ಡಂಪಿಂಗ್‌ ಯಾರ್ಡ್‌: ಫೋನ್‌ ಅಭಿಯಾನ


Team Udayavani, Mar 30, 2017, 4:48 PM IST

dumping-yard.jpg

ಪುತ್ತೂರು : ಬನ್ನೂರಿನಲ್ಲಿರುವ ಪುತ್ತೂರು ನಗರಸಭೆಯ ಡಂಪಿಂಗ್‌ ಯಾರ್ಡ್‌ ಸಮಸ್ಯೆ ನಿವಾರಣೆ ಕುರಿತ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ತತ್‌ಕ್ಷಣವೇ ಸ್ಪಂದಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಯವರಿಗೆ ದೂರವಾಣಿ ಮೂಲಕ ಮನವಿ ಮಾಡುವ ಅಭಿಯಾನವನ್ನು ಸ್ಥಳೀಯ ನಿವಾಸಿಗಳು ಆರಂಭಿಸಿದ್ದಾರೆೆ. ಈಗಾಗಲೇ ಹಲವು ಮಂದಿ ದೂರವಾಣಿ ಮೂಲಕ ಸಮಸ್ಯೆ ತೋಡಿಕೊಂಡಿದ್ದಾರೆ.

ಬನ್ನೂರು ಡಂಪಿಂಗ್‌ ಯಾರ್ಡ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ತಿಂಗಳು ಸಮೀಪಿಸಿತು. ಈಗಲೂ ಹೊಗೆಯಾಡು ವುದು ನಿಂತಿಲ್ಲ. ಸೋಮವಾರ ಸಂಜೆ ಮತ್ತೆ ಸ್ವಲ್ಪ ಮಟ್ಟಿನ ಬೆಂಕಿ ಕಾಣಿಸಿಕೊಂಡಿದೆ. ಈ ಪ್ರದೇಶದ ಮಂದಿಗೆ ನೆಮ್ಮದಿಯಿಂದ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಜತೆಗೆ ಅನಾರೋಗ್ಯವೂ ಕಾಡುತ್ತಿದೆ. ಹೀಗಾಗಿ ಬನ್ನೂರು ಡಂಪಿಂಗ್‌ ಯಾರ್ಡ್‌ ಪ್ರದೇಶಕ್ಕೆ ತ್ಯಾಜ್ಯ ಸುರಿಯದಂತೆ ಈಗಾಗಲೇ ಜಿಲ್ಲಾಧಿಕಾರಿ ಸಹಿತ ಎಲ್ಲ ಅಧಿಕಾರಿಗಳಿಗೆ ಬನ್ನೂರಿನ ಜನತೆ ಮನವಿ ಮಾಡಿದ್ದಾರೆ.

ಮುಗಿದ ಗಡುವು
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೌಖೀಕ ಸೂಚನೆ ನೀಡಿ ಸಮಸ್ಯೆ ಬಗೆಹರಿಸಬೇಕು, ಹೊಗೆಯಾಡದಂತೆ ಕ್ರಮ ಕೈಗೊಳ್ಳಬೇಕು ಎಂದೂ ಸೂಚಿಸಿದ್ದರು. ಈ ನಡುವೆ ಪೌರಾಯುಕ್ತರು ಹಾಗೂ ಶಾಸಕರು ಮತ್ತು ನಗರಸಭಾ ಆಡಳಿತ 20 ದಿನಗಳ ಕಾಲಾವಕಾಶವನ್ನು ಗ್ರಾಮದ ಜನರಲ್ಲಿ ಕೇಳಿದ್ದು, ಇದೀಗ ಆ ಗಡುವೂ ಮುಗಿದಿದೆ. ಆದರೂ ಪ್ರತಿಕ್ರಿಯೆ ಇಲ್ಲ. ಇದಕ್ಕಾಗಿ ಈಗ ಗ್ರಾಮದ ಜನತೆ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ.

ಇದರ ಆರಂಭದ ಹಂತವಾಗಿ ಜಿಲ್ಲಾಧಿಕಾರಿಗಳಿಗೆ ಗ್ರಾಮದ ಜನತೆ ಕರೆ ಮಾಡಿ ಸಮಸ್ಯೆ ಕಡೆಗೆ ಗಮನಹರಿಸುವಂತೆ ಒತ್ತಾಯ ಮಾಡಿದ್ದಾರೆ. ಈಗಾಗಲೇ ಗ್ರಾಮದ ಸುಮಾರು 50ಕ್ಕೂ ಹೆಚ್ಚು ಮಂದಿ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದಾರೆ.

ಜಿಲ್ಲಾಧಿಕಾರಿ ಮತ್ತೆ ಭರವಸೆ
ಬನ್ನೂರಿನ ಸಮಸ್ಯೆ ಇಂದಿನಿಂದ ನಾಳೆ ಬದಲಾಯಿಸಲು ಸಾಧ್ಯವಿಲ್ಲದಿರುವುದ ರಿಂದ ಈಗಾಗಲೇ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ಮೂಲಕ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಸೂಚಿಸಿ ಆದೇಶ ಮಾಡಲಾಗಿದೆ. ಆ ಬಳಿಕ ಸ್ಥಳಕ್ಕೆ ಬಂದು ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾಧಿ ಕಾರಿ ತಿಳಿಸಿದ್ದಾರೆ ಎಂದು ಫೋನ್‌ ಕರೆ ಮಾಡಿದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.