![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 24, 2021, 7:04 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದ. ಕ. ಜಿಲ್ಲೆಯಲ್ಲಿ ಕೆಲವು ಷರತ್ತು¤ಗಳಿಗೊಳಪಟ್ಟು ಆ. 30ರಿಂದ ಹಂತಹಂತವಾಗಿ ಪದವಿಪೂರ್ವ ತರಗತಿಗಳನ್ನು ಪ್ರಾರಂಭಿಸಲು ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿರಬೇಕು. ಕ್ವಾರಂಟೈನ್ನಿಂದ ಹೊರಬಂದ ಅನಂತರ ಮತ್ತೂಮ್ಮೆ ಆರ್ಟಿಪಿಸಿಆರ್ ತಪಾಸಣೆ ಮಾಡಿಸಿ ಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು. ಇದೇ ಆಧಾರದಲ್ಲಿ ಮುಂದಿನ ದಿನಗಳಲ್ಲಿ 9, 10ನೇ ತರಗತಿಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾಲೇಜುಗಳಿಗೆ ಸೂಚನೆ :
ವಿದ್ಯಾರ್ಥಿಗಳು ಸುರಕ್ಷಿತವಾಗಿ ಕಾಲೇಜಿಗೆ ಹಾಜರಾಗುವ ಬಗ್ಗೆ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಿದ್ಧಪಡಿಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಎಸ್ಒಪಿಯಂತೆ ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಡಿಸಿ ತಿಳಿಸಿದರು.
ಸಚಿವ ಎಸ್. ಅಂಗಾರ ಮಾತನಾಡಿ, ಕೋವಿಡ್ ಸೋಂಕಿನ ಈ ಸಂದರ್ಭದಲ್ಲಿ ಕಾಲೇಜುಗಳ ಕೈಗೊಳ್ಳುವ ನಿಯಮಗಳನ್ನು ಕೂಡಲೇ ತಿಳಿಸಬೇಕು ಎಂದರು. ಈ ಹಿಂದೆ ಎಸೆಸೆಲ್ಸಿ ಹಾಗೂ ಇತರ ಪರೀಕ್ಷೆಗಳನ್ನು ನಡೆಸಿದ ವೇಳೆ ಕೈಗೊಂಡ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಿದರು.
ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾೖಕ್, ಹರೀಶ್ ಪೂಂಜ, ಪ್ರತಾಪ್ಚಂದ್ರ ನಾಯಕ್ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಆನಂದ್ ಕುಮಾರ್, ಎಡಿಸಿ ಪ್ರಜ್ಞಾ ಅಮ್ಮೆಂಬಳ ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.