ಪ್ರಾಪರ್ಟಿ ಕಾರ್ಡ್‌: ಆಸ್ತಿ ನೋಂದಣಿ ಸರ್ವರ್‌ಗೆ ಜೋಡಿಸಲು ಕ್ರಮ

ಮೇ 15ರ ಅನಂತರ ನಗರದಲ್ಲಿ ಮತ್ತೆ ಕಡ್ಡಾಯಗೊಳ್ಳುವ ಸಾಧ್ಯತೆ

Team Udayavani, Apr 28, 2019, 6:04 AM IST

aaaaD

ವಿಶೇಷ ವರದಿ- ಮಹಾನಗರ: ಆಸ್ತಿ ನೊಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಮೇ 15ರ ಬಳಿಕ ಮತ್ತೆ ಅನುಷ್ಟಾನಕ್ಕೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪ್ರಾಪರ್ಟಿಕಾರ್ಡ್‌ ಸರ್ವರ್‌ನ್ನು ಮಂಗಳೂರು ತಾಲೂಕಿನ ಆಸ್ತಿ ನೋಂದಣಿ ಕಚೇರಿಗಳ ( ಸಬ್‌ ರಿಜಿಸ್ಟ್ರಾರ್‌) ಸರ್ವರ್‌ಗಳಿಗೆ ಲಿಂಕ್‌ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ.

ಪ್ರಾಯೋಗಿಕವಾಗಿ ಮೂಲ್ಕಿ ಉಪ ನೋಂದಣಿ ಕಚೇರಿಗೆ ಸರ್ವರ್‌ ಲಿಂಕ್‌ ಮಾಡಿ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರ್ಧರಿಸಲಾಗಿದ್ದು, ಪ್ರಾಯೋಗಿಕ ಅಳವಡಿಕೆಗೆ ಅನುಮತಿ ಕೋರಿ ರಾಜ್ಯ ಭೂಮಾಪನ, ಭೂದಾಖಲೆಗಳು ಮತ್ತು ಸೆಟ್ಲಮೆಂಟ್‌ ಇಲಾಖಾ ಆಯುಕ್ತರಿಗೆ ಜಿಲ್ಲಾಡಳಿತ ಹಾಗೂ ಭೂಮಾಪನ ಇಲಾಖೆಯು ಪತ್ರ ಬರೆದಿದೆ.

ಫೆ. 1ರಿಂದ ಆಸ್ತಿ ನೋಂದಣಿ, ಮಾರಾಟಕ್ಕೆ ಪ್ರಾಪರ್ಟಿ ಕಾರ್ಡ್‌ ಅನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಪ್ರಾಪರ್ಟಿ ಕಾರ್ಡ್‌ ವಿತರಣೆ ವ್ಯವಸ್ಥೆಯಲ್ಲಿ ಕೆಲವು ಗೊಂದಲಗಳಿಂದಾಗಿ ರಾಜ್ಯ ಭೂಮಾಪನ, ಭೂದಾಖಲೆಗಳು, ಸೆಟ್ಲಮೆಂಟ್‌ ಇಲಾಖಾ ಆಯುಕ್ತ ಮನೀಶ್‌ ಮುದ್ಗೀಲ್‌ ಅವರು ಕಾರ್ಡ್‌ ಕಡ್ಡಾಯವನ್ನು ಮೇ 15ರ ವರೆಗೆ ಮುಂದೂಡಿದ್ದರು. ಈ ಹಿನ್ನೆಲೆಯಲ್ಲಿ ಈ ಹಿಂದಿನಂತೆ ಆವಶ್ಯ ದಾಖಲೆಗಳ ಆಧಾರದಲ್ಲಿ ಆಸ್ತಿ ನೋಂದಣಿ ಕಾರ್ಯ ಮುಂದುವರಿದಿದೆ. ಪ್ರಾಪರ್ಟಿ ಕಾರ್ಡ್‌ ವಿತರಣೆಯಲ್ಲಿ ಇರುವ ಲೋಪಗಳನ್ನು ಪರಿಹರಿಸಿಕೊಂಡು ಮೇ 15ರ ಅನಂತರ ಮತ್ತೆ ಕಡ್ಡಾಯವಾಗುವ ನಿರೀಕ್ಷೆ ಇದೆ.

