ಪಾಲ್ತಾಡಿ: ಜಲಕ್ಷಾಮ ಆತಂಕ ದೂರ ಮಾಡಿದ ಕೃಷಿಕರು


Team Udayavani, Dec 17, 2017, 4:05 PM IST

18Dec-14.jpg

ಸವಣೂರು: ಕೃಷಿಗೆ ನೀರಿಲ್ಲ ಎಂಬ ಮಾತು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. 650 ಅಡಿ ಬೋರ್‌ವೆಲ್‌ ಕೊರೆದರೂ ಅಂತರ್ಜಲದ ಕರುಣೆ ಉಕ್ಕುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ಹೊಳೆಯಲ್ಲಿ ಹರಿಯುತ್ತಿರುವ ನೀರನ್ನು ಕಿಂಡಿ ಅಣೆಕಟ್ಟೆಗೆ ಹಲಗೆ ಅಳವಡಿಸಿ ಇಂಗಿಸುವ ಮಾದರಿ ಕಾರ್ಯವನ್ನು ಪಾಲ್ತಾಡಿಯ ಮಂಜುನಾಥನಗರ, ನಾಡೋಳಿಯ ಕೃಷಿಕರು ಮಾಡಿದ್ದಾರೆ.

ಜಲಸಂಪನ್ಮೂಲ ಇಲಾಖೆಯಿಂದ ನಿರ್ಮಿಸಿದ ಈ ಅಣೆಕಟ್ಟೆಗೆ ಗ್ರಾ.ಪಂ., ಜಿ.ಪಂ. ಅಥವಾ ಯಾವುದಾದರೂ ಇಲಾಖೆ ಹಲಗೆ ಜೋಡಿಸಲಿ ಎಂದು ಗ್ರಾಮಸ್ಥರು ಕಾಯಲಿಲ್ಲ, ದುಂಬಾಲು ಬೀಳಲಿಲ್ಲ. ಕೃಷಿಕರೇ ಸೇರಿಕೊಂಡು, ಕಿಂಡಿ ಅಣೆಕಟ್ಟೆಗೆ ಹಲಗೆ ಅಳವಡಿಸಿ, ಬರವನ್ನು ದೂರ ಮಾಡಿದ್ದಾರೆ.

ಬರದಿಂದ ಕೃಷಿಯ ರಕ್ಷಣೆ
ಪಾಲ್ತಾಡಿ ಗ್ರಾಮದ ಮಂಜುನಾಥನಗರದ ನಾಡೋಳಿಯಲ್ಲಿ ಹರಿಯುವ ಗೌರಿ ಹೊಳೆಗೆ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗೆ ಹಲಗೆ ಅಳವಡಿಸುವ ಮೂಲಕ ಸುತ್ತಲಿನ 25ಕ್ಕೂ ಹೆಚ್ಚು ಕೃಷಿಕರ ತೋಟಗಳಿಗೆ ನೀರುಣಿಸಲಾಗುತ್ತಿದೆ. ಇದರಿಂದ ಬಿರು ಬೇಸಿಗೆಯಲ್ಲಿ ತೋಟ ಒಣಗುವ ಆತಂಕ ದೂರವಾಗಿದೆ.

2 ಕಿ.ಮೀ. ಉದ್ದ, 40 ಅಡಿ ಅಗಲದ ಈ ಅಣೆಕಟ್ಟೆಯಲ್ಲಿ 10 ಅಡಿ ನೀರು ನಿಲ್ಲುವ ಸಾಮರ್ಥ್ಯವಿದ್ದು, ಸದ್ಯ 9 ಅಡಿ ನೀರಿದೆ. ಈ ಅಣೆಕಟ್ಟೆಯಲ್ಲಿ ಎಪ್ರಿಲ್‌, ಮೇ ತಿಂಗಳವರೆಗೂ ನೀರು ಸಂಗ್ರಹ ಇರುತ್ತದೆ. ಜತೆಗೆ, ಸುತ್ತಲಿನ ಅಂತರ್ಜಲ ಮಟ್ಟ ಹೆಚ್ಚಳಕ್ಕೂ ಸಹಕಾರಿ. ಸುತ್ತಲಿನ ಕೆರೆ, ಬಾವಿಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಕೃಷಿಕರೇ ಕಟ್ಟಿಕೊಂಡ ಸಮಿತಿ
ಅಡಿಕೆ ಬೆಳೆಗಾರರೇ ಹೆಚ್ಚಿರುವ ಈ ಗ್ರಾಮದಲ್ಲಿ ಕೃಷಿಕರೇ ಸೇರಿ ಸಮಿತಿ ರಚಿಸಿಕೊಂಡು ಹಲಗೆ ಅಳವಡಿಸುವ ಕೆಲಸ ಮಾಡುತ್ತಿದ್ದಾರೆ. ಸಮಿತಿಯಲ್ಲಿ ಬಿ.ಕೆ. ರಮೇಶ್‌, ಡಾ| ರಾಮಚಂದ್ರ ಭಟ್‌ ಸಾರಡ್ಕ, ರಮೇಶ್‌ ರಾವ್‌ ನಾಡೋಳಿ, ಸುಬ್ರಹ್ಮಣ್ಯ ನಿಡ್ವಣ್ಣಾಯ, ನಾರಾಯಣ ರೈ ಕುಂಜಾಡಿ, ಸೋಮಪ್ಪ ಗೌಡ ಮುಂತಾದ ಪ್ರಮುಖರಿದ್ದಾರೆ.

