“ಮದಿಪು’ವಿಗೆ ಮತ್ತೂಂದು ಗೌರವ, ಪಡೀಲ್‌ ಅತ್ಯುತ್ತಮ ಪೋಷಕ ನಟ


Team Udayavani, Apr 12, 2017, 12:21 PM IST

madipu.jpg

ಮಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಗಳವಾರ ಪ್ರಕಟವಾಗಿದ್ದು, ಕರಾವಳಿ ಭಾಗಕ್ಕೆ ಮೂರು ಗೌರವಗಳು ಲಭಿಸಿವೆ. ಕರಾವಳಿಯ ಕಲಾರಾಧನೆ ಆಧಾರಿತ ತುಳುವಿನ 78ನೇ ಸಿನೆಮಾ “ಮದಿಪು’ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕುಸಲ್ದರಸೆ ನವೀನ್‌ ಡಿ. ಪಡೀಲ್‌ “ಕುಡ್ಲ ಕೆಫೆ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರಾವಳಿ ಮೂಲದ ರಕ್ಷಿತ್‌ ಶೆಟ್ಟಿ ನೇತೃತ್ವದ “ಕಿರಿಕ್‌ ಪಾರ್ಟಿ’ ಚಿತ್ರ ಅತ್ಯುತ್ತಮ ಮನೋರಂಜನ ಚಿತ್ರವಾಗಿ ಮೂಡಿಬಂದಿದೆ. 

ಮದಿಪು ಚಿತ್ರ 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಅತ್ಯುತ್ತಮ ಪ್ರಾದೇಶಿಕ ಚಿತ್ರ’ ಎಂಬ ಗೌರವಕ್ಕೆ ಎ. 8ರಂದು ಭಾಜನವಾಗಿತ್ತು. ಇದೀಗ ಮತ್ತೆ ಇದೇ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಲಭಿಸುವ ಮೂಲಕ ತುಳು ಚಿತ್ರರಂಗಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. ಆಸ್ಥಾ ಪ್ರೊಡಕ್ಷನ್‌ ಲಾಂಛನದಲ್ಲಿ ತಯಾರಾದ “ಮದಿಪು’ ಚಿತ್ರದ ಕಥೆ, ಚಿತ್ರಕಥೆ, ಕಲಾ ನಿರ್ದೇಶನವನ್ನು ಚೇತನ್‌ ಮುಂಡಾಡಿ ಮಾಡಿದ್ದು, ಸಂದೀಪ್‌ ಕುಮಾರ್‌ ನಂದಳಿಕೆ ನಿರ್ಮಾಪಕರು. ಈ ಚಿತ್ರ ಮಾ. 10ರಂದು ನಗರದ ಸುಚಿತ್ರಾ ಟಾಕೀಸ್‌ ಸೇರಿದಂತೆ ಕರಾವಳಿಯ 9 ಥಿಯೇಟರ್‌ನಲ್ಲಿ  ಬಿಡುಗಡೆಗೊಂಡಿತ್ತು. 

ಕಾಮಿಡಿ ಪಾತ್ರದ ಮೂಲಕ ಕರಾವಳಿಯಾದ್ಯಂತ ಮನೆಮತಾದ ನವೀನ್‌ ಡಿ. ಪಡೀಲ್‌ “ಕುಡ್ಲ ಕೆಫೆ’ ತುಳುಚಿತ್ರದಲ್ಲಿ ವಿಭಿನ್ನ ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ರಂಜನ್‌ ಶೆಟ್ಟಿ ಹಾಗೂ ಸೂರ್ಯ ಮೆನನ್‌ ಸೇರಿ ನಿರ್ಮಿಸಿದ “ಕುಡ್ಲ ಕೆಫೆ’ ಚಿತ್ರವನ್ನು ಸೂರ್ಯ ಮೆನನ್‌ ನಿರ್ದೇಶಿಸಿದ್ದಾರೆ. ಗೆಳೆಯರು ಒಟ್ಟು ಸೇರಿ ಹೊಟೇಲ್‌ ಒಂದನ್ನು ಉಳಿಸಲು ಕಬಡ್ಡಿ ಆಯೋಜಿಸಿದ ಕಥೆಯ ಈ ಚಿತ್ರದಲ್ಲಿ ಪಡೀಲ್‌ ಅವರ ಅಭಿನಯಕ್ಕಾಗಿ ಪೋಷಕ ಪ್ರಶಸ್ತಿ ಗೌರವ ದೊರಕಿದೆ. 
ಈ ಹಿಂದೆ “ಕೋಟಿ ಚೆನ್ನಯ’ ಚಿತ್ರದ ನೀತು ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಹಾಗೂ “ಗಗ್ಗರ’ ಚಿತ್ರದಲ್ಲಿ ಎಂ.ಕೆ. ಮಠ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರಕಿತ್ತು. 

ಈ ಮಧ್ಯೆ ಕರಾವಳಿ ಮೂಲದವರಾದ ರಕ್ಷಿತ್‌ ಶೆಟ್ಟಿ ನಿರ್ಮಾಣ ಹಾಗೂ ಅಭಿನಯದ ರಿಷಭ್‌ ಶೆಟ್ಟಿ ನಿರ್ದೇಶನದ “ಕಿರಿಕ್‌ ಪಾರ್ಟಿ’ ಕನ್ನಡ ಚಿತ್ರ ಅತ್ಯುತ್ತಮ ಮನೋರಂಜನಾ ಚಿತ್ರ ಎಂಬ ಗೌರವಕ್ಕೆ ಪಾತ್ರವಾಗಿದೆ. ಈ ಚಿತ್ರ ಇತ್ತೀಚೆಗೆ ತೆರೆಕಂಡು ರಾಜ್ಯವ್ಯಾಪಿ ಉತ್ತಮ ಗಳಿಕೆಯೊಂದಿಗೆ ಸದ್ದು ಮಾಡಿತ್ತು. 

ತುಳುನಾಡಿಗೆ ಸಂದ ಗೌರವ
ತುಳು ಭಾಷೆ ಮೇಲಿನ ಪ್ರೀತಿಯಿಂದ ನನ್ನನ್ನು ಆಶೀರ್ವದಿಸಿದ ತುಳುನಾಡಿನ ಸರ್ವ ಧರ್ಮದ ಸಮಸ್ತ ಜನರಿಗೆ ಸಂದ ಗೌರವ ಇದಾಗಿದೆ. ರಂಗಭೂಮಿಯ ಮೂಲಕ, ತುಳು, ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಲು ಕಾರಣವಾದ ನನ್ನ ತಾಯ್ನೆಲ ಹಾಗೂ ಬೆಂಬಲಿಸಿದ ಸರ್ವರಿಗೂ ಆಭಾರಿ. ಈ ಪ್ರಶಸ್ತಿ ಮೂಲಕ ತುಳುಚಿತ್ರರಂಗಕ್ಕೆ  ಇನ್ನಷ್ಟು  ಸ್ಫೂರ್ತಿ ಸಿಗುವಂತಾಗಲಿ.
– ನವೀನ್‌ ಡಿ. ಪಡೀಲ್‌, ಖ್ಯಾತ ನಟ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.