“ಉಡುಪಿ ಸೀರೆ”ಗೆ ಅಡಿಕೆ ಚೊಗರಿನ ವರ್ಣಛಾಯೆ!


Team Udayavani, Jul 28, 2023, 7:43 AM IST

ADIKE SEERE

ಮಂಗಳೂರು: ಅಡಿಕೆಯ ಚೊಗರನ್ನು ಬಟ್ಟೆಗಳಿಗೆ ನೈಸರ್ಗಿಕ ಬಣ್ಣವಾಗಿ ಬಳಸುವ ವಿಧಾನ ವರ್ಷದಿಂದ ವರ್ಷಕ್ಕೆ ಜನಮನ್ನಣೆ ಗಳಿಸುತ್ತಿದೆ. ಪ್ರಸ್ತುತ ಕಿನ್ನಿಗೋಳಿಯಲ್ಲಿ ತಯಾರಾಗುವ ಹೆಸರಾಂತ “ಉಡುಪಿ ಸೀರೆ”ಗಳೂ ಈಗ ಅಡಿಕೆ ಚೊಗರಿನ ವರ್ಣಗಳೊಂದಿಗೆ ಹೊಸ ರೂಪಗಳಿಸಿವೆ.

ನಾಲ್ಕಾರು ತಿಂಗಳಿನಿಂದ ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ನೇಕಾರರು ಕೈಮಗ್ಗದ ಬಟ್ಟೆಗಳಿಗೆ ಅಡಿಕೆ ಚೊಗರಿನ ಬಣ್ಣ ನೀಡುವ ಪ್ರಯೋಗ ದಲ್ಲಿ ತೊಡಗಿಸಿಕೊಂಡಿದ್ದು ಯಶ ಸಾಧಿಸಿದ್ದಾರೆ.

ಆಧುನೀಕರಣದ ಭರಾಟೆಯಲ್ಲಿ ಮೂಲೆಗುಂಪಾಗುತ್ತಿದ್ದ ಉಡುಪಿ ಸೀರೆಗಳಿಗೆ ಕದಿಕೆ ಟ್ರಸ್ಟ್‌ ಸಹಕಾರ ವನ್ನಿತ್ತು ಮತ್ತೆ ಹಿಂದಿನ ಜನಪ್ರಿಯತೆ ಗಳಿಸಿಕೊಳ್ಳುವಲ್ಲಿ ನೆರವಾಗಿದೆ. ಈಗ ಉಡುಪಿ ಸೀರೆಯನ್ನು ಅದರಲ್ಲೂ ನೈಸರ್ಗಿಕ ಬಣ್ಣ ಬಳಸಿರುವ ಕೈಮಗ್ಗದ ಸೀರೆಯನ್ನು ಗ್ರಾಹಕರು ಕಾದಿರಿಸಿ ಕಾಯುವ ಪರಿಸ್ಥಿತಿ ಇದೆ. ಇಳಕಲ್‌ ಸೀರೆಗಳಲ್ಲಿ ಕೂಡ ಅಡಿಕೆ ಚೊಗರು ಬಳಸಿ ಯಶಸ್ವಿಯಾಗಿದ್ದಾರೆ.

ನಾಲ್ಕಾರು ಛಾಯೆ
ತಾಳಿಪಾಡಿ ಸಂಘವು ಅಡಿಕೆಯ ಚೊಗರು ಬಳಸಿಕೊಂಡು ಕಂದು, ಕೆಂಪು ಸಹಿತ ನಾಲ್ಕಾರು ಛಾಯೆ ಗಳುಳ್ಳ ಸೀರೆಗಳನ್ನು ಸಿದ್ಧಪಡಿಸಿದೆ. ಒಂದೇ ದ್ರಾವಣವನ್ನು 2-3 ಬಾರಿ ಬಳಸಬಹುದು. ಪರಿಸರ ಸ್ನೇಹಿಯಾಗಿರುವ ಇದರಲ್ಲಿ ನೂಲನ್ನು ಪ್ರತೀ ಬಾರಿ ಸಂಸ್ಕರಿಸಿದಾಗಲೂ ಛಾಯೆ ಬದಲಾಗುತ್ತದೆ ಎನ್ನುತ್ತಾರೆ ಕದಿಕೆ ಟ್ರಸ್ಟ್‌ನ ಮಮತಾ ರೈ.

