ಕಡತದಲ್ಲಿ ಉಳಿದ ಶಾಶ್ವತ ಕುಡಿಯುವ ನೀರಿನ ಯೋಜನೆ


Team Udayavani, Oct 27, 2018, 11:38 AM IST

27-october-6.gif

ಸುಳ್ಯ : ನ.ಪಂ. ಐದು ವರ್ಷದ ಆಡಳಿತ ಅವಧಿ ಕೆಲ ತಿಂಗಳಲ್ಲೇ ಮುಗಿಯುಲಿದೆ. ಹೊಸ ಚುನಾವಣೆಯು ಸನ್ನಿಹಿತದಲ್ಲಿದೆ. ಆದಾಗ್ಯೂ ಬಹು ವರ್ಷದ ಬಹು ಬೇಡಿಕೆಯ ಶಾಶ್ವತ ಕುಡಿಯುವ ನೀರಿನ ಅನುಷ್ಠಾನ ಪ್ರಸ್ತಾವನೆ ಕಡತ ಗೆದ್ದಲು ಹಿಡಿಯುತ್ತಿದೆ. ಸುಮಾರು 65.5 ಕೋಟಿ ರೂ. ವೆಚ್ಚದಲ್ಲಿ ಪಯಸ್ವಿನಿ ನದಿಗೆ ಡ್ಯಾಂ ಸಹಿತ ಶಾಶ್ವತ ನೀರು ಪೂರೈಕೆಗೆ ಬೇಕಾದ ಯೋಜನೆ ಜಾರಿಗೆ ಸರಕಾರದ ಹಂತದಲ್ಲಿ ಅನುಮೋದನೆ ಸಿಕ್ಕಿಲ್ಲ. ಅಂದರೆ ಸಿಗಲು ಪ್ರಯತ್ನವೂ ಆಗಿಲ್ಲ ಎಂದರ್ಥ.

ಪ್ರಸ್ತಾವನೆಯಲ್ಲಿ ಬಾಕಿ
ಐದಾರು ವರ್ಷಗಳ ಹಿಂದೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿತ್ತು. ನ.ಪಂ.ನ ಹಲವು ಸಾಮಾನ್ಯ ಸಭೆಗಳಲ್ಲಿ ಈ ವಿಚಾರ ಪ್ರಸ್ತಾವವಾಗಿತ್ತು. ಅದರಿಂದ ಜನರಿಗೆ ಏನೂ ಪ್ರಯೋಜನ ಆಗಿಲ್ಲ. ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಕೊಟ್ಟ ಆಶ್ವಾಸನೆಯೂ ಈಡೇರಿಲ್ಲ. ಸರ್ವ ಪಕ್ಷ ನಿಯೋಗ ತೆರಳುವ ಪ್ರಸ್ತಾವವೂ ಇಚ್ಛಾಶಕ್ತಿಯ ಕೊರತೆಯಿಂದ ಗುರಿ ಮುಟ್ಟಿಲ್ಲ.

ಶುದ್ಧ ನೀರಿಲ್ಲ!
ಕಲ್ಲುಮುಟ್ಲು ಪಂಪ್‌ ಹೌಸ್‌ನಲ್ಲಿ 50 ಲಕ್ಷ ಗ್ಯಾಲನ್‌ನ ಎರಡು ಹಾಗೂ 1 ಲಕ್ಷ ಒಂದು ಟ್ಯಾಂಕ್‌ ಇದೆ. ಅಲ್ಲಿಂದ ನಗರದ ಬೇರೆ ಭಾಗಗಳಿಗೆ ನೀರು ಹರಿಸಲಾಗುತ್ತದೆ. ಕೆಲವೆಡೆ ಕೊಳವೆಬಾವಿ ಮೂಲಕ ಬಳಸಲಾಗುತ್ತದೆ. ಆರಂಭದಲ್ಲಿ ಪಯಸ್ವಿನಿ ನದಿಯಿಂದ ಜಾಕ್‌ವೆಲ್‌ ಮೂಲಕ ನೀರು ಮೇಲೆತ್ತಿ, ಶುದ್ಧೀಕರಣದ ಬಳಿಕ ಕುಡಿಯಲು ಬಳಸಬೇಕು. ಆದರೆ ಇಲ್ಲಿ ಶುದ್ಧೀಕರಣ ಯಂತ್ರ ಸರಿಯಾಗಿಲ್ಲದ ಕಾರಣ ಹೊಳೆಯಲ್ಲಿ ಬರುವ ನೀರನ್ನು ನೇರವಾಗಿ ಜನರು ಬಳಸಬೇಕಿದೆ. ಮಳೆಗಾಲದ ಸಂದರ್ಭದಲ್ಲಿ ಹಲವು ಬಾರಿ ಕೆಸರು ಮಿಶ್ರಿತ ನೀರಿನ ಕಾರಣ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಭಾರೀ ಮಳೆಯ ಮಧ್ಯೆಯೂ ಟ್ಯಾಂಕರ್‌ ಬಳಸಿ ನೀರು ಹರಿಸುವ ಸ್ಥಿತಿ ಉಂಟಾಗಿತ್ತು.

