Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

"ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ' - ಸಂವಾದ

Team Udayavani, Jun 25, 2024, 11:51 PM IST

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

ಮಂಗಳೂರು: ದೇಶದಲ್ಲಿ ಸಂವಿಧಾನವನ್ನು ಅತೀ ಹೆಚ್ಚು ಬಾರಿ ತಿದ್ದುಪಡಿ ಮಾಡಿದವರು ಕಾಂಗ್ರೆಸ್‌ವನರು. ಅದರಲ್ಲೂ ಜವಾಹರಲಾಲ್‌ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ಒಟ್ಟು 58 ಬಾರಿ ತಿದ್ದುಪಡಿ ಮಾಡಲಾಗಿದೆ.

ಸಂವಿಧಾನದ ಮೂಲ ಚೌಕಟ್ಟನ್ನೇ ಹಾಳು ಮಾಡಿದ್ದು ಕಾಂಗ್ರೆಸ್‌. ಬಿಜೆಪಿಯ ಮೇಲೆ ಆರೋಪ ಹೊರಿಸುವ ಮೊದಲು ಕಾಂಗ್ರೆಸ್ಸಿಗರು ಈ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಹೇಳಿದರು.

“ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಚಾರದಲ್ಲಿ “ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು’ ಸಂಘಟನೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಇಲ್ಲಿಯವರೆಗೆ 106 ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲಾಗಿದ್ದು, ಅದರಲ್ಲಿ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಒಟ್ಟು 75 ಬಾರಿ ತಿದ್ದುಪಡಿ ಮಾಡಲಾಗಿದೆ. ವಾಜಪೇಯಿ, ನರೇಂದ್ರ ಮೋದಿ ಸಹಿತ ಇತರರು ಪ್ರಧಾನಿಯಾಗಿದ್ದಾಗ ಕೇವಲ 31 ಬಾರಿ ಮಾತ್ರ ತಿದ್ದುಪಡಿಯಾಗಿದೆ ಎಂದರು.

ಸ್ವಾತಂತ್ರ್ಯ ಹೋರಾಟಕ್ಕೆ ಸಮ
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನದ ರಕ್ಷಣೆಗಾಗಿ ಎರಡು ಮೂರು ತಲೆಮಾರು ಶ್ರಮಪಟ್ಟಿದೆ. ಇದು ಸ್ವಾತಂತ್ರ್ಯ ಹೋರಾಟಕ್ಕೆ ಸಮ. ಆದರೆ ಅವರಿಗೆ ಏನೂ ಪ್ರತಿಫಲ ಸಿಕ್ಕಿಲ್ಲ. ಕಾಂಗ್ರೆಸ್‌ಗೆ ಮತ್ತೆ ಅಧಿಕಾರವನ್ನು ಕೊಟ್ಟರೆ ದೇಶದಲ್ಲಿ ಏನೇನು ಆಗಬಹುದು ಎನ್ನುವುದನ್ನು ಮುಂದಿನ ತಲೆಮಾರಿಗೆ ತಿಳಿಸುವ, ಎಚ್ಚರಿಸುವ ಕೆಲಸ ನಾವು ಮಾಡಬೇಕು ಎಂದರು.

ದ.ಕ. ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಸಕಲೇಶಪುರ ಶಾಸಕ ಸಿಮೆಂಟ್‌ ಮಂಜು, ಶಾಸಕ ವೇದವ್ಯಾಸ ಕಾಮತ್‌, ವಿಭಾಗ ಸಂಚಾಲಕ ಡಾ| ಎನ್‌. ನವೀನ್‌, ಮಾಜಿ ಶಾಸಕ ರುಕ್ಮಯ ಪೂಜಾರಿ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದ ಸಂಚಾಲಕ, ಮೇಯರ್‌ ಸು ಧೀರ್‌ ಶೆಟ್ಟಿ ಕಣ್ಣೂರು ಸ್ವಾಗತಿಸಿದರು. ರಾಕೇಶ್‌ ರೈ ಕಡೆಂಜಿ ಕಾರ್ಯಕ್ರಮ ನಿರೂಪಿಸಿದರು.

“ಜಾತ್ಯತೀತ’ ಪದ ಸೇರಿಸಿದ್ದು ಕಾಂಗ್ರೆಸ್‌
ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಮೂಲ ಸಂವಿಧಾನದಲ್ಲಿ “ಜಾತ್ಯತೀತ’ ಎನ್ನುವ ಪದವೇ ಇಲ್ಲ. ಆದರೆ 42ನೇ ತಿದ್ದುಪಡಿಯಲ್ಲಿ ಇಂದಿರಾ ಗಾಂಧಿಯವರು ಸೇರ್ಪಡೆ ಮಾಡಿದರು. ನಮಗೆ ಅಂಬೇಡ್ಕರ್‌ ಅವರ ಸಂವಿಧಾನದ ಮೇಲೆ ನಂಬಿಕೆ ಇದೆ ಹೊರತು, ತಿದ್ದುಪಡಿ ಮಾಡಿದ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

ಟಾಪ್ ನ್ಯೂಸ್

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.