಾಂಪ್ ಬಿಡುಗಡೆಗೊಳಿಸಲಾಯಿತು. ಕೆಎಸ್ಆರ್ಪಿ 7ನೇ ಪಡೆ ಕಮಾಡೆಂಟ್ ಬಿ.ಎಂ. ಪ್ರಸಾದ್, ಕರಾವಳಿ ಪಡೆ ಡಿಐಜಿ ಪ್ರವೀಣ್ ಕುಮಾರ್ ಮಿಶ್ರಾ ಇದ್ದರು.
ಕುಟುಂಬದ ಜತೆ ಇರಿ
ಸಿಬಂದಿ ತಮ್ಮ ಕುಟುಂಬದೊಂದಿಗೆ ರಜಾಕಾಲವನ್ನು ಕಳೆಯುವುದಾದರೆ ರಜೆ ಅರ್ಜಿಗಳಲ್ಲಿ ಸ್ಪಷ್ಟವಾಗಿ ತಿಳಿಸಿ. ತುರ್ತು ಸಂದರ್ಭ ಹೊರತು ಅಂಗೀಕರಿಸಲಾಗು ತ್ತದೆ. ಸಿಬಂದಿ ವರ್ಷದಲ್ಲಿ ಎರಡು ಬಾರಿ ಯಾದರೂ ತಮ್ಮ ಕುಟುಂಬದೊಂದಿಗೆ ರಜಾಕಾಲವನ್ನು ಕಳೆಯಬೇಕು ಎಂದು ಡಾ| ಬೋರಲಿಂಗಯ್ಯ ಹೇಳಿದರು.
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಪೊಲೀಸ್ ಮೈದಾನದಲ್ಲಿ (ಚಂದು ಮೈದಾನ) ಪೊಲೀಸ್ ಧ್ವಜ ದಿನ ಆಚರಿಸಲಾಯಿತು.
ನಿವೃತ್ತ ಪೊಲೀಸ್ ನಿರೀಕ್ಷಕ ಸೋಮಪ್ಪ ನಾಯ್ಕ ಅವರು ಅತಿಥಿಯಾಗಿ ಪಾಲ್ಗೊಂಡು ಪೊಲೀಸ್ ಧ್ವಜ ವಂದನೆ ಸ್ವೀಕರಿಸಿ ಮಾತನಾಡಿ, ಎಲ್ಲ ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು ನಿತ್ಯ ನಿರ್ದಿಷ್ಟ ಸಮಯದವರೆಗೆ ಮಾತ್ರ ಮಾಡಿ ಕಚೇರಿಗೆ ಬೀಗ ಹಾಕುತ್ತಾರೆ. ಆದರೆ ಪೊಲೀಸ್ ಠಾಣೆಗಳು ಯಾವಾಗಲೂ ತೆರೆದಿರುತ್ತದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ, ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ತರ ಹೊಣೆ ನಮ್ಮದು. ಪೊಲೀಸ್ ಇಲಾಖೆ, ಅಧಿಕಾರಿ ಸಿಬಂದಿ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಬದಿಗಿರಿಸಿ ಕರ್ತವ್ಯಕ್ಕಾಗಿ ಜೀವನ ಮುಡಿಪಾಗಿಡುತ್ತಾರೆ ಎಂದರು.
ಕರಾವಳಿ ಕಾವಲು ಪಡೆ ಅಧೀಕ್ಷಕ ಮಿಥುನ್ ಎಚ್.ಎನ್.ಮಾತನಾಡಿ, ಪೊಲೀಸ್ ಧ್ವಜ ದಿನಾಚರಣೆ ಪೊಲೀಸರಿಗೆ, ಇಲಾಖೆಗೆ ನೀಡುವ ಗೌರವ. ಈ ಧ್ವಜ ಮಾರಾಟದಿಂದ ಬಂದ ಹಣವನ್ನು ಉದಾತ್ತ ಉದ್ದೇಶಕ್ಕಾಗಿ ಬಳಸಲಾಗುತ್ತದೆ ಎಂದರು. ಅತಿಥಿಗಳು ಪೊಲೀಸ್ ಧ್ವಜ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದರು. ಪೊಲೀಸ್ ಕಲ್ಯಾಣ ನಿಧಿಗೆ ಕೊಡುಗೆಯನ್ನು ಸಂಗ್ರಹಿಸಲಾಯಿತು. ಈ ನಿಧಿಯ ಫಲಾನುಭವಿಗಳಿಗೆ ವಿತ್ತೀಯ ಸವಲತ್ತು ವಿತರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಕೆ. ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸಿದ್ದಲಿಂಗಪ್ಪ ವಂದಿಸಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಎಪಿಸಿ ಯೋಗೀಶ್ ನಾಯ್ಕ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.