ಪೊಲೀಸ್‌ ಇಲಾಖೆ ಬಲವರ್ಧನೆ: ಆರಗ

ಧರ್ಮಸ್ಥಳ: ನೂತನ ಪೊಲೀಸ್‌ ಠಾಣೆ ಕಟ್ಟಡಕ್ಕೆ ಶಿಲಾನ್ಯಾಸ

Team Udayavani, Nov 10, 2021, 4:38 AM IST

ಪೊಲೀಸ್‌ ಇಲಾಖೆ ಬಲವರ್ಧನೆ: ಆರಗ

ಬೆಳ್ತಂಗಡಿ: ನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಕ್ಷಾನುಗಟ್ಟಲೆ ಭಕ್ತರು ಸಂದರ್ಶಿಸುವುದರಿಂದ ಅಗತ್ಯವಾಗಿ ಪೊಲೀಸ್‌ ಠಾಣೆ ನಿರ್ಮಾಣವಾಗಬೇಕಿತ್ತು. 2.18 ಕೋ.ರೂ. ವೆಚ್ಚದ ಸುಸಜ್ಜಿತ ಕಟ್ಟಡ ರಚನೆಯಾಗಲಿದ್ದು, ಹೆಚ್ಚುವರಿ ವ್ಯವಸ್ಥೆಗಾಗಿ ಪೂರಕ 1 ಕೋ.ರೂ. ಅನುದಾನ ಒದಗಿಸಲಾಗುವುದು, ಈ ಮೂಲಕ ರಾಜ್ಯದ ಪೊಲೀಸ್‌ ಇಲಾಖೆ ಬಲವರ್ಧನೆಗೆ ಅಗತ್ಯ ಯೋಜನೆ ರೂಪಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ವಾಸನೆ ನೀಡಿದರು.

ಕರ್ನಾಟಕ ರಾಜ್ಯ ಪೊಲೀಸ್‌, ದ.ಕ. ಜಿಲ್ಲಾ ಪೊಲೀಸ್‌ ಘಟಕದಿಂದ ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿರುವ 2.18. ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್‌ ಠಾಣೆಯ ನೂತನ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಶುಭಾಶಂಸನೆ ಮಾಡಿದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಸಮಾಜದಲ್ಲಿ ಅನ್ಯಾಯ ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಿ ಶಾಂತಿ, ಸುವ್ಯವಸ್ಥೆ ಹಾಗೂ ಸಾಮಾಜಿಕ ಸಾಮರಸ್ಯ ಕಾಪಾಡಲು ಪೊಲೀಸರು ಉತ್ತಮ ಸೇವೆ ನೀಡುತ್ತಿದ್ದಾರೆ. ಪೊಲೀಸ್‌ ಠಾಣೆ ಭಯವನ್ನು ಹುಟ್ಟಿಸದೆ ರಕ್ಷಣೆ ನೀಡುವ ವಿಶ್ವಾಸ ಮೂಡುವಂತಿರಬೇಕು. ಬದುಕು ಮತ್ತು ಬದುಕಲು ಬಿಡು ಎಂಬ ತಣ್ತೀದ ನೆಲೆಯಲ್ಲಿ ಧರ್ಮರಕ್ಷಣೆಯೊಂದಿಗೆ ಶಾಂತಿ, ಸುಭಿಕ್ಷೆ ಕಾಪಾಡಲು ದಂಡಾಧಿಕಾರಿಗಳಾದ ಪೊಲೀಸರ ಸೇವೆ ಅವಿರತವಾಗಲಿ ಎಂದರು.

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಅನುಗ್ರಹ ಹಾಗೂ ಅಣ್ಣಪ್ಪ ಸ್ವಾಮಿಯ ಭಯದಿಂದ ಸತ್ಯ, ಧರ್ಮ, ನ್ಯಾಯ, ನೀತಿ ಸದಾ ಜಾಗೃತವಾಗಿದೆ ಎಂದ ಅವರು ಪೊಲೀಸ್‌ ಠಾಣಾ ಕಟ್ಟಡ ಪೂರ್ಣಗೊಂಡು ಜನಸೇವೆಗೆ ಸಿಗುವಂತಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ:ಭಾರತೀಯ ಮೂಲದವನ ಮರಣದಂಡನೆಗೆ ತಡೆ ನೀಡಿದ ಸಿಂಗಾಪುರ ನ್ಯಾಯಾಲಯ

ಶಾಸಕ ಹರೀಶ್‌ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಪೊಲೀಸ್‌ಠಾಣೆಗೆ ಹೆಚ್ಚುವರಿ 1.30 ಕೋ.ರೂ. ಅನುದಾನ ಹಾಗೂ ಸಿಬಂದಿ ನೇಮಕ ಅವಶ್ಯವಿದೆ. ಧರ್ಮಸ್ಥಳ ಗ್ರಾಮವು ಸುತ್ತಮುತ್ತ 18 ಗ್ರಾಮಗಳಿಗೆ ಕಾರ್ಯವ್ಯಾಪ್ತಿ ವಿಸ್ತರಿಸುವ ಸಲುವಾಗಿ ಇಲ್ಲಿ ವೃತ್ತ ನಿರೀಕ್ಷ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಜತೆಗೆ ವಿಪತ್ತು ನಿರ್ವಹಣೆಗಾಗಿ ಅಗ್ನಿಶಾಮಕ ದಳ ಘಟಕವನ್ನು ಧರ್ಮಸ್ಥಳದಲ್ಲಿ ಪ್ರಾರಂಭಿಸಬೇಕೆಂದ ಅವರು ಪೊಲೀಸರಿಗೆ ಅವಶ್ಯವಿರುವ ವಸತಿ ಸಮುಚ್ಚಯ ನಿರ್ಮಿಸಲು ನೆರವು ನೀಡುವಂತೆ ಮನವಿ ಮಾಡಿದರು.

ಕ.ರಾ.ಪೊ.ವ. ಮುಖ್ಯಅಭಿಯಂತ ಎನ್‌.ಜಿ.ಗೌಡಯ್ಯ, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಸಹಾಯಕ ಪೊಲೀಸ್‌ಅಧೀಕ್ಷಕ ಶಿವಾಂಶು ರಜಪೂತ್‌ ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಸ್ವಾಗತಿಸಿದರು. ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್‌ ವಂದಿಸಿದರು.

ಗ್ರಾ.ಯೋಜನೆಯಿಂದ ಏಳಿಗೆ
ಪರಿಸರದಿಂದ ಆರಂಭಿಸಿ ಮನುಷ್ಯನವರೆಗಿ ಸರ್ವತೋಮುಖ ಬೆಳವಣಿಗೆಯಲ್ಲಿ ಒಂದು ಸರಕಾರ ಅನುಸರಿಸಬೇಕಾದ ಯೋಜನೆಗಳನ್ನು ಡಾ| ಹೆಗ್ಗಡೆಯವರ ಅಣತಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಕಾರಗೊಂಡಿದೆ. ಜನರಲ್ಲಿ ಆರ್ಥಿಕ ಶಿಸ್ತು, ಸಂಯಮ, ಸೇವಾ ಕಳಕಳಿ, ದಯೆ, ಅನುಕಂಪ, ಸ್ವಾವಲಂಬನೆ ಮೊದಲಾದ ಮಾನವೀಯ ಮೌಲ್ಯಗಳು ಮೂಡಿ ಬಂದಿದ್ದರಿಂದ ಶ್ರೀಸಾಮಾನ್ಯರ ಪರಿವರ್ತನೆಗೆ ನಾಂದಿ ಹಾಡಿದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.