ಹಕ್ಕುಪತ್ರ ಸಿಕ್ಕಿದರೂ ಸೂರಿಲ್ಲ 


Team Udayavani, Dec 9, 2017, 12:43 PM IST

09-39.jpg

ಮಂಗಳೂರ: ಹಕ್ಕು ಪತ್ರ ಸಿಕ್ಕಿದರೂ ಮನೆ ದೊರಕದೇ ಸಂಕಷ್ಟದಲ್ಲಿದ್ದ 72 ವರ್ಷದ ಸರೋಜಮ್ಮ ಅವರಿಗೆ ಕೊನೆಗೂ ಜಿಲ್ಲಾಧಿಕಾರಿ ಕಚೇರಿಯಲ್ಲೇ ನ್ಯಾಯ ಒದಗಿಸುವ ಭರವಸೆ ಸಿಕ್ಕಿದೆ. 

ಮೂಲತಃ ಉಡುಪಿಯವರಾದ ಸರೋಜಮ್ಮ ಊರು-ಕೇರಿ ಅಲೆದು ಜೀವನ ಸಾಗಿಸುತ್ತಿದ್ದಾರೆ. ಇವರ ಪತಿ ದೂರವಾಗಿದ್ದು, ಪುತ್ರಿಯರು ಯೋಗಕ್ಷೇಮ ನೋಡುತ್ತಿಲ್ಲ. ಪುತ್ರ ಮಾತ್ರ ಆಸರೆಯಾಗಿದ್ದಾರೆ. ತಮ್ಮ ಕಷ್ಟದ ಹಿನ್ನೆಲೆಯಲ್ಲಿ ನ್ಯಾಯ ನೀಡುವಂತೆ ಕೋರಿ ಸರೋಜಮ್ಮ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಶುಕ್ರವಾರ ಬೆಳಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಪುತ್ರ ಸುಬ್ರಹ್ಮಣ್ಯನ ಜೊತೆಗೆ ಸರೋಜಮ್ಮ ಆಗಮಿಸಿದ್ದರು. ಸರೋಜಮ್ಮಗೆ ನಡೆದಾಡಲು ಕಷ್ಟವಾಗುತ್ತಿದ್ದರಿಂದ ಪುತ್ರ ಸುಬ್ರಹ್ಮಣ್ಯ ಅವರು ತಾಯಿಯನ್ನು ಎತ್ತಿಕೊಂಡೇ ಕಚೇರಿ ಮೆಟ್ಟಿಲು ಹತ್ತಿಸಿದ್ದರು. ಆದರೆ ಮಧ್ಯಾಹ್ನವಾದರೂ ಜಿಲ್ಲಾಧಿಕಾರಿ ಭೇಟಿ ಸಾಧ್ಯವಾಗಲಿಲ್ಲ. ಈ ವೇಳೆ ಸಭೆಯೊಂದರ ಸುದ್ದಿಗೆಂದು ಆಗಮಿಸಿದ ಮಾಧ್ಯಮ ಮಂದಿ ಅವರ ವಿಚಾರ ತಿಳಿದುಕೊಂಡಿದ್ದು, ಅಪರ ಜಿಲ್ಲಾಧಿಕಾರಿ ಕುಮಾರ್‌ ಅವರ ಗಮನಕ್ಕೆ ತಂದರು. ಬಳಿಕ ಖುದ್ದು ಕುಮಾರ್‌ ಅವರೇ ಆಗಮಿಸಿ ಅಹವಾಲು ಆಲಿಸಿದರು. 

ಜತೆಗೆ ಈ ಬಗ್ಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯ ಜತೆಗೆ ಮಾತನಾಡಿದ ಕುಮಾರ್‌ ಅವರು, ಸರೋಜಮ್ಮ ಅವರಿಗೆ ಬಸವ ವಸತಿ ಯೋಜನೆಯಲ್ಲಿ ಕೂಡಲೇ ನಿವೇಶನ ಮಂಜೂರುಗೊಳಿಸುವಂತೆ ಸೂಚನೆ ನೀಡಿದರು. ವಿಶೇಷ ಪ್ರಕರಣವೆಂದು ಪರಿಗಣಿಸಿ ತ್ವರಿತವಾಗಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸೂಚಿಸಿದರು. 

ಏತನ್ಮಧ್ಯೆ ಅಸ್ವಸ್ಥಗೊಂಡ ಸರೋಜಮ್ಮಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅಂಬ್ಯುಲೆನ್ಸ್‌ ತರಿಸಿ ಅಪರ ಜಿಲ್ಲಾಧಿಕಾರಿ ಕುಮಾರ್‌ ವ್ಯವಸ್ಥೆ ಮಾಡಿದರು. ಆಧಾರ್‌ ನೋಂದಣಿ ಸಿಬ್ಬಂದಿ ಆಸ್ಪತ್ರೆಗೆ ತೆರಳಿ, ಬಯೋಮೆಟ್ರಿಕ್‌ ಪಡೆದು ಆಧಾರ್‌ ನೋಂದಣಿ ಮಾಡಿದರು. ಸರೋಜಮ್ಮ ಪ್ರಕರಣ ಬಗ್ಗೆ ಬೆಳ್ತಂಗಡಿ ಇಒ ಹಾಗೂ ಮಡಂತ್ಯಾರು ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಗೆ ಸೂಕ್ತವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಯಿತು.  

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.