ಪ್ರಾಯೋಗಿಕ ಪರೀಕ್ಷೆಗೆ ಮನವಿ
ಆಸ್ತಿ ನೋಂದಣಿ ಕಚೇರಿಗಳ ಸರ್ವರ್‌ಗಳಿಗೆ ಪ್ರಾಪರ್ಟಿ ಕಾರ್ಡ್‌ ಸರ್ವರ್‌ ಜೋಡಣೆಯಾದ ಬಳಿಕ ಮಾರಾಟ /ಖರೀದಿ ಜಾಗದ ಪ್ರಾಪರ್ಟಿಕಾರ್ಡ್‌ ನಂಬರ್‌ನ್ನು ನೋಂದಣಿ ಕಚೇರಿಯ ಸರ್ವರ್‌ನಲ್ಲಿ ನಮೂದಿಸಿದರೆ ಅದಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ವಿವರಗಳು ಲಭ್ಯವಾಗುತ್ತದೆ. ವಿನಾಯತಿ ಗಡುವು ಮುಕ್ತಾಯಗೊಳ್ಳುವ 15 ದಿನಗಳ ಮೊದಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದರೆ ಅದರಲ್ಲಿರುವ ಲೋಪಗಳನ್ನು ಮುಂಚಿತವಾಗಿ ಸರಿಪಡಿಸಲು ಸಾಧ್ಯವಾಗುತ್ತದೆ. ಜಿಲ್ಲಾಡಳಿತ ಪ್ರಾಯೋಗಿಕ ಪರೀಕ್ಷೆಗೆ ಅನುಮತಿ ಕೋರಿದೆ.

ಹೊಸ ಸರ್ವರ್‌ಗಳ ಅಳವಡಿಕೆ
ಪ್ರಾಪರ್ಟಿ ಕಾರ್ಡ್‌ ವಿತರಣ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿ ಇಲಾಖೆಯ ಹೊಸ ಸರ್ವರ್‌ಗೆ ಜೋಡಿಸಲಾಗಿದೆ. ಮಂಗಳೂರು ಕಚೇರಿಯಲ್ಲಿ ಕರಡು ಪ್ರಾಪರ್ಟಿ ಕಾರ್ಡ್‌ನ್ನು ಮಾತ್ರ ಮುದ್ರಿಸಿ ಆಸ್ತಿ ಮಾಲಕರಿಗೆ ನೀಡಲು ಅವಕಾಶವಿದೆ. ಆದರೆ ಅಂತಿಮ ಕಾರ್ಡ್‌ ಬೆಂಗಳೂರಿನ ಕೇಂದ್ರ ಸರ್ವರ್‌ನಿಂದಲೇ ಬರಬೇಕು. ಕೇಂದ್ರ ಸರ್ವರ್‌ನಲ್ಲಿ ಸಮಸ್ಯೆಯಿಂದಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು. ಹೊಸ ಸರ್ವರ್‌ಗೆ ಜೋಡಣೆ ಮಾಡಿರುವುದರಿಂದ ಈ ಸಮಸ್ಯೆ ನಿವಾರಣೆಯಾಗಿದೆ. ಇದೇ ರೀತಿಯಲ್ಲಿ ಮಂಗಳೂರಿನ ಕಚೇರಿಯಲ್ಲೂ ಹೊಸ ಸರ್ವರ್‌ ಅಳವಡಿಸಲಾಗುತ್ತಿದೆ.
ಕಂಪ್ಯೂಟರ್‌ಗಳ ಸಂಖ್ಯೆಯನ್ನು 45ಕ್ಕೇರಿಸಲಾಗಿದೆ. 1 ಹೆಚ್ಚು ಸಾಮರ್ಥ್ಯದ, 3 ಮಧ್ಯಮ ಸಾಮಾರ್ಥ್ಯದ ಸ್ಕಾ ನರ್‌ಗಳು, 5 ಪ್ರಿಂಟರ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಬಹುಮಹಡಿ ವಸತಿ ಸಮುಚ್ಚಯಗಳ ಆಸ್ತಿ ನೋಂದಣಿಯಲ್ಲಿ ಇದ್ದ ಬಹುತೇಕ ಸಮಸ್ಯೆಗಳು ಪರಿಹಾರಗೊಂಡಿವೆ.

