ಅಡಿಕೆ; ಅಫಿದವಿತ್ ವಾಪಸಿಗೆ ಕ್ರಮ: ಸಚಿವ ಹರ್ಷವರ್ಧನ್
Team Udayavani, Jul 18, 2019, 5:45 AM IST
ಮಂಗಳೂರು: ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯುಪಿಎ ಸರಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಫಿದವಿತ್ ಹಿಂದಕ್ಕೆ ಪಡೆಯುವ ಬಗ್ಗೆ ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷವರ್ಧನ್ ಭರವಸೆ ನೀಡಿದ್ದಾರೆ.
ಈ ಅಫಿದವಿತ್ ಅನ್ನು ಉಲ್ಲೇಖ ಮಾಡಿ ಇತ್ತೀಚೆಗೆ ಲೋಕಸಭೆಯಲ್ಲಿ ಸಚಿವರು ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ, ಸಂಸದ ನಳಿನ್ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಡಿಕೆಯಿಂದ ದುಷ್ಪರಿಣಾಮ ಇಲ್ಲ ಎಂದು ವಿವರಿಸಿದರು. ಜತೆಗೆ ಕೇಂದ್ರ ತೋಟ ಬೆಳೆಗಳ ಸಂಶೋಧನ ಸಂಸ್ಥೆಯ ಅಧ್ಯಯನ ವರದಿಯ ಮಾಹಿತಿಯನ್ನು ಸಚಿವರ ಗಮನಕ್ಕೆ ತರಲಾಗಿದೆ.
ಈ ಬಗ್ಗೆ ಸ್ಪಂದಿಸಿದ ಸಚಿವರು ಅಫಿದವಿತ್ ಹಿಂಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ನಿಯೋಗದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ, ಜಿ.ಎಂ. ಸಿದ್ದೇಶ್ವರ್, ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.