“ಪೊಲೀಸರಿಗೆ  ಸಾರ್ವಜನಿಕರ  ಸಹಕಾರ  ಅಗತ್ಯ’


Team Udayavani, Jul 24, 2017, 8:10 AM IST

agatya.jpg

ಉಪ್ಪಿನಂಗಡಿ : ಪೊಲೀಸ್‌ ಇಲಾಖೆಯ ಪ್ರತಿಯೊಂದು ಕೆಲಸ ಗಳಲ್ಲೂ ಸಾರ್ವಜನಿಕರ ಸಹಕಾರ ಅತೀ ಅಗತ್ಯ. ಈ ನಿಟ್ಟಿನಲ್ಲಿ ಗ್ರಾಮದ ಬೀಟ್‌ ಪೊಲೀಸ್‌ ಸಿಬಂದಿಗೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ರೆಡ್ಡಿ ಹೇಳಿದರು.

ಅವರು ಉಪ್ಪಿನಂಗಡಿಯಲ್ಲಿ ಠಾಣಾ ವ್ಯಾಪ್ತಿಯ ಗ್ರಾಮ ಗಸ್ತು ಸಭೆಯಲ್ಲಿ ಮಾತನಾಡಿದರು. 
ಗ್ರಾಮದ ಮಟ್ಟಿಗೆ ಬೀಟ್‌ ಪೊಲೀಸ್‌ ಅಲ್ಲಿನ ಪೊಲೀಸ್‌ ಅಧಿಕಾರಿ ಆಗಿರುತ್ತಾರೆ. ಗ್ರಾಮದಲ್ಲಿ ನಡೆಯುವ, ಆಗು-ಹೋಗುಗಳ ಪ್ರತಿಯೊಂದು ವಿಚಾರವನ್ನು ಬೀಟ್‌ ಪೊಲೀಸ್‌ ಗಮನಕ್ಕೆ ತರಬೇಕು. ಯಾವುದೇ ಅಕ್ರಮ, ಅನಾಚಾರದ ಬಗ್ಗೆಯೂ ಬೀಟ್‌ ಪೋಲಿಸ್‌ಗೆ ತಿಳಿಸಬಹುದು. ಬೀಟ್‌ ಸಮಿತಿಯ ಮೂಲಕವೂ ತಿಳಿಸಬಹುದು. ಬೀಟ್‌ ಪೊಲೀಸರಿಂದ ಸಾಧ್ಯವಾಗದ್ದನ್ನು ಠಾಣೆಗೆ, ನನ್ನ ಗಮನಕ್ಕೂ ತರಬಹುದು ಎಂದು ಅವರು ತಿಳಿಸಿದರು.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 38 ಬೀಟ್‌ಗಳಿವೆ. ಬಹುತೇಕ 1 ಬೀಟ್‌ಗೆ ಓರ್ವ ಪೊಲೀಸ್‌ ಇದ್ದಾರೆ. ಇನ್ನು ಕೆಲವು ಕಡೆಗಳಲ್ಲಿ 2 ಬೀಟ್‌ಗಳಿಗೆ ಓರ್ವ ಪೊಲೀಸ್‌ ಇರುತ್ತಾರೆ. ಒಟ್ಟು 24 ಪೊಲೀಸ್‌ ಬೀಟ್‌ ಪೊಲೀಸ್‌ ಆಗಿ ಕೆಲಸ ಮಾಡಲಿದ್ದಾರೆ. ಗ್ರಾಮಸ್ಥರು ಆಯಾ ಗ್ರಾಮದ ಬೀಟ್‌ ಪೊಲೀಸ್‌ ಬಗ್ಗೆ ತಿಳಿದುಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು. ಸಭೆಯಲ್ಲಿ ಬೀಟ್‌ ಪೊಲೀಸ್‌ ಪರಿಚಯ ಮಾಡಿಸಿದರು.

