ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ


Team Udayavani, Aug 31, 2022, 10:07 AM IST

ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಮಂಗಳೂರು ಸಜ್ಜುಗೊಂಡಿದೆ. ಸೆ. 2ರಂದು ನಡೆಯುವ ಪ್ರಧಾನಿಯವರ ಕಾರ್ಯಕ್ರಮಕ್ಕೆ ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದೆ.

ಸಿದ್ಧತೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಸಚಿವರಿಂದ ಪರಿಶೀಲನೆ
ಕೇಂದ್ರ ನೌಕಾ ಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ, ನವಮಂಗಳೂರು ಬಂದರಿನಲ್ಲಿ ಹಾಗೂ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಪ್ರಧಾನಿಯವರ ಕಾರ್ಯಕ್ರಮಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಮಂಗಳವಾರ ಪರಿಶೀಲಿ ಸಿದರು. ಬಳಿಕ ಸಭೆ ನಡೆಸಿ ಅವಶ್ಯ ಸೂಚನೆಗಳನ್ನು ನೀಡಿದರು.

ಪ್ರಧಾನಿಯವರ ಕಾರ್ಯಕ್ರಮ ದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌, ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸುನಿಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಎಸ್‌. ಅಂಗಾರ ಮತ್ತು ಶಾಸಕರು ಉಪಸ್ಥಿತರಿರುತ್ತಾರೆ.

ಪ್ರಧಾನಿ ಕಾರ್ಯಕ್ರಮ
ಮಧ್ಯಾಹ್ನ 1 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ವಿವಿಧ ಯೋಜನೆ ಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಬಳಿಕ ಗೋಲ್ಡ್‌ ಫಿಂಚ್‌ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಎಸ್‌ಪಿಜಿ ತಂಡ ಆಗಮನ
ಪ್ರಧಾನಿಯವರ ಭದ್ರತಾ ವ್ಯವಸ್ಥೆಯ ನಿಯೋಜನೆಗೊಂಡಿರುವ ಎಸ್‌ ಪಿಜಿಯ (ಸ್ಪೆಷಲ್‌ ಪ್ರೊಟೆ ಕ್ಷನ್‌ ಗ್ರೂಪ್‌) ಪೂರ್ಣ ಪ್ರಮಾಣದ ತಂಡ ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ಆರಂಭಿಸಿದೆ.
1.5 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಮತ್ತು ಪಾನೀಯ ವ್ಯವಸ್ಥೆ ಮಾಡಲಾಗಿದೆ.

ಪರಶುರಾಮನ ವಿಗ್ರಹ ಸ್ಮರಣಿಕೆ
ಪ್ರಧಾನಿ ಮೋದಿಯವರಿಗೆ ಪರಶುರಾಮ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ದ.ಕ., ಉಡುಪಿ ಸೇರಿದಂತೆ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯಾಗಿದೆ. ವಿಷ್ಣುವಿನ ಅವತಾರವಾಗಿರುವ ಪರಶುರಾಮರು ಕೊಡಲಿ ಬೀಸಿ ಕಡಲು ಹಿಂದೆ ಸರಿಯುವಂತೆ ಮಾಡಿ ಕರಾವಳಿಯನ್ನು ಸೃಷ್ಟಿಸಿದ ಐತಿಹ್ಯವಿದೆ. ಈ ಹಿನ್ನೆಲೆಯಲ್ಲಿ ಪರಶುರಾಮ ಸೃಷ್ಟಿ ಕರಾವಳಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಪರಶುರಾಮ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ಮೂರ್ತಿ 2.5 ಅಡಿ ಎತ್ತರವಿದ್ದು ಉಡುಪಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.