ಮಾಲಿನ್ಯದಿಂದ ಜೋಕಟ್ಟೆ ಗ್ರಾಮಸ್ಥರಿಗೆ ನಿತ್ಯ ನರಕಯಾತನೆ


Team Udayavani, Sep 2, 2021, 3:50 AM IST

ಮಾಲಿನ್ಯದಿಂದ ಜೋಕಟ್ಟೆ ಗ್ರಾಮಸ್ಥರಿಗೆ ನಿತ್ಯ ನರಕಯಾತನೆ-1

ಜೋಕಟ್ಟೆ ಗ್ರಾಮದ ಸುತ್ತಮುತ್ತ ಹಲವು ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಕಂಪೆನಿಗಳ ಹೊರಸೂಸುವ ಮಾಲಿನ್ಯದಿಂದ ಸ್ಥಳೀಯರು ವ್ಯಥೆಪಡುವಂತಾಗಿದೆ. ಇದಕ್ಕೆ ಪರಿಹಾರ ಕ್ರಮ ಅಗತ್ಯ. ಗ್ರಾಮದಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವುದು ಅಗತ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ ಮೂಲಕ ಪ್ರಯತ್ನಿಸಲಾಗಿದೆ.

ಸುರತ್ಕಲ್‌: 62ನೇ ತೋಕೂರು ಗ್ರಾ.ಪಂ. ಪಾಲಿಕೆ ಗಡಿಭಾಗದಲ್ಲಿರುವ ಗ್ರಾಮವಾಗಿದೆ. ಕಂಪೆನಿಗಳ ಮಾಲಿನ್ಯವು ಇಲ್ಲಿನ ಸುತ್ತಮುತ್ತ ಇರುವ ಕುಟುಂಬದವರ ಜೀವನಕ್ಕೆ ಕುತ್ತಾಗಿ ಪರಿಣಮಿಸಿದೆ.

ಜೋಕಟ್ಟೆ ಮತ್ತು ಬಾಳ ಪಂಚಾಯತ್‌ನಲ್ಲಿ ವಿಶೇಷ ಆರ್ಥಿಕ ವಲಯ ಮತ್ತು ಬೃಹತ್‌ ಕಂಪೆನಿಗಳಿವೆ. ಈ ಕಂಪೆನಿಗಳಿಂದ ಭಾರೀ ಶಬ್ದ, ಹೊಗೆ, ಧೂಳಿನ ಕಣಗಳು ಸ್ಥಳೀಯರ ನಿತ್ಯ ಜೀವನಕ್ಕೆ ಸಮಸ್ಯೆ ತಂದೊಡ್ಡಿವೆ. ರಾಜ್ಯದ 2ನೇ ಅತೀ ದೊಡ್ಡ ಕೈಗಾರಿಕೆ ಪ್ರಾಂಗಣ ಇಲ್ಲಿದೆ.

ಇದುವರೆಗೂ ಇಲ್ಲಿ ಹಸುರು ವಲಯ ನಿರ್ಮಾಣ ವಾಗಿಲ್ಲ. ಕಂಪೆನಿಯ ಗೋಡೆಗಳಿಗೆ ತಾಗಿಗೊಂಡು ಹಲವಾರು ವಾಸದ ಮನೆಗಳಿವೆ. ಇವರ ಜೀವನ ನಿತ್ಯ ನರಕವಾಗಿದೆ. ಧೂಳಿನ ಕಣಗಳು ನೀರು, ಮಾಡುವ ಊಟಕ್ಕೂ ಸೇರಿಕೊಂಡು ಸಮಸ್ಯೆ ಎದುರಿಸುವಂತಾಗಿದೆ. ಸ್ಥಳೀಯರನ್ನು ಒಕ್ಕಲೆಬ್ಬಿಸಿ ಬೇರೆಡೆ ಸುಸಜ್ಜಿತ ಸ್ಥಳಾವಕಾಶ ನೀಡಿ ಎಂದು ಜನರ ಆಗ್ರಹವಿದ್ದರೂ ಇದುವರೆಗೂ ಅನುಷ್ಠಾನಕ್ಕೆ ಬಂದಿಲ್ಲ.

ಕುಡಿಯುವ ನೀರಿನ ಮೂಲವೂ ಮಲೀನಗೊಂಡು ಪೈಪ್‌ಲೈನ್‌ ಮೂಲಕ ನೀರಿಗೆ ಆಶ್ರಯಿಸಬೇಕಿದೆ.

ಇತರ ಸಮಸ್ಯೆಗಳೇನು? :

  • ತ್ಯಾಜ್ಯ ನಿರ್ವಹಣೆಗೆ ಬೇಕಾದ ಸೌಕರ್ಯ ಇದುವರೆಗೂ ಮರೀಚಿಕೆಯಾಗಿದೆ. ರಸ್ತೆಯುದ್ದಕ್ಕೂ ತ್ಯಾಜ್ಯ ರಾಶಿ ಕಂಡು ಬರುತ್ತದೆ.
  • ನೀರಿನ ಮೂಲ ಅಂತರ್ಜಲವಾಗಿದ್ದರೂ ಕಲುಷಿತಗೊಂಡು ಕುಡಿಯಲು ಬಳಕೆಯಾಗುತ್ತಿಲ್ಲ.
  • ಪೈಪ್‌ಲೈನ್‌, ಟ್ಯಾಂಕರ್‌ ಮೂಲಕ ಪೂರೈಕೆ ಹಲವೆಡೆ ಅನಿವಾರ್ಯವಾಗಿದೆ.
  • ಹಕ್ಕುಪತ್ರ ಜಾಗದಲ್ಲಿ ವಾಸಿಸುವ ಹಲವಾರು ಕುಟುಂಬಗಳು ಕಂಪೆನಿ ಸಮೀಪ ವಾಸವಿದ್ದು ಮಾಲಿನ್ಯ ಕಾರಣ ಸ್ಥಳಾಂತರವಾಗಬೇಕಿದೆ.
  • ಪಂಚಾಯತ್‌ ನಡುವಣ ಹಾದು ಹೋಗಿರುವ ಜೋಕಟ್ಟೆ ರಸ್ತೆ ವಿಸ್ತರಣೆ ಅಗತ್ಯವಿದೆ. ಇದರಿಂದ ಬಜಪೆ ಪಟ್ಟಣ ಸಂಪರ್ಕ ಸುಗಮವಾಗಲಿದೆ.
  • ಸುತ್ತಮುತ್ತಲಿನ ಕಂಪೆನಿಗಳ ನೀರು ಸಂಸ್ಕರಣೆಗೊಂಡರೂ ನದಿ ತೊರೆಗಳಿಗೆ ಚರಂಡಿ ನೀರು ಸೇರುತ್ತಿದೆ. ಇದು ಮತ್ಸ್ಯ ಸಂಪತ್ತಿಗೆ ಕಂಟಕವಾಗಿದೆ. ಸೂಕ್ತ ಸಂಸ್ಕರಣೆ ಘಟಕ ಈ ಭಾಗದಲ್ಲಿ ಅಗತ್ಯವಿದೆ.
  • ಬೃಹತ್‌ ಕಂಪೆನಿಗಳು ಇರುವುದರಿಂದ ಅಗ್ನಿಶಾಮಕ ಘಟಕದ ಆವಶ್ಯಕತೆಯಿದೆ.

-ಲಕ್ಷ್ಮೀ ನಾರಾಯಣ ರಾವ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.