ಹಿಂದಿನಿಂದಲೂ ಉಡುಪಿ ಸೀರೆಗಳಿಗೆ ನೈಸರ್ಗಿಕ ಬಣ್ಣಗಳನ್ನೇ ಬಳಸಲಾಗುತ್ತಿದೆ. ಉದಾಹರಣೆಗೆ ಮಂಜಿಷ್ಟ ಗಿಡದ ಬೇರಿನ ಪುಡಿಯಿಂದ ಕೆಂಪು, ನೇರಳೆ, ದಾಳಿಂಬೆ ಸಿಪ್ಪೆಯಿಂದ ಹಳದಿ, ಬೂದು, ಇಂಡಿಗೋದಿಂದ ನೀಲಿ, ಕಾಡು ಬಾದಾಮಿ ಗಿಡದ ಎಲೆಗಳಿಂದ ಹಳದಿ, ಚೆಂಡುಹೂಗಳಿಂದ ಹಳದಿ ವರ್ಣಗಳನ್ನು ಸಿದ್ಧಪಡಿಸಲಾಗುತ್ತದೆ. ಅಡಿಕೆಯ ಚೊಗರು ಅದಕ್ಕೆ ಹೊಸ ಸೇರ್ಪಡೆ. ನೀರುಳ್ಳಿಯ ವರ್ಣ, ಕೆಂಪು, ಗಾಢ ಕಂದು ಬಟ್ಟೆಯನ್ನು ಇದರಲ್ಲಿ ಸಿದ್ಧಪಡಿಸಬಹುದು. ಮಮತಾ ರೈ ಮಾರ್ಗದರ್ಶನದಲ್ಲಿ ವಾಸುದೇವ ಶೆಟ್ಟಿಗಾರ್‌ ಹಾಗೂ ದಿನೇಶ್‌ ಶೆಟ್ಟಿಗಾರ್‌ ಅಡಿಕೆ ಚೊಗರಿನ ಪುಡಿಯಿಂದ ಬಣ್ಣಗಳನ್ನು ಸಿದ್ಧಪಡಿಸಿದರೆ, ಶಾರದಾ ಶೆಟ್ಟಿಗಾರ್‌ ಮತ್ತು ಸಾಧನ ಶೆಟ್ಟಿಗಾರ್‌ ಸೀರೆಗಳನ್ನು ನೇಯ್ದಿದ್ದಾರೆ.

ನೈಸರ್ಗಿಕ ಬಣ್ಣ ಬಳಕೆ ಬಗ್ಗೆ ನಬಾರ್ಡ್‌ ಹಾಗೂ ಇತರ ಸಂಸ್ಥೆಗಳಿಂದ ನೇಕಾರರಿಗೆ ನಿರಂತರ ತರಬೇತಿ ನೀಡಲಾಗುತ್ತಿದೆ. ಈಗ ಪೂರ್ಣ ಪ್ರಮಾಣದಲ್ಲಿ ಒಮ್ಮೆ ಅಡಿಕೆ ಚೊಗರಿನ ಸೀರೆ ತಯಾರಿಸುತ್ತಿದ್ದು, ಗ್ರಾಹಕರಿಂದ ಈಗಾಗಲೇ ಬೇಡಿಕೆ ವ್ಯಕ್ತವಾಗಿದೆ. ಸದ್ಯದಲ್ಲೇ ಮಾರುಕಟ್ಟೆಗೆ ತರಲಿದ್ದೇವೆ.
– ಮಾಧವ ಶೆಟ್ಟಿಗಾರ್‌, ಅಧ್ಯಕ್ಷರು ತಾಳಿಪಾಡಿ ನೇಕಾರರ ಸೇವಾ ಸಹಕಾರಿ ಸಂಘ

ಏನಿದು ಅಡಿಕೆ ಚೊಗರು?
ಮಲೆನಾಡಿನ ಭಾಗಗಳಲ್ಲಿ (ಮುಖ್ಯವಾಗಿ ಶಿರಸಿ, ಸಿದ್ದಾಪುರ, ಯಲ್ಲಾಪುರ, ಸಾಗರ ತಾಲೂಕು) ಅಡಿಕೆ ಸಂಸ್ಕರಣೆ ವೇಳೆ ಉತ್ಪಾದನೆ ಯಾಗುವ ದ್ರವರೂಪದ ಪದಾರ್ಥವಿದು. ಬಿಸಿಲಿಗಿಟ್ಟು ಒಣಗಿಸಿದಾಗ ಮಂದರೂಪಕ್ಕೆ ಬರುತ್ತದೆ. ಗಾಢ ಕಂದು ಬಣ್ಣ. ಚೊಗರನ್ನು ಪುಡಿ ರೂಪಕ್ಕೆ ಪರಿವರ್ತಿಸಿ ದಾಸ್ತಾನು ಮಾಡಲಾಗುತ್ತದೆ. ಇದು ಸುದೀರ್ಘ‌ ಕಾಲ ಬಣ್ಣ ಕಳೆದುಕೊಳ್ಳದಿರುವ ಕಾರಣ ನೈಸರ್ಗಿಕ ಬಣ್ಣವಾಗಿ ಹೆಚ್ಚಿನ ಮನ್ನಣೆ ಪಡೆದಿದೆ ಎನ್ನುತ್ತಾರೆ ಹಿರಿಯ ಕೃಷಿ ಪತ್ರಕರ್ತ ಶ್ರೀ ಪಡ್ರೆ.

 ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.