ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ


Team Udayavani, May 29, 2022, 1:44 AM IST

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಮಂಗಳೂರು: ವಸ್ತ್ರಸಂಹಿತೆ ವಿಚಾರದಲ್ಲಿ ವಿದ್ಯಾರ್ಥಿಗಳು ಒಂದು ಕಾಲೇಜನ್ನು ಬಿಟ್ಟು ಬೇರೆ ಕಾಲೇಜಿಗೆ ಪ್ರವೇಶ ಪಡೆಯಲು ಬಯಸಿದರೆ ಅವರಿಗೆ ಅವಶ್ಯವಿರುವ ವರ್ಗಾವಣೆ ಪತ್ರ (ಟಿಸಿ) ನೀಡಲು ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ. ಸುಬ್ರಮಣ್ಯ ಯಡಪಡಿತ್ತಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿದ್ಯಾಭ್ಯಾಸದತ್ತ ಒಲವು ತೋರುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆ. ವಸ್ತ್ರಸಂಹಿತೆಯಂತಹ ವ್ಯವಸ್ಥೆ ಯಲ್ಲಾಗುವ ಬದಲಾವಣೆಗಳು ಅವರ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದಂತೆ ಎಲ್ಲ ಎಚ್ಚರವಹಿಸಲಾಗುವುದು. ಈ ಪ್ರಕರಣಗಳನ್ನು ವಿಶೇಷ ನೆಲೆಯಲ್ಲಿ ಪರಿಗಣಿಸಿಕೊಂಡು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ. ಒಂದು ಕಾಲೇಜಿನಿಂದ ಮತ್ತೂಂದು ಕಾಲೇಜಿಗೆ ಹೋಗಲು ಬಯಸಿದರೆ ಇದಕ್ಕೆ ಅವಶ್ಯ ಇರುವ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಹೊಸ ಕಾಲೇಜಿನಲ್ಲಿ ಸೇರ್ಪಡೆಗೆ ಅಗತ್ಯವಾದಷ್ಟು ಇನ್‌ಟೇಕ್‌ ಇರಬೇಕು. ಆದುದರಿಂದ ಕಾಲೇಜಿನವರು ಹೆಚ್ಚುವರಿ ಇನ್‌ಟೇಕ್‌ ಕೇಳಿದರೆ ಅವರಿಗೆ ಪ್ರವೇಶಾತಿ ಮಿತಿಯನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ. ವಿದ್ಯಾರ್ಥಿಗಳ ವರ್ಗಾವಣೆ ಶುಲ್ಕವನ್ನು ಮನ್ನಾ ಮಾಡಲಾಗುತ್ತದೆ ಎಂದರು.

ನಿಯಮ ಕಡ್ಡಾಯ ಪಾಲನೆ
ವಿ.ವಿ.ಯ ಎಲ್ಲ ಘಟಕ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕುರಿತಂತೆ ಸರಕಾರದ ಹಾಗೂ ನ್ಯಾಯಾಲಯದ ಆದೇಶವನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಸಂಯೋಜಿತ ಕಾಲೇಜುಗಳಲ್ಲಿ ಅವರದ್ದೇ ಆದ ವಸ್ತ್ರಸಂಹಿತೆ ಇರುತ್ತದೆ ಎಂದರು.

ಮಂಗಳೂರು ವಿ.ವಿ.ಯಡಿಯಲ್ಲಿ ಆರು ಘಟಕ ಕಾಲೇಜುಗಳಿದ್ದು, ಹಂಪನಕಟ್ಟೆ ಮಂಗಳೂರು ವಿ.ವಿ. ಕಾಲೇಜು, ಮೂಡುಬಿದಿರೆಯ ಬನ್ನಡ್ಕ ಕಾಲೇಜು, ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿಗೆ ಸರಕಾರದಿಂದ ಅನುಮತಿ ಪಡೆದಿದೆ.

ಮಂಗಳಗಂಗೋತ್ರಿಯ ಕಾಲೇಜು, ನೆಲ್ಯಾಡಿಯ ಕಾಲೇಜು ಹಾಗೂ ಮಂಗಳೂರು ವಿ.ವಿ. ಸಂಧ್ಯಾ ಕಾಲೇಜು ವಿ.ವಿ. ಸಮಿತಿಯಿಂದ ಅಂಗೀಕಾರ ಪಡೆದಿವೆ. ರಾಜ್ಯ ಸರಕಾರದಿಂದ ಶೀಘ್ರದಲ್ಲಿಯೇ ಅನುಮತಿ ದೊರೆಯುವ ಸಾಧ್ಯತೆಯಿದೆ ಎಂದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.