ಶುದ್ಧ ನೀರಿನ ಘಟಕ ಸ್ಥಗಿತ: ತುಕ್ಕು ಹಿಡಿಯುತ್ತಿವೆ ಯಂತ್ರಗಳು

ಕಾರ್ಯಾಚರಣೆ ಮಾಡದ ಘಟಕಕ್ಕೆ 8.5 ಲಕ್ಷ ರೂ. ಖರ್ಚು; ನಿರ್ವಹಣೆಯ ಕೊರತೆ

Team Udayavani, May 19, 2019, 6:00 AM IST

A-10

ನಗರ: ಜನತೆಗೆ ಪ್ರಯೋಜನವಾಗಬೇಕು ಎನ್ನುವ ಕಾರಣದಿಂದ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತದೆ. ಅದೇ ರೀತಿ ಕೆಲ ಸಮಯಗಳ ಹಿಂದೆ ಗ್ರಾಮೀಣ ಭಾಗಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಅನುಷ್ಠಾನಗೊಳಿಸಿದ್ದು, ಪ್ರಸ್ತುತ ಬಹುತೇಕ ಘಟಕಗಳು ಕಾರ್ಯಾಚರಣೆ ನಡೆಸದೆ ಸ್ಥಗಿತಗೊಂಡಿದೆ.

ಇಡ್ಕಿದು ಗ್ರಾ.ಪಂ. ವ್ಯಾಪ್ತಿಯ ಮಿತ್ತೂರು ಕುವೆತ್ತಿಲ ಬಳಿಯಲ್ಲೂ ವರ್ಷದ ಹಿಂದೆ ಶುದ್ಧ ನೀರಿನ ಘಟಕವೊಂದನ್ನು ಅನುಷ್ಠಾನಗೊಳಿಸಲಾಗಿದೆ. ಇದು ಪ್ರಾರಂಭದ ಕೆಲದಿನಗಳ ಕಾಲ ಕಾರ್ಯಾಚರಿಸಿದ್ದು ಬಿಟ್ಟರೆ, ಉಳಿದಂತೆ ಈಗಲೂ ಪ್ರಯೋಜನ ಇಲ್ಲದಂತಾಗಿದೆ. ಘಟಕದಲ್ಲಿ ತಾಂತ್ರಿಕ ತೊಂದರೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಅದು ಕಾರ್ಯಾಚರಿಸುತ್ತಿಲ್ಲ ಎಂದು ಸಂಬಂಧಪಟ್ಟವರು ಉತ್ತರ ನೀಡುತ್ತಾರೆ.

ತಾಂತ್ರಿಕ ದೋಷ
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವತಿಯಿಂದ ಗ್ರಾಮೀಣಾವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ಈ ಘಟಕ ಅನುಷ್ಠಾನಗೊಂಡಿದ್ದು, ಕೆಆರ್‌ಐಡಿಎಲ್ ಮಂಗಳೂರು ಇದರ ಮೂಲಕ ಘಟಕದ ಕೆಲಸಗಳು ನಡೆದಿದ್ದವು. ಇದರಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾ.ಪಂ.ನಿಂದ ತಿಳಿಸಿದಾಗ ಬಂದು ದುರಸ್ತಿ ಮಾಡಿ ಹೋಗಿದ್ದರು. ಆದರೆ ಸ್ವಲ್ಪ ಸಮಯದ ಬಳಿಕ ಮತ್ತೆ ದೋಷ ಕಂಡುಬಂದಿದ್ದು, ದುರಸ್ತಿಗಾಗಿ ಅವರು ನೀಡಿರುವ ದೂರವಾಣಿ ಸಂಖ್ಯೆಯನ್ನು ರಿಸೀವ್‌ ಮಾಡುವವರೇ ಇಲ್ಲ ಎಂದು ಗ್ರಾ.ಪಂ. ಆರೋಪಿಸುತ್ತಿದೆ.

ಪ್ರಯೋಜನವೇ ಇಲ್ಲ
ಶುದ್ಧ ನೀರಿನ ಘಟಕವನ್ನು ಜನನಿಬಿಡ ಪ್ರದೇಶದಲ್ಲಿ ಅನುಷ್ಠಾನಗೊಳಿಸಬೇಕು. ಜತೆಗೆ ಅದು 24 ಗಂಟೆಯೂ ಕಾರ್ಯಾಚರಣೆ ನಡೆಸಬೇಕು ಎನ್ನುವ ನಿಯಮವಿದೆ. ಆದರೆ ಮಿತ್ತೂರಿನಲ್ಲಿ ಅನುಷ್ಠಾನಗೊಂಡಿರುವ ಸ್ಥಳವು ಜನವೇ ಇಲ್ಲದ ಪ್ರದೇಶವಾಗಿದೆ. ಹೀಗಾಗಿ ಅದನ್ನು ಉಪಯೋಗಿಸುವವರಿಲ್ಲ. ಈ ಘಟಕ ಜನರಿಗೆ ಪ್ರಯೋಜನವಾದಂತಿಲ್ಲ. ಗ್ರಾ.ಪಂ.ಬಳಿ ಅದು ಯಾಕೆ ಕಾರ್ಯಾಚರಣೆ ಮಾಡುತ್ತಿಲ್ಲ ಎಂದು ಕೇಳಿದರೆ, ಅದನ್ನು ಉಪಯೋಗಿವವರೂ ಕಡಿಮೆ ಇದ್ದಾರೆ. ಯಾರು ಕೂಡ ಕಾಯಿನ್‌ ಹಾಕಿ ಉಪಯೋಗಿಸುತ್ತಿಲ್ಲ ಎನ್ನುವ ಉತ್ತರ ನೀಡುತ್ತಾರೆ. ಅದು ಜನನಿಬಿಡ ಪ್ರದೇಶದಲ್ಲಾದರೂ ಅನುಷ್ಠಾನಗೊಂಡಿದ್ದರೆ ಕೆಲವು ಮಂದಿಯಾದರೂ ಉಪಯೋಗಿಸುತ್ತಿದ್ದರು ಎನ್ನುವ ಅಭಿಪ್ರಾಯ ಕೇಳಿಬಂದಿದೆ.