ವಿತರಣೆ ಪ್ರಕ್ರಿಯೆ ಇಳಿಕೆಯಾಗಿಲ್ಲ
ಪ್ರಾಪರ್ಟಿ ಕಾರ್ಡ್‌ನ್ನು ಆಸ್ತಿ ನೋಂದಣಿಗೆ ಕಡ್ಡಾಯಗೊಳಿಸಿರುವುದನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದರೂ ವಿತರಣೆಯಲ್ಲಿ ಇಳಿಕೆ ಆಗಿಲ್ಲ. ದಿನಂಪ್ರತಿ ಸರಾಸರಿ 60 ಪಕ್ಕಾ ಕಾರ್ಡ್‌ಗಳು ಹಾಗೂ ಸುಮಾರು 70ರಷ್ಟು ಕರಡು ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಆಸ್ತಿ ದಾಖಲೆಗಳ ಸಂಗ್ರಹದಲ್ಲಿ ಸ್ವಲ್ಪ ಇಳಿಕೆಯಾಗಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ. ಎ. 26ರ ವರೆಗೆ ಒಟ್ಟು 26,428 ಪಕ್ಕಾ ಕಾರ್ಡ್‌ಗಳನ್ನು ಹಾಗೂ 39,321 ಕರಡು ಕಾರ್ಡ್‌ಗಳನ್ನು ವಿತರಿಸಲಾಗಿದೆ. 86,333 ಆಸ್ತಿ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು 86,316 ಆಸ್ತಿ ದಾಖಲೆಗಳನು ಸ್ಕ್ಯಾನ್ ಮಾಡಲಾಗಿದೆ. ನಗರದಲ್ಲಿ ಪ್ರಸ್ತುತ ಒಟ್ಟು 1,53,081 ಆಸ್ತಿಗಳಿವೆ. ಆಸ್ತಿಗಳು ವಿಭಜನೆಗೊಂಡು ಪ್ರತ್ಯೇಕವಾದಂತೆ ಆಸ್ತಿ ಸಂಖ್ಯೆಗಳು ಹೆಚ್ಚುತ್ತಾ ಹೋಗುತ್ತವೆ.

ಪ್ರಾಪರ್ಟಿ ಕಾರ್ಡ್‌ ವಿತರಣೆ ನಿಂತಿಲ್ಲ
ಆಸ್ತಿ ನೊಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಗೊಳಿಸಿರುವುದನ್ನು ತಾತ್ಕಾಲಿ ಕವಾಗಿ ಮುಂದೂಡಿದರೂ ವಿತರಣೆ ಕಾರ್ಯದಲ್ಲಿ ಯಾವುದೇ ಪರಿಣಾಮವಾಗಿಲ್ಲ. ಪ್ರಾಪರ್ಟಿ ಕಾರ್ಡ್‌ ಸರ್ವರ್‌ ಅನ್ನು ನೋಂದಣಿ ಕಚೇರಿ ಸರ್ವರ್‌ಗೆ ಲಿಂಕ್‌ ಮಾಡುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿದೆ.
 - ಪ್ರಸಾದಿನಿ,
ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.