ಕಡಲಲ್ಲೇ ಉಳಿದ ಪ್ರಿನ್ಸೆಸ್‌ ಮಿರಾಲ್‌ ಹಡಗು


Team Udayavani, Jul 18, 2022, 5:15 AM IST

ಕಡಲಲ್ಲೇ ಉಳಿದ ಪ್ರಿನ್ಸೆಸ್‌ ಮಿರಾಲ್‌ ಹಡಗು

ಮಂಗಳೂರು: ಸಿರಿಯಾದ “ಪ್ರಿನ್ಸೆಸ್‌ ಮಿರಾಲ್‌’ ಸರಕು ಸಾಗಾಟ ಹಡಗು ಉಳ್ಳಾಲ ಬಟಪಾಡಿ ಕಡಲಿನಲ್ಲಿ ಮುಳುಗಿ ತಿಂಗಳು ಸಮೀಪಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಗಸ್ಟ್‌ ಅಂತ್ಯದ ವರೆಗೂ ನೌಕೆಯಿಂದ ತೈಲ ತೆರವು ಮಾಡುವ ಸಾಧ್ಯತೆ ಇಲ್ಲ.

ಮುಂಬಯಿ ಹಾಗೂ ಗೋವಾದಿಂದ ಎರಡು ಪ್ರತ್ಯೇಕ ತಂಡ ಆಗಮಿಸಿ ತೈಲ ತೆರವು ಮತ್ತಿತರ ವಿಚಾರಗಳಿಗೆ ಸಂಬಂಧಿಸಿ ಪರಿಶೀಲಿಸಿ ತೆರಳಿರುವುದು ಬಿಟ್ಟರೆ ಯಾವುದೇ ಬೆಳವಣಿಗೆ ಇಲ್ಲ. ಸದ್ಯದ ಮಟ್ಟಿಗೆ ಹಡಗು ಬಟ್ಟಪಾಡಿಯಲ್ಲಿ ನೆಲಸ್ಪರ್ಶಿಸಿ ನಿಂತಿದೆ. ಆದರೆ ಪೂರ್ತಿ ಮುಳುಗಿಲ್ಲ. ಆದರೆ ಡೆಕ್‌ ವರೆಗೂ ನೀರು ತುಂಬಿಕೊಂಡಿರುವುದರಿಂದ ಅದರೊಳಗೆ ಪ್ರವೇಶಿಸಲು ತಜ್ಞರ ಕಾರ್ಯಾಚರಣೆ ಅಗತ್ಯವಿದೆ. ಈಗಿನ ಪರಿಸ್ಥಿತಿಯಲ್ಲಿ ಕಡಲಿನ ಅಬ್ಬರ ಜೋರಾಗಿರುವುದರಿಂದ ಕಾರ್ಯಾ ಚರಣೆ ನಡೆಸುವ ಸ್ಥಿತಿಯಲ್ಲಿ ತಜ್ಞರಿಲ್ಲ.

ಸದ್ಯ ನೌಕಾಯಾನ ಸಚಿವಾಲಯದ ಟಗ್‌ಬೋಟ್‌ ವಾಟರ್‌ಲಿಲ್ಲಿಯನ್ನು ಮಂಗಳೂರು ಬಂದರಿನಲ್ಲಿ ತಂದು ನಿಲ್ಲಿಸಲಾಗಿದೆ. ತೈಲ ಸೋರಿಕೆಯಾದರೆ ಅದನ್ನು ನಿಯಂತ್ರಿಸುವುದು ಇದರ ಉದ್ದೇಶ. ಅಲ್ಲದೆ ಕೋಸ್ಟ್‌ ಗಾರ್ಡ್‌ ನೌಕೆ ಹಾಗೂ ಕರಾವಳಿ ಕಾವಲು ಪೊಲೀಸ್‌ ಬೋಟ್‌ಗಳು ನಿಗಾ ಇರಿಸಿವೆ. ಆದರೆ ನಿರಂತರವಾಗಿ ಹಡಗಿನ ಮೇಲೆ ಕಣ್ಗಾವಲು ಸದ್ಯ ನಡೆಸಲಾಗುತ್ತಿಲ್ಲ, ಇಂತಹ ಪ್ರಕರಣ ಗಳಲ್ಲಿ ಸುದೀರ್ಘ‌ವಾಗಿ ಕಣ್ಗಾವಲು ನಡೆಸಲಾಗದು ಎಂದು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತಿಳಿಸಿದ್ದಾರೆ.

ಜೂ. 21ರಂದು ಸಿರಿಯಾದ ಪ್ರಿನ್ಸಿಸ್‌ ಮಿರಾಲ್‌ ಹೆಸರಿನ ಸರಕು ನೌಕೆ ಉಳ್ಳಾಲ ಸಮುದ್ರ ತೀರದಲ್ಲಿ ಮುಳುಗಡೆ ಯಾಗಿತ್ತು. ಕೋಸ್ಟ್‌ ಗಾರ್ಡ್‌ ಸಿಬಂದಿ ಈ ನೌಕೆಯಲ್ಲಿದ್ದ 15 ಮಂದಿಯನ್ನು ರಕ್ಷಿಸಿದ್ದರು. ಈ ಮಂದಿ ಈಗ ಮಂಗಳೂರಿನಲ್ಲೇ ಇದ್ದಾರೆ. ಅವರಲ್ಲಿ ದಾಖಲೆ ಸಮಸ್ಯೆ ಇರುವ ಕಾರಣ ಸಿರಿಯಾ ದೇಶಕ್ಕೆ ಕರೆದೊಯ್ಯುವ ಕಾರ್ಯ ಪೂರ್ಣ ಗೊಂಡಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಹಡಗಿನ ಮಾಲಕರ ಪ್ರತಿನಿಧಿಗಳು ನಿರಂತರ ಯತ್ನದಲ್ಲಿದ್ದು ಮುಂದಿನ ವಾರ ಅವರ ದೇಶಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ.

ಈ ಮಧ್ಯೆ ಸಿರಿಯಾದ ನೌಕೆ ಮಲೇಷ್ಯಾದಿಂದ ಇಟಲಿಗೆ ತೆರಳುವ ಮಧ್ಯೆ ಉಳ್ಳಾಲ ಕಡಲ ತೀರಕ್ಕೆ ಬರಲು ಕಾರಣವಾದ ಅಂಶಗಳನ್ನು ಡಿಜಿ ಶಿಪ್ಪಿಂಗ್‌ ಹಾಗೂ ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿದೆ. ಲಭ್ಯ ಮಾಹಿತಿ ಪ್ರಕಾರ ಶ್ರೀಲಂಕಾ ಮಾರ್ಗವಾಗಿ ತೆರಳುವ ವೇಳೆ ನೌಕೆಯ ತಳಭಾಗದಲ್ಲಿ ರಂಧ್ರ ಕಾಣಿಸಿದ ಕಾರಣ ಕಡಲ ತೀರದ ಮಾರ್ಗವಾಗಿ ಪ್ರಯಾಣ ಬೆಳೆಸಿತ್ತು. ಇದರಿಂದಾಗಿ ಉಳ್ಳಾಲ ಸಮುದ್ರ ತೀರ ತಲುಪಿದೆ ಎನ್ನುವುದು ವರದಿಯ ಮುಖ್ಯಾಂಶ.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.