ಯಕ್ಷಗಾನ ಕಲಾವಿದರ ಸಂಕಷ್ಟಗಳಿಗೆ ಸ್ಪಂದಿಸುವುದು ಶ್ಲಾಘನೀಯ: ಈಶ್ವರ ಭಟ್


Team Udayavani, Dec 19, 2018, 12:09 PM IST

19-december-6.gif

ಮೂಡುಬಿದಿರೆ: ಕಲೆಯನ್ನು ಧರ್ಮ ಪ್ರಸಾರ ಸಾಧನವಾಗಿ ಮುನ್ನಡೆಸುತ್ತ ಬರುತ್ತಿರುವವರು ಯಕ್ಷಗಾನ ಕಲಾವಿದರು. ಅವರ ಸಂಕಷ್ಟಗಳಿಗೆ ಸ್ಪಂದಿಸುವ, ಸಾಧಕರನ್ನು ಗೌರವಿಸುವ ಸಹೃದಯತೆಯಿಂದ ಕೆಲಸ ಮಾಡುತ್ತಿರುವ ಪಟ್ಲ ಫೌಂಡೇಶನ್‌ ನಿಜಕ್ಕೂ ಕಲೆಯ ಉಳಿವು ಮತ್ತು ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ, ಆಡಳಿತ ಮೊಕ್ತೇಸರ ವೇ|ಮೂ| ಈಶ್ವರ ಭಟ್‌ ಹೇಳಿದರು.

ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ, ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ನ ಮೂಡುಬಿದಿರೆ ಘಟಕದ ತೃತೀಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮ್ಮಾನ
ಕಾರ್ಯಕ್ರಮದಲ್ಲಿ 94ರ ಹರೆಯದ ಭಾಗವತ ಕಲ್ಲಮುಂಡ್ಕೂರಿನ ಅನಂತರಾಮ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾರೂರು ಖಂಡಿಗ ರಾಮದಾಸ ಆಸ್ರಣ್ಣ, ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ, ಕೆ. ಅಭಯಚಂದ್ರ, ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಪಟ್ಲ ಫೌಂಡೇಶನ್‌ನ ಗುಜರಾತ್‌ ಘಟಕದ ಅಧ್ಯಕ್ಷ ಅಪ್ಪಣ್ಣ ಶೆಟ್ಟಿ ಭಾಗವಹಿಸಿದ್ದರು.

3.5 ಕೋಟಿ ರೂ. ವಿನಿಯೋಗ
ಪಟ್ಲ ಫೌಂಡೇಶನ್‌ನ ಕೇಂದ್ರ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಮಾತನಾಡಿ, ಸ್ಥಾಪನೆಯಾಗಿ ಮೂರು ವರ್ಷ ಕಳೆಯುವಷ್ಟರಲ್ಲೇ 33 ಕಡೆಗಳಲ್ಲಿ ಫೌಂಡೇಶನ್‌ ಘಟಕಗಳು ಸ್ಥಾಪನೆಯಾಗಿವೆ. ಮುಂದಿನ ಜೂನ್‌ನಲ್ಲಿ ಅಮೆರಿಕದಲ್ಲಿ ಘಟಕ ಸ್ಥಾಪನೆಯಾಗಲಿದೆ ಎಂದು ಹೇಳಿದರು.

ಈಗಾಗಲೇ ಮೂವರು ಅಶಕ್ತ ಕಲಾವಿದರಿಗೆ ಮನೆ ನಿರ್ಮಿಸಿಕೊಟ್ಟಿದ್ದು, 100 ಮನೆಗಳನ್ನು ನಿರ್ಮಿಸಲು ಸೂಕ್ತ ನಿವೇಶನಕ್ಕಾಗಿ ಶೋಧ ನಡೆದಿದೆ. ಕಲಾವಿದರ ಅಪಘಾತ ವಿಮಾ ಯೋಜನೆಯಡಿ ಆಸ್ಪತ್ರೆಗೆ ದಾಖಲಾದಲ್ಲಿ ಗರಿಷ್ಠ 3 ಲಕ್ಷ ರೂ., ಸಾವಿನ ಪ್ರಕರಣದಲ್ಲಿ 8 ಲಕ್ಷ ರೂ. ಲಭಿಸುವಂತಾಗಿದೆ ಎಂದು ವಿವರಿಸಿದರು.

