ಪಂಚಾಯತ್‌ನಿಂದ ಅನಧಿಕೃತ ಅಂಗಡಿಗಳ ತೆರವು ಶುರು


Team Udayavani, Oct 29, 2017, 4:56 PM IST

29-Mng–18.jpg

ಉಪ್ಪಿನಂಗಡಿ: ಪಟ್ಟಣದ ರಸ್ತೆ ಬದಿಯಲ್ಲಿದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು
ಗ್ರಾ.ಪಂ. ಶನಿವಾರ ಆರಂಭಿಸಿದೆ.

ಪಂಚಾಯತ್‌ನ ಹಲವು ಸಾಮಾನ್ಯ ಸಭೆಯಲ್ಲಿ ಅನಧಿಕೃತ ಅಂಗಡಿಗಳ ತೆರವಿಗೆ ನಿರ್ಣಯ ಕೈಗೊಳ್ಳಲಾಗಿತ್ತು.
ಅದರೂ ನಿರ್ಣಯದ ಅನುಷ್ಠಾನಕ್ಕೆ ಗ್ರಾ.ಪಂ. ಈವರೆಗೆ ಮುಂದಾಗಿರಲಿಲ್ಲ. ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಅವರ ನೇತೃತ್ವದಲ್ಲಿ ಪಂಚಾಯತ್‌ ಅಧಿಕಾರಿ, ಸಿಬಂದಿ ತಂಡ ಪೇಟೆಯಲ್ಲಿರುವ ಅಂಗಡಿಗಳ ಪರವಾನಿಗೆ ಪರಿಶೀಲಿಸಿದರು. ಈ ಸಂದರ್ಭ ಕೆಲವರು ಅಧಿಕೃತ ಕಟ್ಟಡದಲ್ಲಿ ವ್ಯಾಪಾರ ನಡೆಸುತ್ತಿದ್ದರೂ ಪರವಾನಿಗೆ ನವೀಕರಿಸದಿರುವುದು ಕಂಡು ಬಂತು. ಇವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಿ, ಪರವಾನಿಗೆ ನವೀಕರಿಸಿ ಕೊಡಲಾಯಿತು.

ರಸ್ತೆ ಬದಿಯಲ್ಲಿ ತಲೆಯೆತ್ತಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲು ಬೆಳಗ್ಗೆಯೇ ಸೂಚನೆ ನೀಡಲಾಗಿತ್ತು. ಕೆಲವರು ಸೂಚನೆ ಪಾಲಿಸಿ, ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿದ್ದರು. ತೆರವಾಗದೇ ಇದ್ದ ಕೆಲವು ಅಂಗಡಿಗಳನ್ನು ಪಂಚಾಯತ್‌ ವತಿಯಿಂದಲೇ ತೆರವುಗೊಳಿಸಲಾಯಿತು. ಕೆಲವು ಅನಧಿಕೃತ ಅಂಗಡಿದಾರರಿಗೆ ಮಧ್ಯಾಹ್ನದ ಬಳಿಕ ಅಂಗಡಿ ತೆರವಿಗೆ ಪಂಚಾಯತ್‌ ಸೂಚಿಸಿದ್ದು, ಅವರಿಗೆ ಶನಿವಾರ ಸಂಜೆಯೊಳಗೆ ಸ್ವಯಂ ಆಗಿ ಅಂಗಡಿ ತೆರವುಗೊಳಿಸಲು ಪಂಚಾಯತ್‌ ಸೂಚಿಸಿದೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಉಪ್ಪಿನಂಗಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಬ್ದುಲ್‌ ಅಸಾಫ್, ಪಂಚಾಯತ್‌ ಆಡಳಿತ ಕೈಗೊಂಡ ನಿರ್ಣಯದಂತೆ ವಾಹನ ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾಗುವ ಪೇಟೆಯೊಳಗಿನ ಎಲ್ಲ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಶನಿವಾರದಿಂದ ಪಂಚಾಯತ್‌ ಆರಂಭಿಸಿದೆ. ಸೋಮವಾರದಿಂದ ಉಪ್ಪಿನಂಗಡಿ ಪಟ್ಟಣವು ಅನಧಿಕೃತ ಅಂಗಡಿ ಮುಕ್ತ ಪಟ್ಟಣವಾಗಲಿದೆ ಎಂದರು.

ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಮಾತನಾಡಿ, ಪಂಚಾಯತ್‌ನ ಹಳೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇನ್ನು ಒಂದೆರಡು ತಿಂಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಕಟ್ಟಡ ಕೆಡಹುವ ಸಂದರ್ಭ ಅದರಲ್ಲಿ ಬಾಡಿಗೆಗಿದ್ದ ಕೆಲವರಿಗೆ ತಾತ್ಕಾಲಿಕವಾಗಿ ಅಂಗಡಿ ನಿರ್ಮಿಸಿಕೊಳ್ಳಲು ಪಂಚಾಯತ್‌ ಜಾಗ ತೋರಿಸಿದೆ. ಅವರಿಗೆ ಪಂಚಾಯತ್‌ನ  ಹೊಸ ಕಟ್ಟಡ ಆಗುವವರೆಗೆ ಮಾತ್ರ ಅಲ್ಲಿ ಅವಕಾಶ ನೀಡಲಾಗುತ್ತದೆ. ಮತ್ತೆ ಬೇಕಾದರೆ ಪಂಚಾಯತ್‌ನ ಏಲಂನಲ್ಲಿ ಭಾಗವಹಿಸಿ ಅಂಗಡಿ ತೆಗೆದುಕೊಳ್ಳಬಹುದು. ಆದರೆ ಕೆಲವರು ಮಾತ್ರ ಅಲ್ಲಿ ಹೋಗದೇ ಅವರಿಗೆ ಇಷ್ಟ ಬಂದ ಜಾಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆ ಬದಿ ವ್ಯಾಪಾರ ನಡೆಸುತ್ತಿದ್ದರು. ಅಂತಹ ಅಂಗಡಿಗಳನ್ನೂ ಇಂದು ತೆರವುಗೊಳಿಸಲಾಗಿದೆ ಎಂದರು.

ಕಾರ್ಯಾಚರಣೆಯುದ್ದಕ್ಕೂ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ., ಪಿಡಿಒ ಅಬ್ದುಲ್‌ ಅಸಾಫ್, ಕಾರ್ಯದರ್ಶಿ ಶಾರದಾ, ಸಿಬಂದಿ ಹಾಜರಿದ್ದರು. ಉಪ್ಪಿನಂಗಡಿ ಪೊಲೀಸ್‌ ಠಾಣಾ ಸಿಬಂದಿ ಬೆಳಗ್ಗಿನ ಹೊತ್ತು ಹಾಜರಿದ್ದು, ಬಂದೋಬಸ್ತ್ ಕೈಗೊಂಡರು.

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.