ಕೊರೊನಾ ನೆಗೆಟಿವ್‌ ದೃಢಪತ್ರವಿಲ್ಲದೆ ಸಮುದ್ರದಲ್ಲೇ ಬಾಕಿ!

ಕ್ಯಾಲಿಫೋರ್ನಿಯಾ ಹಡಗಿನಲ್ಲಿ 131 ಭಾರತೀಯರ ಸಂಕಷ್ಟ; ಇಬ್ಬರು ದ.ಕ. ಯುವಕರು

Team Udayavani, Mar 17, 2020, 5:38 AM IST

careful-of-corona-2

ಮಂಗಳೂರು: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ಓಕ್‌ಲ್ಯಾಂಡ್‌ ಬಂದರಿನಲ್ಲಿ “ಗ್ರ್ಯಾಂಡ್‌ ಪ್ರಿನ್ಸೆಸ್‌- ಯುಎಸ್‌ಎ’ ಎನ್ನುವ ಹಡಗಿನಲ್ಲಿ ಕೆಲಸ ಮಾಡುತ್ತಿರುವ ಮಂಗಳೂರು ಮೂಲದ ಇಬ್ಬರು ಯುವಕರು ಸಹಿತ 131 ಮಂದಿ ಭಾರತೀಯರು ಭಾರತಕ್ಕೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮನ್ನು ಕೂಡಲೇ ಹಡಗಿನಿಂದ ರಕ್ಷಣೆ ಮಾಡುವುದಕ್ಕೆ ತುರ್ತು ಕ್ರಮವನ್ನು ಭಾರತ ಸರಕಾರ ಕೈಗೊಳ್ಳುವಂತೆ ಕೋರಿ ತುಳು ಹಾಗೂ ಹಿಂದಿ ಭಾಷೆಯಲ್ಲಿ ಆಡಿಯೋ ಹಾಗೂ ವೀಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದಾರೆ.

ಪ್ರಮಾಣಪತ್ರವಿಲ್ಲದೆ ಸಮಸ್ಯೆ
ಮಂಗಳೂರಿನ ನಟೇಶ್‌ ಮತ್ತು ಇನ್ನೋರ್ವ ಯುವಕ ಒಂದೂವರೆ ವರ್ಷಗಳಿಂದ ಯುಎಸ್‌ಎಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರೊಂದಿಗೆ ವಿವಿಧ ರಾಜ್ಯಗಳ ಇತರ 130 ಮಂದಿ ಉದ್ಯೋಗದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿರುವ ಕೊರೊನಾದಿಂದಾಗಿ ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ದೇಶಗಳ ಯುವಕರನ್ನು ಅವರ ದೇಶದ ಸರಕಾರಗಳು ಸ್ವದೇಶಕ್ಕೆ ಕರೆಸಿಕೊಂಡಿವೆ. ಆದರೆ ಭಾರತ ಸರಕಾರವು ಭಾರತದ ಯುವಕರನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ಕೊರೊನಾ ನೆಗೆಟಿವ್‌ ದೃಢಪಡಿಸುವ ವೈದ್ಯಕೀಯ ಪ್ರಮಾಣಪತ್ರ ಬೇಕೆಂದು ಕೇಳುತ್ತಿರುವುದರಿಂದ ಯುವಕರು ಸಂಕಷ್ಟಕ್ಕೊಳಗಾಗಿದ್ದಾರೆ.

ಭಾರತಕ್ಕೆ ಮರಳಲು ಸೋಮವಾರ ವಿಮಾನ ನಿಲ್ದಾಣಕ್ಕೆ ತೆರಳುವ ಬಸ್‌ನಲ್ಲಿ ಕುಳಿತಿದ್ದ ಯುವಕರನ್ನು ಭಾರತ ಸರಕಾರಕ್ಕೆ ಕೊರೊನಾ ನೆಗೆಟಿವ್‌ ಎಂದು ಸಾಬೀತುಪಡಿಸುವ ದೃಢಪತ್ರ ಬೇಕೆಂಬ ಕಾರಣಕ್ಕೆ ಮತ್ತೆ ಹಿಂದೆ ಕರೆಸಲಾಗಿದೆ. ಯುಎಸ್‌ಎಯಲ್ಲಿ ತಪಾಸಣೆ ಮಾಡಲಾಗುತ್ತಿದೆ, ಇಂತಹ ಪ್ರಮಾಣಪತ್ರ ನೀಡುವುದಿಲ್ಲ ಎಂದು ಯುಎಸ್‌ಎ ಸರಕಾರ ಹೇಳಿದೆ. ಆದರೆ ಭಾರತ ಸರಕಾರ ಪ್ರಮಾಣಪತ್ರ ಬೇಕೆಂದು ಕೇಳುತ್ತಿರುವುದರಿಂದ ನಾವು ಸಂಕಷ್ಟಕ್ಕೊಳಗಾಗಿದ್ದೇವೆ. ಭಾರತಕ್ಕೆ ಬರುವ ಬಗ್ಗೆ ದಾರಿ ತಿಳಿಯುತ್ತಿಲ್ಲ ಎಂದು ಆಡಿಯೋ ಮತ್ತು ವೀಡಿಯೋ ಮಾಡಿ ಯುವಕರು ಅಲವತ್ತುಕೊಂಡಿದ್ದಾರೆ.

ಶಿಪ್‌ನಲ್ಲಿ ಬಂದಿಯಾಗುತ್ತೇವೆ!
“ನಾವು ಕೆಲಸ ಮಾಡುತ್ತಿರುವ ಹಡಗು ಮಂಗಳವಾರ ಸಂಜೆ ಓಕ್‌ಲ್ಯಾಂಡ್‌ ಬಂದರಿನಿಂದ ಹೊರಟು 70 ಕಿ.ಮೀ. ದೂರದಲ್ಲಿ ಪ್ರತ್ಯೇಕಿಸಿ ನಿಲುಗಡೆ ಮಾಡಲಾಗುತ್ತದೆ. ಈಗ ಈ ಶಿಪ್‌ನಲ್ಲಿದ್ದು, ಶಿಪ್‌ ಹೊರಟ ಮೇಲೆ 14 ದಿನ ಅದರಿಂದ ಹೊರಗಡೆ ಬರದಂತೆ ಬಂದಿ ಮಾಡಲಾಗುತ್ತದೆ. ಆ ನಂತರದಲ್ಲಿ ನಮ್ಮನ್ನು ಸಂಪರ್ಕಿ ಸುವುದಕ್ಕೂ ಕಷ್ಟವಾಗಲಿದೆ. ಹೀಗಾಗಿ ಮಂಗಳವಾರ ಶಿಪ್‌ ಹೊರಡುವು ದರೊಳಗೆ ಭಾರತ ಸರಕಾರವು ಇಲ್ಲಿಂದ ರಕ್ಷಿಸುವುದಕ್ಕೆ ತುರ್ತು ಕ್ರಮ ತೆಗೆದುಕೊಳ್ಳಬೇಕೆಂದು’ ಆ ಯುವಕರು ವೀಡಿಯೋದಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ಸರಕಾರದ ಎಲ್ಲ ಪ್ರತಿನಿಧಿಗಳಿಗೆ ಈ ಬಗ್ಗೆ ವೀಡಿಯೋ, ಆಡಿಯೋ, ಟ್ವೀಟರ್‌ ಸಹಿತ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಾಕಿ ಗಮನಕ್ಕೆ ತಂದಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.