ಪಾವಂಜೆ ಯಾಗ: ವಿವಿಧ ಶಾಂತಿ ಪ್ರಕ್ರಿಯೆಗೆ ಚಾಲನೆ
Team Udayavani, Apr 16, 2018, 12:29 PM IST
ಪಾವಂಜೆ : ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವಿಶ್ವ ಜಿಗೀಷದ್ ಯಾಗದಲ್ಲಿ ಎ. 15ರಂದು ವಿವಿಧ ಶಾಂತಿ ಪ್ರಕ್ರಿಯೆಗಳು ಜರಗಿತು.
ಬೆಳಗ್ಗೆಯಿಂದ ನಡೆದ ಯಾಗದ ಯಜ್ಞಾಂಗಣದಲ್ಲಿ ವಟುಗಳಿಗೆ ಉಪನಯನ, ಹಿರಿಯ ದಂಪತಿಗಳು ಶಾಂತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಯುಗಾದಿಯ ಸಂಭ್ರಮದಲ್ಲಿದ್ದ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಭಾಗವಹಿಸಿದ್ದರು. ದೇಗುಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದ ವಾತಾವರಣ ಇರುವುದರಿಂದ ಭಕ್ತರ ಸಂಖ್ಯೆಯು ಹೆಚ್ಚಾಗಿತ್ತು.
ಮಧ್ಯಾಹ್ನ ಅನ್ನ ಸಂತರ್ಪಣೆಯಲ್ಲಿ ಅಂದಾಜು 8 ಸಾವಿರಕ್ಕೂ ಹೆಚ್ಚು ಮಂದಿ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ 30 ಮಂದಿ ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಪೂರ್ಣಾಹುತಿಯಲ್ಲಿ ಭಾಗವಹಿಸಿದರು.
ಮಹರ್ಷಿ ಜಾತೂಕರ್ಣ ವೇದಿಕೆಯಲ್ಲಿ ಶ್ರೀ ಮಹಾಲಿಂಗೇಶ್ವರ ಮಾತೃ ಭಜನ ಮಂಡಳಿಯಿಂದ ಭಜನ ಸಂಕೀರ್ತನೆ ಹಾಗೂ ಮಾಂಡೋಲಿನ್ ವಾದನವನ್ನು ಸದ್ಗುಣ ಐತಾಳ್ ಹಾಗೂ ಮೃದಂಗದಲ್ಲಿ ಸುಮುಖ ಕಾರಂತ್ ಅವರು ನುಡಿಸಿದರು. ಸಂಜೆ ಸತೀಶ್ ಸುರತ್ಕಲ್ ಬಳಗದಿಂದ ಭಕ್ತಿ ಭಾವ ಗಾಯನ ನಡೆಯಿತು. ಹಳೆಯಂಗಡಿ, ತೋಕೂರು, ಕೋಟೆಬಬ್ಬು ದೈವಸ್ಥಾನದ ವತಿಯಿಂದ ಹೊರೆಕಾಣಿಕೆಯನ್ನು ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.