![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 8, 2019, 6:10 AM IST
ಮಂಗಳೂರು: ಮಂಗಳೂರಿಗೆ ನೀರು ಒದಗಿಸುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣದಲ್ಲಿ ಕುಸಿತ ಹಿನ್ನೆಲೆಯಲ್ಲಿ ರೇಷನಿಂಗ್ ನಿಯಮದಂತೆ ಮೇ 8ರಂದು ಕೂಡ ಮಂಗಳೂರು ನಗರಕ್ಕೆ ನೀರು ಸರಬರಾಜು ಸ್ಥಗಿತವಾಗಲಿದೆ. ಮಂಗಳವಾರ ರೇಷನಿಂಗ್ ಪರಿಣಾಮ ನಗರದಲ್ಲಿ ನೀರಿಲ್ಲದೆ ಜನರು ಸಮಸ್ಯೆ ಎದುರಿಸಿದರು.
ನಿಯಮದ ಪ್ರಕಾರ, ಮೇ 7ರಂದು ಬೆಳಗ್ಗೆ 6 ಗಂಟೆಯಿಂದ ಮೇ 9ರ ಬೆಳಗ್ಗೆ 6 ಗಂಟೆಯವರೆಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗುತ್ತದೆ. ಮೇ 9ರ ಬೆಳಗ್ಗೆ 6 ಗಂಟೆಯಿಂದ ಮೇ 13ರ ಬೆಳಗ್ಗೆ 6 ಗಂಟೆಯವರೆಗೆ 96 ತಾಸುಗಳ ಕಾಲ ನೀರು ಸರಬರಾಜು ಇರಲಿದೆ.
ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ದಿನಕ್ಕೆ 5 ರಿಂದ 5 ಸೆಂ.ಮೀ ಕುಸಿಯುತ್ತಿದೆ. ಸೋಮವಾರ ಬೆಳಗ್ಗೆ 4.38 ಮೀ. ಇದ್ದ ನೀರಿನ ಮಟ್ಟ ಸಂಜೆಯ ವೇಳೆಗೆ 4.34 ಮೀ.ಗೆ ಇಳಿದಿತ್ತು. ಮಂಗಳವಾರ ಡ್ಯಾಂನಲ್ಲಿ ನೀರಿನ ಪ್ರಮಾಣ 4.27 ಮೀ. ಇದೆ. ಪ್ರಸ್ತುತ ರೂಪಿಸಿರುವ ನೀರಿನ ರೇಷನಿಂಗ್ ಸ್ವರೂಪ ಮೇ 21ರ ವರೆಗೆ ಜಾರಿಯಲ್ಲಿರುತ್ತದೆ.
ರೇಷನಿಂಗ್ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗದಲ್ಲಿರುವ ಕೊನೆಯ ಹಾಗೂ ಎತ್ತರದ ಪ್ರದೇಶಗಳಿಗೆ ನೀರು ಲಭ್ಯತೆ ದುಸ್ತರವಾಗಿದ್ದು ಮಂಗಳೂರಿನ ಜನತೆ ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುವಂತಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.