Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′
Team Udayavani, Oct 1, 2024, 12:30 AM IST
ಮಂಗಳೂರು: ಯಕ್ಷಕಲಾ ಪೊಳಲಿ ಅಶ್ರಯದಲ್ಲಿ 29ನೇ ವರ್ಷದ “ಪೊಳಲಿ ಯಕ್ಷೋತ್ಸವ-2024′, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ, ಬಯಲಾಟ ಅ.5ರಂದು ಪೊಳಲಿ ದೇವಸ್ಥಾನದ ರಾಜಾಂಗಣದಲ್ಲಿ ಜರಗಲಿದೆ.
ಈ ಬಾರಿಯ ಪೊಳಲಿ ಯಕ್ಷೋ ತ್ಸವ ಪ್ರಶಸ್ತಿ ಯನ್ನು ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿ ಅವರಿಗೆ ಪ್ರದಾನ ಮಾಡಲಾಗುವುದು. ಅರ್ಥಧಾರಿ ಶಂಭು ಶರ್ಮ ವಿಟ್ಲ, ಸುರೇಂದ್ರ ಮಲ್ಲಿ ಗುರುಪುರ, ಕೆ.ಎಚ್. ದಾಸಪ್ಪ ರೈ, ಸದಾಶಿವ ಕುಲಾಲ್ ವೇಣೂರು, ಶ್ರೀಧರ ಐತಾಳ್, ರವಿರಾಜ ಭಟ್ ಪನೆಯಾಲ, ಹಳುವಳ್ಳಿ ಗಣೇಶ ಭಟ್, ದಿನೇಶ ಶೆಟ್ಟಿ ಕಾವಳಕಟ್ಟೆ, ರವಿಶಂಕರ ವಳಕುಂಜ, ಮಾಧವ ಬಂಗೇರ ಕೊಳ್ತಮಜಲು, ಗುರುಪ್ರಸಾದ ಬೊಳಿಂಜಡ್ಕ ಅವರನ್ನು ಸಮ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಮತ್ತು ವಿನಾಯಕ ಯಕ್ಷಕಲಾ ಫೌಂಡೇಷನ್ ಕೆರೆಕಾಡು ಅವರಿಗೆ ಗೌರವಾರ್ಪಣೆ ನಡೆಯಲಿದೆ. ಇತ್ತೀಚೆಗೆ ಅಗಲಿದ ಸುಬ್ರಹ್ಮಣ್ಯ ಧಾರೇಶ್ವರ, ಪೆರುವಾಯಿ ನಾರಾಯಣ ಶೆಟ್ಟಿ, ಕುಂಬ್ಳೆ ಶ್ರೀಧರ ರಾವ್, ಗಂಗಾಧರ ಜೋಗಿ ಪುತ್ತೂರು ಅವರ ಸಂಸ್ಮರಣೆ ಜರಗಲಿದೆ.
ಸಂಜೆ 5ರಿಂದ ದಿನೇಶ ಅಮ್ಮಣ್ಣಾಯರ ಗಾನ ಸಾರಥ್ಯದಲ್ಲಿ “ಕಚ್ಚಾರ ಮಾಲ್ದಿ’ ಯಕ್ಷಗಾನ ಪ್ರದರ್ಶನವಾಗಲಿದೆ. ರಾತ್ರಿ 10ರಿಂದ “ಭಾರತರತ್ನ’ ಪ್ರಸಂಗ ನಡೆಯಲಿದೆ. ತೆಂಕು ತಿಟ್ಟಿನ ಪ್ರಸಿದ್ಧ 22 ಮಂದಿ ಹಿಮ್ಮೇಳ ಕಲಾವಿದರು, 67 ವೇಷಧಾರಿಗಳು ಸಹಿತ ಸುಮಾರು 90 ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.