ಕಾಮಗಾರಿಗಳು ಪ್ರಗತಿ ಹಂತದಲ್ಲೇ ಬಾಕಿ!

ಮಳೆಗಾಲಕ್ಕೆ ಮೊದಲು ಪೂರ್ಣಗೊಳಿಸುವ ಸವಾಲು

Team Udayavani, Mar 17, 2020, 5:55 AM IST

mangalore-road-work

ಮಹಾನಗರ: ನಗರದ ವಿವಿಧೆಡೆ ಆರಂಭಗೊಂಡಿರುವ/ ಪ್ರಗತಿಯಲ್ಲಿರುವ ರಸ್ತೆ, ಚರಂಡಿ ಕಾಮಗಾರಿಗಳ ಪೈಕಿ ಕೆಲವು ಕಾಮಗಾರಿಗಳು ಭಾರೀ ನಿಧಾನವಾಗಿ ಸಾಗುತ್ತಿರುವ ಬಗ್ಗೆ ಸಾರ್ವ ಜನಿಕರಿಂದ ದೂರುಗಳು ಕೇಳಿಬಂದಿದ್ದು, ಕಾಮಗಾರಿಗಳಿಗೆ ವೇಗ ನೀಡುವ ಆವಶ್ಯಕತೆ ಇದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಹಾಗೂ ಪಾಲಿಕೆಯ ಅನುದಾನದಲ್ಲಿ ಕಾಮಗಾರಿ ಗಳು ನಡೆಯುತ್ತಿವೆ. ಹಲವೆಡೆ ಕಾಂಕ್ರೀಟ್‌ ರಸ್ತೆಗಳು ನಿರ್ಮಾಣವಾಗುತ್ತಿವೆ. ಇನ್ನು ಕೆಲವೆಡೆ ರಸ್ತೆ ವಿಸ್ತರಣೆ, ಫ‌ುಟ್‌ಪಾತ್‌ ರಚನೆ ನಡೆಯುತ್ತಿವೆ. ಇವುಗಳಲ್ಲಿ ಕೆಲವೇ ಕೆಲವು ಕಾಮಗಾರಿಗಳು ಮಾತ್ರ ವೇಗವಾಗಿ ಸಾಗುತ್ತಿವೆ. ಇನ್ನುಳಿದ ಕಾಮಗಾರಿಗಳು ಆಮೆಗತಿಯಲ್ಲಿವೆ. ಕೆಲವು ಕಾಮಗಾರಿಗಳು 6-7 ತಿಂಗಳುಗಳಿಂದ ನಡೆಯುತ್ತಲೇ ಇವೆ. ಸಾರ್ವಜನಿಕರ ಉಪಯೋಗಕ್ಕೆ ಮಾತ್ರ ಲಭ್ಯವಾಗುತ್ತಿಲ್ಲ.

ಬಂದರು ರಸ್ತೆ
ಬಂದರು ಭಾಗಕ್ಕೆ ಸಂಪರ್ಕ ಕಲ್ಪಿಸುವ ಎರಡು ಪ್ರಮುಖ ರಸ್ತೆಗಳಾದ ಅಜೀಜುದ್ದೀನ್‌ ರಸ್ತೆ ಮತ್ತು ಮಿಶನ್‌ ಸ್ಟ್ರೀಟ್ಸ್‌ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಪ್ರಗತಿಯಲ್ಲಿವೆ. ಅಜೀಜುದ್ದೀನ್‌ ರಸ್ತೆಯ ಬಹುತೇಕ ಭಾಗದ ಕಾಂಕ್ರೀಟ್‌ ಕಾಮಗಾರಿ ಪೂರ್ಣಗೊಂಡಿದೆ. ಒಂದು ಬದಿಯಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಇನ್ನೊಂದು ಬದಿಯಲ್ಲಿ ಕ್ಯೂರಿಂಗ್‌ ನಡೆಯುತ್ತಿದೆ. ಇಲ್ಲಿ ಭಾರೀ ಪ್ರಮಾಣದ ಕೇಬಲ್‌ನ್ನು ತೆರವುಗೊಳಿಸಬೇಕಾಗಿದ್ದ ಕಾರಣ ಕಾಮಗಾರಿ ವಿಳಂಬವಾಯಿತು ಎನ್ನುತ್ತಾರೆ ಸ್ಥಳೀಯ ಕಾರ್ಪೊರೇಟರ್‌ ಅಬ್ದುಲ್‌ ಲತೀಫ್.

ರಸ್ತೆಯ ಕೊನೆಯ ಭಾಗದಲ್ಲಿ (ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಎದುರು) ಅಂದರೆ, ಬಂದರು ಮುಖ್ಯರಸ್ತೆ ಸಂಪರ್ಕಿಸುವಲ್ಲಿ ಬಾಕಿಯಾಗಿದೆ. ಅಂಡರ್‌ಗ್ರೌಂಡ್‌ ಟವರ್‌ ಇದ್ದುದರಿಂದ ಅದನ್ನು ತೆರವುಗೊಳಿಸಲು ಸಮಾಯವಕಾಶ ಬೇಕಾಗಿದೆ. ಬಂದರು ಪ್ರದೇಶ ವಾಹನ ನಿಬಿಢತೆಯಿಂದ ಕೂಡಿರುವುದು ಕೂಡ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲು ತೊಡಕಾಗಿದೆ. ಇಲ್ಲಿ ಪುಟ್‌ಪಾತ್‌, ಚರಂಡಿ ಕಾಮಗಾರಿಯೂ ನಡೆಯಬೇಕಿದೆ. ಇತ್ತ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ ಸಮೀಪದ ಮೆಶಿನ್‌ ಸ್ಟ್ರೀಟ್ಸ್‌ ರಸ್ತೆ ಕಾಮಗಾರಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಡೆಯುತ್ತಿದ್ದು ಒಂದು ಬದಿ ಕಾಂಕ್ರೀಟ್‌ ಕಾಮಗಾರಿ ಪೂರ್ಣ ವಾಗಿದೆ. ಮತ್ತೂಂದು ಬದಿ ಕಾಮಗಾರಿ ಪ್ರಗತಿಯಲ್ಲಿದೆ. ಅಲ್ಲಿಯೇ ಪಕ್ಕದಲ್ಲಿರುವ 4ನೇ ಅಡ್ಡರಸ್ತೆಯ ಕಾಮಗಾರಿ ಒಂದು ವಾರದ ಹಿಂದೆ ಆರಂಭಿಸಲಾಗಿದೆ.

