![supreem](https://www.udayavani.com/wp-content/uploads/2024/07/supreem-2-415x259.jpg)
Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ
Team Udayavani, Jul 6, 2024, 12:02 AM IST
![Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ](https://www.udayavani.com/wp-content/uploads/2024/07/dc-3-620x406.jpg)
ಮಂಗಳೂರು: ಮಂಗಳೂರು ತಾಲೂಕಿನ ಪಾವೂರು ಉಳಿಯ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದ ಮಳೆಗಾಲದಲ್ಲಿ ಆತಂಕ ಉಂಟಾಗಿರುವುದರಿಂದ ಅಕ್ರಮ ಮರಳುಗಾರಿಕೆ ಬಗ್ಗೆ ತನಿಖೆ ನಡೆಸಲು ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ.
ಸಮಿತಿ ಸದಸ್ಯರಾಗಿ ಸುರತ್ಕಲ್ ಎನ್ಐಟಿಕೆ ಪ್ರಾಧ್ಯಾಪಕರಾದ ಪ್ರೊ| ರಾಜ್ ಮೋಹನ್, ಪ್ರೊ| ಸ್ವಾತಿ, ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಉಪನಿರ್ದೇಶಕರಾದ ಸುಶ್ಮಿತಾ, ಸದಸ್ಯ ಕಾರ್ಯದರ್ಶಿಯಾಗಿ ಅಂತರ್ಜಲ ಅಭಿವೃದ್ಧಿ ಇಲಾಖೆ ಹಿರಿಯ ಭೂ ವಿಜ್ಞಾನಿ ಶೇಖ್ ದಾವೂದ್ ಅವರನ್ನು ನೇಮಕ ಮಾಡಲಾಗಿದೆ. ಸ್ಪಷ್ಟ ಶಿಫಾರಸಿನೊಂದಿಗೆ ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
![supreem](https://www.udayavani.com/wp-content/uploads/2024/07/supreem-2-415x259.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.