ಇದರ ನಿರ್ವಹಣೆಯನ್ನು ರಮೇಶ್‌ ರಾವ್‌ ಮಾಡುತ್ತಿದ್ದಾರೆ. ಅವರ ಮುತುವರ್ಜಿಯಿಂದಲೇ ಜಲಸಂಪನ್ಮೂಲ ಇಲಾಖೆಯ ವತಿಯಿಂದ ಐದು ವರ್ಷಗಳ ಹಿಂದೆ 25 ಲಕ್ಷ ರೂ. ವೆಚ್ಚದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿತ್ತು. ಕಳೆದ ವರ್ಷ ದುರಸ್ತಿ ಕಾರ್ಯವನ್ನೂ ನಡೆಸಲಾಗಿತ್ತು. ಐದು ವರ್ಷಗಳಿಂದಲೂ ನಿರಂತರವಾಗಿ ನೀರು ಸಂಗ್ರಹಿಸಲಾಗುತ್ತಿದೆ.

ಇಲ್ಲಿನ ಗ್ರಾಮ ವಿಕಾಸ ಸಮಿತಿಯೂ ಜಲ ಸಂರಕ್ಷಣೆಯ ಕುರಿತು ವಿಶೇಷ ಕಾಳಜಿ ವಹಿಸುತ್ತಿದೆ. ಗ್ರಾಮ ವಿಕಾಸದ ಪಂಚ ಕಾರ್ಯಗಳಲ್ಲಿ ಜಲಸಂರಕ್ಷಣೆಯೂ ಒಂದು. ಈ ಗ್ರಾಮದಲ್ಲಿ ಹಲವೆಡೆ ಸಣ್ಣ ಸಣ್ಣ ತೊರೆಗಳಿಗೂ ಮಣ್ಣು ಹಾಗೂ ಅಡಿಕೆ ಮರದ ಹಲಗೆಯನ್ನು ಹಾಕಿ ತಾತ್ಕಾಲಿಕ ಕಟ್ಟಗಳನ್ನು ರಚಿಸಿದ್ದಾರೆ. ಈ ಮೂಲಕ ಜಲ ಸಂರಕ್ಷಣೆಯ ಮಾದರಿ ಕಾರ್ಯ ಮಾಡುತ್ತಿದೆ.

ಜಲಕ್ಷಾಮಕ್ಕೆ ತಡೆ
ಕಿಂಡಿ ಅಣೆಕಟ್ಟಿನ ಉತ್ತಮ ನಿರ್ವಹಣೆಯಿಂದಾಗಿ ಭವಿಷ್ಯದ ಸಂಭಾವ್ಯ ಜಲಕ್ಷಾಮ ತಡೆಗಟ್ಟಬಹುದು. ಕೃಷಿಕರು ಈಗ ಪಂಪ್‌ಗ್ಳಿಗೆ ಆಟೋ ಸ್ಟಾರ್ಟರ್‌ ಅಳವಡಿಸಿರುವ ಕಾರಣ ಅಗತ್ಯಕ್ಕಿಂತ ಹೆಚ್ಚು ನೀರು ವ್ಯಯವಾಗುತ್ತಿದೆ. ಇದನ್ನು ತಡೆಹಿಡಿಯಬೇಕಾಗಿದೆ. ಹೊಳೆಗಳಲ್ಲಿ ಪ್ರತಿ 2 ಕಿ.ಮೀ.ಗೆ ಒಂದರಂತೆ ಕಿಂಡಿ ಅಣೆಕಟ್ಟು ನಿರ್ಮಿಸುವುದು ಅವಶ್ಯ. ನದಿಯ ಪಾತ್ರದಲ್ಲಿ ಹರಿಯುವ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಬೇಕು ಎಂಬುದು ಈ ಕೃಷಿಕರ ಅಭಿಪ್ರಾಯ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.