ಆರ್ಯ ಸಮಾಜ ರಸ್ತೆಯ ಒಂದು ಭಾಗ (ಕದ್ರಿ ಮುಖ್ಯರಸ್ತೆ ಕಡೆಯಲ್ಲಿ) ಹಾಗೆಯೇ ಬಾಕಿಯಾಗಿದೆ. ಜ್ಯೂಸ್‌ ಜಂಕ್ಷನ್‌ ಕಡೆಯಿಂದ ರಸ್ತೆ ಬಹುತೇಕ ಪೂರ್ಣಗೊಂಡಿದ್ದರೂ ಚರಂಡಿ, ಪುಟ್‌ಪಾತ್‌ ಕೆಲಸಗಳು ಆಗಿಲ್ಲ. ಬ್ರಿಡ್ಜ್ ರೋಡ್‌ನ‌ ಕಾಮಗಾರಿ ಕೂಡ ಪೂರ್ಣಗೊಂಡಿಲ್ಲ. ಗುಜ್ಜರಕೆರೆ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಪೂರ್ಣಗೊಂಡು ಕ್ಯೂರಿಂಗ್‌ ನಡೆಯುತ್ತಿದೆ. ಚರಂಡಿ, ಫ‌ುಟ್‌ಪಾತ್‌ ಕೆಲಸ ಬಾಕಿಯಾಗಿದೆ. ಪುರಭವನ ಪಕ್ಕದ ಅಂಡರ್‌ಪಾಸ್‌ನ ಒಂದು ಭಾಗ ಕೂಡ ಪೂರ್ಣಗೊಂಡಿಲ್ಲ. ಎರಡು ತಿಂಗಳುಗಳಿಂದ ಕಾಮಗಾರಿ ಪ್ರಗತಿಯಲ್ಲಿದೆ.

ಮಳೆಗಾಲ ಮೊದಲು ಅನುಮಾನ
ಹೆಚ್ಚಿನ ಕಾಮಗಾರಿಗಳು ಮಳೆಗಾಲಕ್ಕೆ ಪೂರ್ಣಗೊಳ್ಳುವುದು ಅನುಮಾನ. ಕಾಂಕ್ರೀಟ್‌ ರಸ್ತೆಗಳಾದರೂ ಚರಂಡಿಗಳಾಗದೆ ಇರುವುದರಿಂದ ಮಳೆಗಾದಲ್ಲಿ ತೊಂದರೆಯುಂಟಾಗುವ ಸಾಧ್ಯತೆ ಇದೆ. ಕೆಲವು ಅಂಗಡಿ ಮುಂಗಟ್ಟು, ಮನೆ ಯಂಗಳಕ್ಕೆ ನೀರು ನುಗ್ಗುವ ಆತಂಕವೂ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಂಡಿರುವ/ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಸಮರೋ ಪಾದಿಯಲ್ಲಿ ಪೂರ್ಣಗೊಳಿಸಬೇಕಾಗಿದೆ.

ಕಾಮಗಾರಿ ಪೂರ್ಣ
ಹಳೆ ಬಂದರು ಪ್ರದೇಶದಲ್ಲಿ ತುಂಬಾ ಹಳೆಯ ಕಾಲದ ಕೇಬಲ್‌ಗ‌ಳು ಕೂಡ ಭಾರೀ ಪ್ರಮಾಣದಲ್ಲಿದ್ದು ತೆರವುಗೊಳಿಸಲು ವಾರಕ್ಕೂ ಅಧಿಕ ಸಮಯ ಬೇಕಾಯಿತು. ಈಗ ರಸ್ತೆ ಕಾಂಕ್ರೀಟ್‌ ಬಹುತೇಕ ಪೂರ್ಣಗೊಂಡಿದೆ. ಇನ್ನು ಫ‌ುಟ್‌ಪಾತ್‌, ಚರಂಡಿಗೆ ಕೆಲವು ಅಂಗಡಿ ಯವರು ಜಾಗ ಬಿಟ್ಟು ಕೊಡಬೇಕಿದೆ. ಅವರು ಶೀಘ್ರ ತೆರವು ಮಾಡುವ ಭರವಸೆ ನೀಡಿದ್ದಾರೆ. ಅನಂತರ ಎಲ್ಲ ಕಾಮಗಾರಿ ಪೂರ್ಣಗೊಳ್ಳಲಿವೆ.
 - ಅಬ್ದುಲ್‌ ಲತೀಫ್, ಮನಪಾ ಸದಸ್ಯರು, 45ನೇ ಪೋರ್ಟ್‌ ವಾರ್ಡ್‌

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.