Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ
ಮಾಧವ ಉಳ್ಳಾಲ ಅವರಿಗೆ ಮಂಗಳೂರು ಪಾಲಿಕೆಯಿಂದಸಾಲು ಮರದ ತಿಮ್ಮಕ್ಕ ಪ್ರಶಸ್ತಿ' ಪ್ರದಾನ
Team Udayavani, Jul 8, 2024, 11:49 PM IST
ಮಂಗಳೂರು: ಹವಾಮಾನ ಬದಲಾವಣೆ ಹಾಗೂ ಸಮುದ್ರ ಮಟ್ಟ ಏರಿಕೆ ಆಗುತ್ತಿರುವ ಸಂದ ರ್ಭದಲ್ಲಿ ಗಿಡ ಮರಗಳ ಸಂರಕ್ಷಣೆ ಮೂಲಕ ಪರಿಸರ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿ ಸಬೇಕು ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.
“ಸಾಲುಮರದ ತಿಮ್ಮಕ್ಕ’ ಅವರ ಜನ್ಮದಿನದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ 60 ವಾರ್ಡ್ಗಳಲ್ಲಿ “ಉದಯವಾಣಿ’ ಸಹಭಾಗಿತ್ವದಡಿ 10 ಸಾವಿರ ಗಿಡಗಳನ್ನು ನೆಡುವ “ಹಸಿರೇ ಉಸಿರು’ ಕಾರ್ಯಕ್ರಮಕ್ಕೆ ಪುರಭವನದಲ್ಲಿ ಸೋಮವಾರ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಿಡಗಳನ್ನು ನೆಟ್ಟಂತೆ ಅವುಗಳ ಹಾರೈಕೆಯೂ ಮುಖ್ಯ. ಇದಕ್ಕೆ ಸಮುದಾಯ, ನಾಗರಿಕರೂ ಸಹಯೋಗ ನೀಡಬೇಕು ಎಂದು ಹೇಳಿದರು.
ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ವೇದವ್ಯಾಸ ಕಾಮತ್, ‘ಮಂಗಳೂರಿನ ಆರೋಗ್ಯವನ್ನು ಕಾಪಾಡಿ ಕೊಳ್ಳಲು ಹಸಿರು ಹೆಚ್ಚಿಸಲೇಬೇಕಾದ ಕಾಲ ಬಂದಿದೆ. ಇದಕ್ಕೆ ಸ್ಥಳೀಯ ಸಂಸ್ಥೆಯಾಗಿ ಪಾಲಿಕೆ ಮುಂದಾಗಿದ್ದು, ಸಾರ್ವಜನಿಕರೂ ಸಹಭಾಗಿಗಳಾಗಬೇಕು. ಮಂಗಳೂ ರನ್ನು ಹಸಿರಾಗಿಸಬೇಕೆಂಬ ಉದಯವಾಣಿಯ ಅಭಿಯಾನ ಅನನ್ಯ ಎಂದರು.
ಇಂದು ನೆಟ್ಟ ಸಸಿಗಳು ನಾಳೆಗೆ ಏನಾದವು ಎಂಬು ದನ್ನೂ ಗಮನಿಸಬೇಕು. ಈ ಗಿಡಗಳೇ ಮುಂದಿನ ಪೀಳಿಗೆಗೆ ನಮ್ಮ ಕೊಡುಗೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಮೇಯರ್ ಸುಧೀರ್ ಶೆಟ್ಟಿ ಮಾತನಾಡಿ, ನಮ್ಮ ಮಕ್ಕಳಿಗೆ ಒಳ್ಳೆಯ ಆರೋಗ್ಯವನ್ನು ನೀಡುವ ಸಲುವಾಗಿ ಈ ಕಾರ್ಯಕ್ರಮ. ಈ ಯೋಜನೆಯ ಮೂಲಕ ನಗರದಲ್ಲಿ ಆಭಿವೃದ್ಧಿಯ ಜತೆಗೆ ಪರಿಸರ ಸಮತೋಲನ ರಕ್ಷಣೆಯೂ ನಮ್ಮ ಆದ್ಯತೆ ಎಂದರು.
ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರಿಗೆ “ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ’ ನೀಡಿ ಮಂಗಳೂರು ಪಾಲಿಕೆ ಗೌರವಿಸಿತು. ಉಪಮೇಯರ್ ಸುನೀತಾ, ಮನಪಾ ಮುಖ್ಯ ಸಚೇತಕ ಪ್ರೇಮಾನಂದಶೆಟ್ಟಿ, ಮಾಜಿ ಮೇಯರ್ಗಳಾದ ಎಂ. ಶಶಿಧರ ಹೆಗ್ಡೆ, ದಿವಾಕರ ಪಾಂಡೇ ಶ್ವರ, ಸ್ಥಾಯೀ ಸಮಿತಿ ಅಧ್ಯಕ್ಷರಾದ ವರುಣ್ ಚೌಟ, ಭರತ್ ಕುಮಾರ್, ಲೋಹಿತ್ ಅಮೀನ್, ಉದಯವಾಣಿ ಸಂಪಾದಕ ಅರವಿಂದ ನಾವಡ, ಮಂಗಳೂರು ವಿಭಾಗ ಉಪಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಎಸ್.ಮರಿಯಪ್ಪ, ಮಂಗಳೂರು ಉಪ ವಿಭಾಗ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ, ಮನ ಪಾ ಆಯುಕ್ತ ಆನಂದ ಸಿ.ಎಲ್. ಮುಂತಾ ದವರು ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.