ಮಳೆ ಬಂದರೆ ಪಾರು
ಪಯಸ್ವಿನಿ ನೀರಿನ ಹರಿವು ಕ್ಷೀಣವಾದಂತೆ ನ.ಪಂ. ವತಿಯಿಂದ ನಾಗಪಟ್ಟಣ ಸೇತುವೆ ಬಳಿ ಮರಳಿನ ಕಟ್ಟ ಜೋಡಿಸಿ ನೀರು ಸಂಗ್ರಹಿಸಲಾಗುತ್ತದೆ. 2016ರಲ್ಲಿ ಆ ಕಟ್ಟದಲ್ಲಿ ನೀರು ಬತ್ತಿ ಕುಡಿಯುವ ನೀರಿಗೆ ತತ್ವಾರ ಉಂಟಾಗುವ ಆತಂಕ ಎದುರಾಗಿತ್ತು. ಅದೇ ಹೊತ್ತಿಗೆ ಮಳೆಯಾದ ಕಾರಣ ನಗರವಾಸಿಗಳು ಪಾರಾಗಿದ್ದರು. ಆದರೆ ಈ ಬಾರಿಯ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ನದಿ ಮಟ್ಟದ ನೀರಿನ ಹರಿವು ಕಡಿಮೆಯಾಗಿದೆ. ಇದರಿಂದ ಬೇಸಗೆಯಲ್ಲಿ ನೀರಿನ ಬರ ಕಾಡುವ ಬಗ್ಗೆ ಜಲ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಪೂರೈಕೆ ಸಮಸ್ಯೆ 
40ಕ್ಕೂ ಅಧಿಕ ವರ್ಷಗಳ ಹಿಂದೆ ನಿರ್ಮಿಸಿದ ಕುಡಿಯುವ ನೀರಿನ ಘಟಕವೇ ಈಗಲೂ ಇದೆ. ನಗರದ ಜನಸಂಖ್ಯೆ ನಾಲ್ಕು ಪಟ್ಟು ಏರಿದೆ. 18 ವಾರ್ಡ್‌ ಇದ್ದುದು ಈ ಸಲ 20 ಆಗಿವೆ. 4,000ಕ್ಕೂ ಮಿಕ್ಕಿ ನಳ್ಳಿ ಸಂಪರ್ಕ ಬಳಕೆದಾರರು ಇದ್ದಾರೆ. ಕಲ್ಲುಮುಟ್ಲು ಪಂಪ್‌ಹೌಸ್‌ನ ಹಳೆಯ ವಾಟರ್‌ ಟ್ರೀಟ್‌ ಪ್ಲಾಂಟ್‌ನಿಂದ ನಗರಕ್ಕೆ ನೀರೊದಗಿಸಲಾಗುತ್ತಿದೆ. ಆದರೆ ಇದು ಇಲ್ಲಿನ ಬೇಡಿಕೆಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿಲ್ಲ. ಹೀಗಾಗಿ ವರ್ಷವಿಡೀ ಪೂರೈಕೆ ವ್ಯವಸ್ಥೆ ಲೋಪ, ಬೇಸಗೆಯ ಶಾಪ ಜನರಿಗೆ ತಪ್ಪಿಲ್ಲ.

ಏನಿದು ಯೋಜನೆ?
ಶಾಶ್ವತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಒಟ್ಟು 65.5 ಕೋಟಿ ರೂ. ಯೋಜನೆಯಿದು. ನಾಗಪಟ್ಟಣ ಸೇತುವೆ ಬಳಿ 13.4 ಕೋ.ರೂ. ವೆಚ್ಚದ ವೆಂಟೆಡ್‌ ಡ್ಯಾಂ, ಜಾಕ್‌ ವೆಲ್‌, ಪಂಪ್‌ ಹೌಸ್‌, 200 ಎಚ್‌ಪಿಯ ಎರಡು ಪಂಪ್‌ ಅಳವಡಿಕೆ, 8.5 ಎಂಎಲ್‌ಡಿ ವಾಟರ್‌ ಟ್ರೀಟ್‌ ಪ್ಲಾಂಟ್‌ ನಿರ್ಮಾಣ, ಕುರುಂಜಿಗುಡ್ಡೆಯಲ್ಲಿ 2.8 ಕೋಟಿ ರೂ. ವೆಚ್ಚದಲ್ಲಿ 15 ಲಕ್ಷ ಲೀಟರ್‌ ನೀರು ಸಂಗ್ರಹದ ಟ್ಯಾಂಕ್‌, ಜಯನಗರ, ಬೋರುಗುಡ್ಡೆ, ಕಲ್ಲುಮುಟ್ಲುವಿನಲ್ಲಿ 3.38 ಕೋಟಿ ರೂ. ವೆಚ್ಚದಲ್ಲಿ 5 ಲಕ್ಷ ಲೀ. ನೀರು ಸಂಗ್ರಹದ ಮೂರು ಟ್ಯಾಂಕ್‌, 84 ಲಕ್ಷ ರೂ. ವೆಚ್ಚದಲ್ಲಿ 2.5 ಲಕ್ಷ ಲೀ. ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ ಕಾಮಗಾರಿ ಕೈಗೆತ್ತಿಕೊಳ್ಳುವ ಕುರಿತು ಪ್ರಸ್ತಾವಿಸಲಾಗಿತ್ತು.

ವಿಶೇಷ ವರದಿ

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.