ಸುಮಾರು 8.5 ಲಕ್ಷ ರೂ.ಗಳಲ್ಲಿ ಘಟಕವು ಅನುಷ್ಠಾನಗೊಂಡಿದ್ದು, ಪ್ರಸ್ತುತ ಅದನ್ನು ದುರಸ್ತಿ ಪಡಿಸುವ ಕುರಿತು ಯಾರೂ ಆಸಕ್ತಿ ವಹಿಸಿದಂತೆ ಕಂಡುಬರುತ್ತಿಲ್ಲ. ಗ್ರಾ.ಪಂ. ಸದನ ಸಮಿತಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ಹೇಳುತ್ತಿದೆ. ಹೀಗಾಗಿ ಇನ್ನೂ ಒಂದಷ್ಟು ಕಾಲ ಅದನ್ನು ಹಾಗೇ ಬಿಟ್ಟರೆ ಅದು ಪೂರ್ತಿ ತುಕ್ಕು ಹಿಡಿದು ಹೋಗುವ ಆತಂಕ ಎದುರಾಗಿದ್ದು, ಅನುದಾನ ಪೂರ್ತಿ ಮಣ್ಣು ಪಾಲಾಗುವ ಸ್ಥಿತಿ ಇದೆ. ಹೀಗಾಗಿ ಇನ್ನಾದರೂ ಸಂಬಂಧಪಟ್ಟವರು ಇತ್ತ ಗಮನಹರಿಸಿ ಅದನ್ನು ಕಾರ್ಯಾಚರಣೆಯ ಸ್ಥಿತಿಯಲ್ಲಿ ಉಳಿಸಬೇಕಿದೆ.

8.5 ಲಕ್ಷ ರೂ. ಘಟಕ
ಸುಮಾರು 8.5 ಲಕ್ಷ ರೂ.ಗಳಲ್ಲಿ ಘಟಕವು ಅನುಷ್ಠಾನಗೊಂಡಿದ್ದು, ಪ್ರಸ್ತುತ ಅದನ್ನು ದುರಸ್ತಿ ಪಡಿಸುವ ಕುರಿತು ಯಾರೂ ಆಸಕ್ತಿ ವಹಿಸಿದಂತೆ ಕಂಡುಬರುತ್ತಿಲ್ಲ. ಗ್ರಾ.ಪಂ. ಸದನ ಸಮಿತಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ಹೇಳುತ್ತಿದೆ. ಹೀಗಾಗಿ ಇನ್ನೂ ಒಂದಷ್ಟು ಕಾಲ ಅದನ್ನು ಹಾಗೇ ಬಿಟ್ಟರೆ ಅದು ಪೂರ್ತಿ ತುಕ್ಕು ಹಿಡಿದು ಹೋಗುವ ಆತಂಕ ಎದುರಾಗಿದ್ದು, ಅನುದಾನ ಪೂರ್ತಿ ಮಣ್ಣು ಪಾಲಾಗುವ ಸ್ಥಿತಿ ಇದೆ. ಹೀಗಾಗಿ ಇನ್ನಾದರೂ ಸಂಬಂಧಪಟ್ಟವರು ಇತ್ತ ಗಮನಹರಿಸಿ ಅದನ್ನು ಕಾರ್ಯಾಚರಣೆಯ ಸ್ಥಿತಿಯಲ್ಲಿ ಉಳಿಸಬೇಕಿದೆ.
ಅನುಷ್ಠಾನದಲ್ಲಿ ದೋಷ

ಶುದ್ಧ ನೀರಿನ ಘಟಕದಲ್ಲಿ ಪ್ರಾರಂಭದಲ್ಲೇ ದೋಷ ಕಂಡುಬಂದಿದ್ದು, ಬಳಿಕ ಅದನ್ನು ದುರಸ್ತಿ ಮಾಡಲಾಗಿತ್ತು. ಮತ್ತೆ ದೋಷ ಕಂಡುಬಂದಾಗ ತಿಳಿಸಲು ಕರೆ ಮಾಡಿದರೆ ಅವರು ಕಾಲ್ ರಿಸೀವ್‌ ಮಾಡುತ್ತಿಲ್ಲ. ಜತೆಗೆ ಮಿತ್ತೂರಿನಲ್ಲಿ ಅದನ್ನು ಉಪಯೋಗಿಸುವವರ ಸಂಖ್ಯೆಯೂ ಕಡಿಮೆ ಇದೆ.
– ಗೋಕುಲದಾಸ್‌ ಭಕ್ತ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

••ಕಿರಣ್‌ ಸರಪಾಡಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.