ಪ್ರೊ| ಡಾ| ಎಂ.ಪಿ. ಪೈ ವಿಶೇಷ ಅಂಚೆ ಕವರ್ ಬಿಡುಗಡೆ
Team Udayavani, Apr 11, 2018, 9:22 AM IST
ಮಂಗಳೂರು: ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಅಭಿವೃದ್ಧಿಯ ರೂವಾರಿ ಡಾ| ಪ್ರೊ| ಎಂ.ಪಿ. ಪೈ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಕವರನ್ನು ಮಂಗಳವಾರ ನಗರದ ಪಾಂಡೇಶ್ವರದ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.
ಮಂಗಳೂರು ಅಂಚೆ ಕಚೇರಿಗಳ ಸೀನಿಯರ್ ಸೂಪರಿಂಟೆಂಡೆಂಟ್ ಎಂ. ಜಗದೀಶ್ ಪೈ ಅವರು ವಿಶೇಷ ಅಂಚೆ ಕವರನ್ನು ಬಿಡುಗಡೆ ಮಾಡಿದರು. ಮಾಹೆ ವಿಶ್ರಾಂತ ಉಪಕುಲಪತಿ ಡಾ| ಬಿ.ಎಂ. ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.
ಮಂಗಳೂರು ಪಾಂಡುರಂಗ ಪೈ ಅವರು ಡಾ| ಎಂ.ಪಿ. ಪೈ ಎಂದೇ ಪ್ರಸಿದ್ಧರಾಗಿದ್ದರು. ಅವರು ಕರಾವಳಿ ಕಂಡ ಅತ್ಯುತ್ತಮ ತಜ್ಞರಾಗಿದ್ದು, ಅತ್ಯುತ್ತಮ ಮಾನವೀಯ ಗುಣಗಳ ಮೂಲಕವೂ ಜನಮಾತಾಗಿದ್ದರು. ಕೆಎಂಸಿಯಲ್ಲಿ ಜನರಲ್ ಸರ್ಜರಿ ವಿಭಾಗದಲ್ಲಿ ಅವರು ಆರಂಭಿಸಿದ್ದ ಸ್ನಾತ ಕೋತ್ತರ ಪದವಿ ವಿಭಾಗವು ಇದುವರೆಗೆ 500ಕ್ಕೂ ಮಿಕ್ಕಿ ಶಸ್ತ್ರ ಚಿಕಿತ್ಸಾ ತಜ್ಞ ವೈದ್ಯರನ್ನು ತಯಾರಿಸಿ ಸಮಾಜಕ್ಕೆ ನೀಡಿದೆ ಎಂದವರು ಹೇಳಿದರು.
ಅನನ್ಯ ಕೊಡುಗೆ
ಮುಖ್ಯ ಅತಿಥಿ ಕೆಎಂಸಿ ಡೀನ್ ಡಾ| ಎಂ.ವಿ. ಪ್ರಭು ಮಾತನಾಡಿ, ಲೈಟ್ಹೌಸ್ ಹಿಲ್ ರಸ್ತೆಯ ಬಳಿ ಇರುವ ಬೃಹತ್ ಕೆಎಂಸಿ ಕಟ್ಟಡ ಡಾ| ಎಂ.ಪಿ. ಪೈ ಅವರ ಕೊಡುಗೆ. ಸಂಶೋಧನಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರು ಈ ಕಟ್ಟಡದ ಮೇಲ್ಭಾಗದ ಮಾಳಿಗೆಯಲ್ಲಿ ಸಂಶೋಧನಾ ಲ್ಯಾಬ್ ಆರಂಭಿಸಿದ್ದರು. ಅವರ ಬೋಧನೆ ಮಂಗಳೂರಿಗೆ ಮಾತ್ರ ಸೀಮಿತವಾಗದೆ ಮಣಿ ಪಾಲ ಕೆಎಂಸಿಗೂ ವಿಸ್ತರಿಸಿತ್ತು. ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡುವ ಘಟಕವನ್ನು ಮಣಿಪಾಲದಲ್ಲಿ ಆರಂಭಿಸಿದ್ದರು. ಕೆಎಂಸಿಯಿಂದ ನಿವೃತ್ತಿ ಹೊಂದಿದ ಬಳಿಕ ಅವರು ಒಮಾನ್ಗೆ ತೆರಳಿ ಸಲಾಲಾ ದಲ್ಲಿರುವ ಖಬೂಸ್ ಆಸ್ಪತ್ರೆಯಲ್ಲಿ ಕನ್ಸಲ್ಟೆಂಟ್ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ಬದುಕಿನ ಕೊನೆಯ ದಿನಗಳನ್ನು ಅವರು ಮಂಗಳೂರಿನಲ್ಲಿ ಕಳೆದಿದ್ದು, ಈ ಸಂದರ್ಭದಲ್ಲಿ ನಗರ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಶಸ್ತ್ರ ಚಿಕಿತ್ಸೆ ಸಂಬಂಧಿತ ಸಮಸ್ಯೆಗಳಿಗೆ ಸಲಹೆ ನೀಡಿದ್ದರು. 1992 ಆಗಸ್ಟ್ 27 ರಂದು ಅವರು ನಿಧನರಾಗಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಶ್ಲಾಘನೀಯ ಎಂದರು.
ಅಂಚೆ ಕಚೇರಿಯ ಸೀನಿಯರ್ ಪೋಸ್ಟ್ ಮಾಸ್ಟರ್ ಎಲ್.ಪ್ರಕಾಶ್ ಉಪಸ್ಥಿತರಿದ್ದರು. ಕೆಎಂಸಿ ಮೂತ್ರಾಂಗ ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಪ್ರಸ್ತಾವನೆ ಗೈದರು. ದಿನೇಶ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.