N.Hವೇಗಮಿತಿ ಸೂಚನ ಫಲಕ ಇರುವಲ್ಲಿ ಮೊಬೈಲ್‌ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌ ಕಾರ್ಯಾಚರಣೆ


Team Udayavani, Aug 2, 2024, 6:55 AM IST

N.Hವೇಗಮಿತಿ ಸೂಚನ ಫಲಕ ಇರುವಲ್ಲಿ ಮೊಬೈಲ್‌ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌ ಕಾರ್ಯಾಚರಣೆN.Hವೇಗಮಿತಿ ಸೂಚನ ಫಲಕ ಇರುವಲ್ಲಿ ಮೊಬೈಲ್‌ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌ ಕಾರ್ಯಾಚರಣೆ

ಮಂಗಳೂರು: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆ ಪ್ರಕಾರ “ಮೊಬೈಲ್‌ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌’ಗಳನ್ನು ಉಪಯೋಗಿಸಿ ಪೊಲೀಸರು ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ.ಸದ್ಯದ ಮಟ್ಟಿಗೆ ಜಿಲ್ಲೆಯ ಹೆದ್ದಾರಿಗಳಲ್ಲಿ ಮಾತ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಂಗಳೂರು ನಗರದೊಳಗಿನ ರಸ್ತೆಗಳಲ್ಲಿ ವೇಗದ ಮಿತಿ ಇನ್ನಷ್ಟೇ ನಿರ್ಧಾರವಾಗಬೇಕಿದೆ. ಆದ್ದರಿಂದ ಹೆದ್ದಾರಿಗಳಲ್ಲಿ ಕೆಲವು ಕಡೆಗಳಲ್ಲಿ ಬೋರ್ಡ್‌ ಅಳವಡಿಕೆ ಮಾಡಿದ್ದು, ಅಂತಹ ಸ್ಥಳಗಳಲ್ಲಿ ಪೊಲೀಸರು ವಾಹನಗಳ ವೇಗ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಮಿತಿ ಮೀರಿದರೆ ದಂಡ ಪಕ್ಕಾ
100 ಕಿ.ಮೀ. ವೇಗದಲ್ಲಿ ಸಾಗಬಹುದಾದ ಹೆದ್ದಾರಿ ಜಿಲ್ಲಾ ವ್ಯಾಪ್ತಿಯಲ್ಲೇ ಇಲ್ಲ. ಗರಿಷ್ಠ ವೇಗ ಮಿತಿ 80 ಕಿ.ಮೀ. ಕೆಲವು ಕಡೆಗಳಲ್ಲಿ 50 ಕಿ.ಮೀ. 30 ಕಿ.ಮೀ. ಹೀಗೆ ಇದೆ. ಈ ಮಿತಿಯನ್ನು ಮೀರಿ ಸಾಗುವ ವಾಹನಗಳಿಗೆ ದಂಡ ವಿಧಿಸಲಾಗುತ್ತಿದೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್‌ ಉಪ ಆಯುಕ್ತ ಬಿ.ಪಿ. ದಿನೇಶ್‌ ಕುಮಾರ್‌ ತಿಳಿಸಿದ್ದಾರೆ.

ಜಾಗೃತಿ ಕಾರ್ಯ: ಎಸ್‌ಪಿ
ಪುರಸಭೆ, ಗ್ರಾಮೀಣ ಭಾಗದಲ್ಲಿ ಇನ್ನಷ್ಟೇ ಕಾರ್ಯಾಚರಣೆ ಆರಂಭಿಸಬೇಕಾಗಿದೆ. ಪ್ರಸ್ತುತ ಹೆದ್ದಾರಿಗಳಲ್ಲಿ ದಂಡ ವಿಧಿಸುವ ಮೂಲಕ ಸಾರ್ವಜನಿಕರಲ್ಲಿ ಈ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಮಂಗಳೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ
ಮಂಗಳೂರು: ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರ, ದೋಷ ಪೂರಿತ ನಂಬರ್‌ ಪ್ಲೇಟ್‌, ವೇಗದ ಸಂಚಾರ, ಆಟೋಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಯಾಣಿಕರ ಸಂಚಾರ ಸೇರಿ ದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಗುರುವಾರ ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸಂಚಾರ ವಿಭಾ ಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಸಂಚಾರ ಠಾಣೆಗಳ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿ ಭಾಗವಹಿಸಿದ್ದರು.

ಪೊಲೀಸರ ಎಚ್ಚರಿಕೆ
ಕೆಲವು ಕಡೆಗಳಲ್ಲಿ ರಾತ್ರಿ ವೇಳೆಯಲ್ಲೂ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆ ವೇಳೆ ಏಕಮುಖ ಸಂಚಾರ ಮಾಡುತ್ತಿದ್ದವರ ಮೇಲೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.

ನಂಬರ್‌ ಪ್ಲೇಟ್‌: ಸೂಚನೆ
ದೋಷಪೂರಿತ ನಂಬರ್‌ ಇದ್ದ ವಾಹನಗಳ ಚಾಲಕರಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸುವಂತೆ ಪೊಲೀಸರು ಸೂಚಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.