Protest: ಹಂಪನಕಟ್ಟೆ ಬಸ್ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ
Team Udayavani, Sep 11, 2024, 5:46 PM IST
ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಬಳಿ ಇದ್ದಂತಹ ಪ್ರಯಾಣಿಕರ ಬಸ್ ತಂಗುದಾಣವನ್ನು ಪಾಲಿಕೆ ಇತ್ತೀಚೆಗೆ ತೆರವು ಮಾಡಿದ್ದು, ಇದನ್ನು ಖಂಡಿಸಿ ಮತ್ತು ಮತ್ತೆ ಅದೇ ಜಾಗದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಬುಧವಾರ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಏಕಾಏಕಿ ರಸ್ತೆಗೆ ನುಗ್ಗಿದ್ದು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು.
ಹಂಪನಕಟ್ಟೆ ವಿ.ವಿ. ಕಾಲೇಜು ಮುಂಬಾಗದಲ್ಲಿರುವ ಬಸ್ ತಂಗುದಾಣವನ್ನು ರಾತ್ರೋ ರಾತ್ರಿ ತೆರವುಗೊಳಿಸಿರುವು ಶೋಚನೀಯ ಸಂಗತಿ. ಈ ಬಸ್ ತಂಗುದಾಣವು ಅಲ್ಲಿಯ ಎಲ್ಲಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ, ಆಸ್ಪತ್ರೆ ಮತ್ತು ಇನ್ನಿತರ ಸಾರ್ವಜನಿಕ ಸ್ಥಳಗಳಿಗೆ ಬರುವವರಿಗೆ ಅನುಕೂಲಕರವಾಗಿದ್ದು, ಇದೀಗ ತಂಗುದಾಣವನ್ನು ತೆರವುಗೊಳಿಸಿರುವುದು ಅಲ್ಲಿಯ ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳು ಮಳೆ ಮತ್ತು ಬಿಸಿಲಲ್ಲಿ ಛತ್ರಿಗಳನ್ನು ಹಿಡಿದು ನಿಲ್ಲುವ ಅನಿವಾರ್ಯತೆ ಎದುರಾಗಿದೆ. ಅದಲ್ಲದೇ ನಗರದಲ್ಲಿರುವ ಪ್ರಮುಖ ಕಾಲೇಜುಗಳ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೂ ಈ ಬಸ್ ತಂಗುದಾಣ ಆಸರೆಯಾಗಿತ್ತು. ಕೂಡಲೇ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಮಸ್ಯೆ ಬಗೆಹರಿಸುವಂತೆ ಮಂಗಳೂರು ತಹಿಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: Manipal: ಹಾಸ್ಟೆಲ್ ಕಿಟಕಿಯಿಂದ ಕೈಹಾಕಿ ವಿದ್ಯಾರ್ಥಿನಿಗೆ ಕಿರುಕುಳ… ಆರೋಪಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.