ದುರುಪಯೋಗ ಆಗದಿರಲಿ 
ಸಭೆಯಲ್ಲಿ ಎಸ್‌.ಪಿ. ಈ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಮಾತನಾಡಿದ ಗ್ರಾಮಸ್ಥರು, ಕೆಲವೊಂದು ಗ್ರಾಮದಲ್ಲಿ ಗ್ರಾಮ ಸಮಿತಿ ಆಗಿದೆ. ಆ ಸಮಿತಿಯಲ್ಲಿ ಯಾರಿದ್ದಾರೆ ಎನ್ನುವುದೇ ಗೊತ್ತಿಲ್ಲ. ಕೆಲ ವೊಂದು ಕಡೆ ಸಭೆಯೂ ನಡೆದಿದೆ. ಆದರೆ ಯಾವುದೇ ಕಾರಣಕ್ಕೂ ಈ ಸಮಿತಿಯ ಸದಸ್ಯರು ಇದರಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಯಾರನ್ನೋ, ಯಾವುದೋ ಕಾರಣ ದಿಂದ ದೂರು ನೀಡುವ ಹಾಗೆ ಆಗದಿರಲಿ. ಆ ರೀತಿಯಿಂದಾಗಿ ಅಮಾ ಯಕರು ಸಮಸ್ಯೆಗೆ ಒಳಗಾಗದಂತೆ ನೋಡಿಕೊಳ್ಳಬೇಕು ಎಂದರು.

ದುರುಪಯೋಗ ಆಗದು
ಇದಕ್ಕೆ ಪ್ರತಿಕ್ರಿಯಿಸಿದ ಎಸ್‌.ಪಿ. ಅಧಿಕಾರ ದುರುಪಯೋಗ ಆಗಲು ಸಾಧ್ಯ ಇಲ್ಲ. ಅಂತಹ ಸನ್ನಿವೇಶ ನಡೆದರೆ, ಆ ರೀತಿಯ ಅನುಮಾನಗಳು ಇದ್ದರೆ ನೇರವಾಗಿ ನನಗೆ ತಿಳಿಸಬಹುದಾಗಿದೆ. ಅಷ್ಟಕ್ಕೂ ಸಮಿತಿಯಲ್ಲಿ ಇರುವ ಯಾರೂ ಕೂಡ ಯಾವುದೇ ಕಾರಣಕ್ಕೂ ಸಮಿತಿಯನ್ನು ದುರುಪಯೋಗ ಮಾಡಿಕೊಳ್ಳಬಾರದು. ಈ ರೀತಿಯ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯ ಮೂಲಕ ಗ್ರಾಮದಲ್ಲಿ ಅಪರಾಧ ಕಡಿಮೆ ಆಗಬೇಕು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇದು ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ಉಪ್ಪಿನಂಗಡಿ ವರ್ತಕ ಸಂಘದ ಯು.ಜಿ. ರಾಧಾ, ಕೈಲಾರ್‌ ರಾಜ್‌ಗೊàಪಾಲ್‌ ಭಟ್‌, ಗ್ರಾಮ ಪಂಚಾಯತ್‌ ಸದಸ್ಯ ಸುನಿಲ್‌, ಕರಾಯ ಗ್ರಾಮದ ನಾರಾಯಣ ಭಟ್‌, ಇಲ್ಯಾಸ್‌, ಪೆರ್ನೆ ಗ್ರಾಮದ ಗ್ರಾಮ ಪಂಚಾಯತ್‌ ಸದಸ್ಯರಾದ ಅಬ್ದುಲ್ಲ, ಅಬ್ದುಲ್‌ ರಜಾಕ್‌, ಶ್ರೀಧರ ಗೌಡ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೆ. ಅಬ್ದುಲ್‌ ರಹಿ ಮಾನ್‌, ನೆಲ್ಯಾಡಿ ಗ್ರಾಮ ಪಂಚಾಯತ್‌ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌, ತಾಲೂಕು ಪಂಚಾಯತ್‌ ಸದಸ್ಯೆ ಸುಜಾತಾ ಕೃಷ್ಣ,  ಗ್ರಾಮ ಪಂಚಾಯತ್‌ ಸದಸ್ಯ ಯು.ಟಿ. ತೌಸೀಫ್, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳಾದ ಜಗದೀಶ್‌ ಶೆಟ್ಟಿ, ಎಂ. ವಿಶ್ವನಾಥ್‌, ಮಾಣಿಕ್ಯರಾಜ್‌ ಪಡಿವಾಳ್‌, ಪೌಲ್‌ ಡಿ’ಸೋಜಾ, ಕೆ.ಇ. ಅಬೂಬಕ್ಕರ್‌ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮಾಂತರ ಪೊಲೀಸ್‌ ಇನ್‌ಸ್ಪೆಕ್ಟರ್‌ ಅನಿಲ್‌ ಕುಲಕರ್ಣಿ ಸ್ವಾಗತಿಸಿ, ಪೊಲೀಸ್‌ ಸಿಬಂದಿ ಮನೋಹರ್‌ ವಂದಿಸಿದರು. ದೇವಿದಾಸ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.