ಶ್ರದ್ದಾಂಜಲಿ
ಇತ್ತೀಚೆಗೆ ನಿಧನ ಹೊಂದಿರುವ ಧರ್ಮಸ್ಥಳ ಮೇಳದ ಮದ್ದಳೆವಾದಕ ಅಡೂರು ಗಣೇಶ ರಾವ್‌ ಅವರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೂಡುಬಿದಿರೆ ಘಟಕದ ಕಾರ್ಯಾಧ್ಯಕ್ಷ ಮುರಳೀಧರ ಶೆಟ್ಟಿ ಎಡಪದವು ಸ್ವಾಗತಿಸಿದರು. ಪ್ರಧಾನ ಸಂಚಾಲಕ ಪ್ರೇಮನಾಥ ಮಾರ್ಲ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಸಂಚಾಲಕ ಎಂ. , ದೇವಾನಂದ ಭಟ್‌ ಪ್ರಸ್ತಾವನೆಗೈದರು.

ಪ್ರಮುಖರಾದ ಸುಬ್ರಹ್ಮಣ್ಯಭಟ್‌, ಪ್ರಸಾದ್‌ ಭಟ್‌, ಸುಭಾಶ್ಚಂದ್ರ ಚೌಟ, ಶಾಂತರಾಮ ಕುಡ್ವಾ, ನೀಲೇಶ್‌ ಶೆಟ್ಟಿ, ಜೋಕಿಂ ಕೊರೆಯ, ಸಿ. ಎಚ್‌. ಅಬ್ದುಲ್‌ ಗಪೂರ್‌ ಮೊದಲಾದವರಿದ್ದರು. ಉಪಾಧ್ಯಕ್ಷ ದಿವಾಕರ ಶೆಟ್ಟಿ ತೋಡಾರು ನಿರೂಪಿಸಿದರು. ಕಾರ್ಯದರ್ಶಿ ಮೇನಕಾ ಸದಾಶಿವ ರಾವ್‌ ವಂದಿಸಿದರು. ಮೊದಲಿಗೆ ಪ್ರಸಿದ್ದ ಕಲಾವಿದರಿಂದ ‘ಯಕ್ಷ- ಗಾನ ಸಂಭ್ರಮ’, ಸಭಾ ಕಾರ್ಯಕ್ರಮದ ಬಳಿಕ ಹನುಮಗಿರಿ ಮೇಳದವರಿಂದ ‘ಮಾಯಾ ವಿಹಾರಿ’ ಯಕ್ಷಗಾನ ಬಯಲಾಟ ಜರಗಿತು.

ಘಟಕ ಸ್ಥಾಪನೆಗೆ ಹಲವು ಮನವಿ
‘ಸಂಪತ್ತಿರುವುದು ದಾನಕ್ಕೆ, ಬಡತನವಿರುವುದು ಧ್ಯಾನಕ್ಕೆ’ ಯೋಜನೆಗೆ ಕಲಾಭಿಮಾನಿಗಳು ಖಂಡಿತ ಸ್ಪಂದಿಸುತ್ತಾರೆ ಎಂಬುದಕ್ಕೆ ಫೌಂಡೇಶನ್‌ ಸಾಕ್ಷಿಯಾಗಿದೆ. ಈಗಾಗಲೇ 33 ಘಟಕಗಳಿದ್ದು ನಾಸಿಕ್‌, ಶಿವಮೊಗ್ಗ, ಕೊಪ್ಪ, ತೀರ್ಥಹಳ್ಳಿ, ಪಾಣಾಜೆ, ನಿಡ್ಡೋಡಿ, ಉಡುಪಿ, ಕುಂದಾಪುರ ಸಹಿತ ಸುಮಾರು 15 ಕಡೆಗಳಲ್ಲಿ ಘಟಕ ಸ್ಥಾಪನೆಗೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರೂ ಬಿಡುವು ಹೊಂದಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ.
– ಪಟ್ಲ ಸತೀಶ್‌ ಶೆಟ್ಟಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.