ಬಿಜೆಪಿಯದ್ದು ಕಲ್ಲನ್ನು ಪೂಜೆ ಮಾಡುವ ಸಂಸ್ಕೃತಿಯೇ ಹೊರತು ಕಲ್ಲು ಎಸೆಯುವ ಸಂಸ್ಕೃತಿಯಲ್ಲ


Team Udayavani, Aug 24, 2024, 11:58 AM IST

ಐವನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು: ಆ.28 ರಂದು ಜಿಲ್ಲೆಯಾದ್ಯಂತ ರಸ್ತೆ ತಡೆ

ಮಂಗಳೂರು: ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರ ವಿರುದ್ಧ ದೂರು ನೀಡಿದರೂ ಪೊಲೀಸರು ಇನ್ನೂ ಪ್ರಕರಣ ದಾಖಲಿಸದಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವಮೋರ್ಚ ವತಿಯಿಂದ ಆಗಸ್ಟ್‌ 28 ರಂದು ಜಿಲ್ಲೆಯಾದ್ಯಂತ ರಸ್ತೆ ತಡೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡುತ್ತೇವೆ ಎಂದು ಬಿಜೆಪಿ ಯುವಮೋರ್ಚ ಜಿಲ್ಲಾಧ್ಯಕ್ಷ ನಂದನ್‌ ಮಲ್ಯ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಪೊಲೀಸರ ನಿರ್ಲಕ್ಷ್ಯದಿಂದಾಗಿ ರಾಷ್ಟ್ರವಿರೋಧಿಗಳಿಗೆ ಕುಮ್ಮಕ್ಕು ಸಿಗುವಂತಾಗಿದೆ. ಐವನ್‌ ಅವರ ವಿರುದ್ಧ ಪ್ರಕರಣ ದಾಖಲು ಮಾಡುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ. ಸದ್ಯ ಕೃಷ್ಣ ಜನ್ಮಾಷ್ಟಮಿ ಹಬ್ಬ ಬರಲಿದ್ದು, ಜನರಿಗೆ ತೊಂದರೆ ಆಗಬಾರದು ಎಂದು ರಸ್ತೆ ತಡೆ ಪ್ರತಿಭಟನೆಯನ್ನು ನಾಲ್ಕು ದಿನ ಮುಂದೂಡಿದ್ದೆವು. ರಾಷ್ಟ್ರವಿರೋಧಿ ಹೇಳಿಕೆ ನೀಡಿದ ಐವನ್‌ ಅವರು ಕ್ಷಮೆ ಕೇಳುವ ಬದಲು ತನ್ನ ಹೇಳಿಕೆಯನ್ನೇ ಸಮರ್ಥಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಪ್ರಕರಣ ದಾಖಲು ಮಾಡುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದರು. ಬಿಜೆಪಿ ಶಾಸಕರ ಮೇಲೆ ಕೆಲವೇ ಗಂಟೆಗಳಲ್ಲಿ ಕೇಸ್‌ ದಾಖಲಾಗಿತ್ತು. ಕಾನೂನು ರಕ್ಷಿಸುತ್ತೇವೆ ಎಂದು ಪೊಲೀಸರು ಪ್ರಮಾಣವಚನ ಸ್ವೀಕರಿಸುತ್ತಾರೆ. ಆದರೆ ಐವನ್‌ ವಿಚಾರದಲ್ಲಿ ಕಾನೂನು ಬದ್ಧವಾಗಿ ನಡೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ಐವನ್‌ ಡಿಸೋಜ ಅವರು ರಾಷ್ಟ್ರವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಹೋರಾಟದ ಬಗ್ಗೆಯೂ ನಾವು ಚಿಂತನೆ ಮಾಡುತ್ತಿದ್ದೇವೆ. ತನ್ನ ಬೆಂಬಲಿಗರಿಂದಲೇ ಐವನ್‌ ಅವರು ತಮ್ಮ ಮನೆಗೆ ಕಲ್ಲು ಎಸೆಯಲು ಹೇಳಿ ಆ ಆರೋಪವನ್ನು ಬಿಜೆಪಿಯತ್ತ ಮಾಡುತ್ತಿದ್ದಾರೆ. ಬಿಜೆಪಿಯದ್ದು ಕಲ್ಲನ್ನು ಪೂಜೆ ಮಾಡುವ ಸಂಸ್ಕೃತಿಯೇ ಹೊರತು ಕಲ್ಲು ಎಸೆಯುವ ಸಂಸ್ಕೃತಿಯಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಉಮೇಶ್‌ ಕುಲಾಲ್‌, ಅರುಣ್‌ ಶೇಟ್‌, ಅಶ್ವಿತ್‌ ಕೊಟ್ಟಾರಿ, ರಕ್ಷಿತ್‌ ಪೂಜಾರಿ, ನಿತೇಶ್‌ ಕಲ್ಲೇಗ, ಶಶಿರಾಜ್‌ ಬೆಳ್ತಂಗಡಿ, ಮುರಳಿ, ಭರತ್ ರಾಜ್‌ ಕೃಷ್ಣಾಪುರ ಇದ್ದರು.

ಇದನ್ನೂ ಓದಿ: Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ

ಟಾಪ್ ನ್ಯೂಸ್

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

Thimarodi

Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೂರು

kejriwal 2

Kejriwal ಜೈಲೋ, ಬಿಡುಗಡೆ ಭಾಗ್ಯವೋ? ಇಂದು ಸುಪ್ರೀಂ ತೀರ್ಪು

1-dp

Namaz, ಆಜಾನ್‌ ವೇಳೆ ದುರ್ಗಾಪೂಜೆ ಸ್ಥಗಿತ: ಬಾಂಗ್ಲಾ ಸರಕಾರ

Bajpe

Bajpe-Kateel State Highway: ಕಾರು ಢಿಕ್ಕಿ : 6 ವಿದ್ಯುತ್‌ ಕಂಬಗಳಿಗೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajpe

Bajpe-Kateel State Highway: ಕಾರು ಢಿಕ್ಕಿ : 6 ವಿದ್ಯುತ್‌ ಕಂಬಗಳಿಗೆ ಹಾನಿ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-cji

CJI ಮನೆಗೆ ಮೋದಿ ಭೇಟಿ: ರಾಜಕೀಯ ಸಂಘರ್ಷ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

1-vinesh

Vinesh Phogat ಆಸ್ತಿ ಮೌಲ್ಯ ಎಷ್ಟು ಗೊತ್ತೇ? ವಿವರ ಇಲ್ಲಿದೆ

Thimarodi

Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೂರು

1-weeqeqeqeqwe-w

Manipur ಪೊಲೀಸರ ಕೈಗೆ ಮಷೀನ್‌ ಗನ್‌: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.