ಕಾಂಗ್ರೆಸ್‌ಗೆ ಲಾಭವಾಗದ ಹೊಂದಾಣಿಕೆ; ಬೆಂಬಲ


Team Udayavani, May 24, 2019, 6:10 AM IST

congress-logo

ಮಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿಯೂ ಬಿಜೆಪಿಯನ್ನು ಮಣಿಸುವುದಕ್ಕೆ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮತ್ತು ಅತ್ತ ಸಿಪಿಎಂ, ಸಿಪಿಐ ಸೇರಿದಂತೆ ಎಡಪಕ್ಷಗಳಿಂದ ಪರೋಕ್ಷವಾಗಿ ಬೆಂಬಲ ಗಳಿಸಿದ್ದರೂ ಕಾಂಗ್ರೆಸ್‌ಗೆ ಅದರಿಂದ ಯಾವುದೇ ಲಾಭವಾಗಿಲ್ಲ ಎನ್ನುವುದು ಗಮನಾರ್ಹ.

ಈ ಬಾರಿಯ ಫಲಿತಾಂಶವನ್ನು ಅವಲೋಕಿಸಿದರೆ, ಕಾಂಗ್ರೆಸ್‌ ಪರಾಭವದ ಅಂತರ ಕಳೆದ ಬಾರಿಯ ಚುನಾವಣೆಗಿಂತಲೂ ಜಾಸ್ತಿಯಾಗಿದೆ. ಇದು ಪಕ್ಷದ ನಾಯಕರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 2009 ಮತ್ತು 2014ರ ಚುನಾವಣೆಗಳಲ್ಲಿ ಸಿಪಿಎಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. 2009ರಲ್ಲಿ ಸಿಪಿಎಂ ಅಭ್ಯರ್ಥಿ ಬಿ. ಮಾಧವ ಅವರು 18,328 ಮತ್ತು 2014ರಲ್ಲಿ ಯಾದವ ಶೆಟ್ಟಿ 9394 ಮತಗಳನ್ನು ಗಳಿಸಿದ್ದರು. ಈ ಬಾರಿ ಸ್ಪರ್ಧೆ ಮಾಡದೆ, ಕೋಮವಾದಿ ಶಕ್ತಿಗಳನ್ನು ಸೋಲಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪ್ರಬಲ ಜಾತ್ಯತೀತ ಪಕ್ಷವನ್ನು ಬೆಂಬಲಿಸುವುದಾಗಿ ಎಡಪಕ್ಷಗಳು ಕೂಡ ಘೋಷಣೆ ಮಾಡಿದ್ದವು. ಆ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು. ಅಲ್ಲದೆ ರಾಜ್ಯದಲ್ಲಿ ಮೈತ್ರಿಯ ಭಾಗವಾಗಿ, ಈ ಹಿಂದೆ ಪ್ರತ್ಯೇಕ ಸ್ಪರ್ಧಿಸಿದ್ದ ಜೆಡಿಎಸ್‌ ಕೂಡ ಕಾಂಗ್ರೆಸ್‌ ಬೆಂಬಲಿಸಿತ್ತು.

ಮಂಗಳೂರು ಲೋಕಸಭಾ ಕ್ಷೇತ್ರ, ಪುನರ್‌ ವಿಂಗಡನೆಯ ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ರೂಪುಗೊಂಡವರೆಗಿನ 1957ರಿಂದ 2014ರ ವರೆಗಿನ ಒಟ್ಟು 16 ಚುನಾವಣೆಗಳಲ್ಲಿ ಸಿಪಿಐ ಎರಡು ಬಾರಿ ಮತ್ತು ಸಿಪಿಎಂ 6 ಬಾರಿ ಸೇರಿ ಒಟ್ಟು 8 ಬಾರಿ ಸ್ಪರ್ಧೆ ಮಾಡಿತ್ತು. 1957ರ ಚುನಾವಣೆಯಲ್ಲಿ ಸಿಪಿಐಯ ಕೃಷ್ಣ ಶೆಟ್ಟಿ ಅವರು ಕಾಂಗ್ರೆಸ್‌ಗೆ ನಿಕಟ ಸ್ಪರ್ಧೆ ನೀಡಿದ್ದರು.

ಬಲ ವೃದ್ಧಿಸಿಕೊಂಡ ಎಸ್‌ಡಿಪಿಐ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಮತ ಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಗಮನ ಸೆಳೆದಿದೆ. 2014 ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹನೀಫ್‌ ಖಾನ್‌ ಕೋಡಾಜೆಯವರು 27,254 ಮತಗಳನ್ನು ಗಳಿಸಿದ್ದರು. ಈ ಬಾರಿ ಮಹಮ್ಮದ್‌ ಇಲ್ಯಾಸ್‌ ಸ್ಪರ್ಧಿಸಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಮತಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ಲೆಕ್ಕಾಚಾರ ಇತ್ತು. ಕಳೆದ ಲೋಕಸಭೆ ಚುನಾವಣೆಗಿಂತ ಈ ಸಲ ಎಸ್‌ಡಿಪಿಐ ಹೆಚ್ಚಿನ ಸಂಖ್ಯೆ ಮತಗಳನ್ನು ಗಳಿಸಿವೆ. ಆದರೆ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕುವುದಕ್ಕೆ ಎಸ್‌ಡಿಪಿಐ ಪಕ್ಷದಿಂದ ಸಾಧ್ಯವಾಗಿಲ್ಲ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.