![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 2, 2024, 11:54 PM IST
ಮಂಗಳೂರು: ಕಾಶಿ ಜ್ಞಾನವಾಪಿ ಮಂದಿರದಲ್ಲಿ ನ್ಯಾಯಾಲಯವು ಪೂಜೆಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಕದ್ರಿಯ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ವಿಹಿಂಪ ಮುಖಂಡ ಪ್ರೊ| ಎಂ.ಬಿ. ಪುರಾಣಿಕ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾಶಿ ವಿಶ್ವನಾಥ ದೇಗುಲ ಬಳಿಯ ಜ್ಞಾನವಾಪಿ ಮಂದಿರದಲ್ಲಿ 32 ವರ್ಷಗಳಿಂದ ನಿಂತಿದ್ದ ಪೂಜೆಗೆ ನ್ಯಾಯಾಲಯ ಅವಕಾಶ ನೀಡಿದೆ, ಜ್ಞಾನವಾಪಿ ಮಸೀದಿಯಲ್ಲಿ ದೇವಾಲಯದ ಕುರುಹುಗಳು, ದೇವರ ಮೂರ್ತಿಗಳು, ಶಿವಲಿಂಗ ಇತ್ಯಾದಿ ಪತ್ತೆಯಾಗಿವೆ.
ದೇವಾಲಯವನ್ನು ಕೆಡವಿ ಮಸೀದಿ ಕಟ್ಟಿರುವುದಕ್ಕೆ ಇದು ಸಾಕ್ಷಿ. ಅಲ್ಲಿರುವ ಇನ್ನಷ್ಟು ಕಾನೂನು ತೊಡಕುಗಳು ನಿವಾರಣೆಯಾಗಬೇಕು, ಅಲ್ಲಿ ಕಾಶಿ ವಿಶ್ವನಾಥನ ಭವ್ಯ ಮಂದಿರ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿ ಈ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಪ್ರೊ| ಪುರಾಣಿಕ್ ತಿಳಿಸಿದರು.
ವಿಭಾಗ ಸಂಯೋಜಕ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ, ಜಿಲ್ಲಾ ಸಹ ಸಂಯೋಜಕ ಪ್ರೀತಮ್ ಕಾಟಿಪಳ್ಳ ಮುಂತಾದವರು ಪಾಲ್ಗೊಂಡರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.