ಮಂಗಳೂರಿಗೆ ಶುದ್ಧೀಕೃತ ಸಮುದ್ರ ನೀರು: ಚೆನ್ನೈಗೆ ತಂಡ


Team Udayavani, Feb 9, 2018, 10:45 AM IST

maq.jpg

ಮಂಗಳೂರು : ಮಂಗಳೂರು ನಗರಕ್ಕೆ ನಿರಂತರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಒಂದೂವರೆ ವರ್ಷದ ಹಿಂದೆ ಪ್ರಸ್ತಾವಗೊಂಡು ನನೆಗುದಿಗೆ ಬಿದ್ದಿದ್ದ ಸಮುದ್ರ ನೀರನ್ನು ಸಂಸ್ಕರಿಸಿ ಒದಗಿಸುವ ಚಿಂತನೆ ಇದೀಗ ಮತ್ತೆ ಮರು ಜೀವ ಪಡೆದುಕೊಂಡಿದೆ.

ಸಮುದ್ರದ ನೀರು ಸಂಸ್ಕರಿಸಿ ಸಿಹಿನೀರನ್ನಾಗಿ ಪರಿವರ್ತಿಸುವ ಬಗ್ಗೆ ಅಧ್ಯಯನ ನಡೆಸಲು ಮನಪಾ ಹಾಗೂ ಅಧಿಕಾರಿಗಳನ್ನೊಳಗೊಂಡ ಸುಮಾರು 33ಕ್ಕೂ ಅಧಿಕ ಮಂದಿಯ ತಂಡವು ಈ ವ್ಯವಸ್ಥೆಯನ್ನು ಈಗಾಗಲೇ ಸ್ಥಾಪಿಸಿರುವ ಚೆನ್ನೈಗೆ ಅಧ್ಯಯನ ಪ್ರವಾಸ ಕೈಗೊಂಡಿದೆ.

ಕಡಲ ತಡಿಯ ಮಂಗಳೂರಿ ನಲ್ಲಿ ತೀರಾ ಸಾಮಾನ್ಯ ಸಮಸ್ಯೆ ಕುಡಿಯುವ ಶುದ್ಧ ನೀರಿನದ್ದೇ. ಸಮುದ್ರವನ್ನೇ ಬೆನ್ನಲ್ಲಿಟ್ಟುಕೊಂಡರೂ ನೀರಿನ ಅಭಾವಕ್ಕೆ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ತುಂಬೆಯ ವೆಂಟೆಡ್‌ ಡ್ಯಾಂನಲ್ಲಿ ನೀರು ಸಂಗ್ರಹ ಮಟ್ಟವನ್ನು 6 ಅಡಿಗಳಿಗೆ ಏರಿಸಲಾಗಿದೆ. ಇದರಿಂದ ಮಂಗಳೂರಿಗೆ ನೀರು ಸರಬರಾಜು ಈ ಬಾರಿ ಅಬಾಧಿತ ಎಂದು ಹೇಳಲಾಗುತ್ತಿದೆಯಾದರೂ
ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಪರ್ಯಾಯ ಪರಿಹಾರೋಪಾಯ ಕ್ರಮ ಅತ್ಯಗತ್ಯ.

ಹತ್ತಿರದಲ್ಲೇ ಇರುವ ಅರಬೀ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿ ಒದಗಿ ಸುವುದೊಂದೇ ಇದಕ್ಕಿರುವ ಪರಿಹಾರ. ಈ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕ ಗಳನ್ನು ಅಧ್ಯಯನ ನಡೆಸಲು ಪಾಲಿಕೆಯ ತಂಡ ತಮಿಳುನಾಡಿನ ರಾಜಧಾನಿಯತ್ತ ಹೊರಟು ನಿಂತಿದೆ.

ಚೆನ್ನೈಯಲ್ಲಿದೆ ಉಪ್ಪು ನೀರು ಸಂಸ್ಕರಣ ಘಟಕ
ಚೆನ್ನೈಯಲ್ಲಿ ಸಮುದ್ರ ನೀರನ್ನು ಸಂಸ್ಕರಿಸುವ “ಸೀ ವಾಟರ್‌ ಡಿ ಸಲೈನೇಶನ್‌ ಪ್ಲಾಂಟ್‌’ ಈಗಾಗಲೇ ಕಾರ್ಯ ನಿರ್ವಹಿಸುತ್ತಿದೆ. ಚೆನ್ನೈ ನಗರಕ್ಕೆ ಇದೇ ಘಟಕ ದಿಂದ ನೀರು ಒದಗಿಸಲಾಗುತ್ತಿದ್ದು, ಮಂಗಳೂರಿ  ನಲ್ಲಿಯೂ ಇದನ್ನು ಅಳವಡಿಸುವ ಸಂಬಂಧ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲು ಪಾಲಿಕೆಯಿಂದ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ.

ಮೇಯರ್‌ ಕವಿತಾ ಸನಿಲ್‌, ಮನಪಾ ಆಯುಕ್ತ ಮೊಹಮ್ಮದ್‌ ನಝೀರ್‌ ನೇತೃತ್ವದಲ್ಲಿ ಶುಕ್ರವಾರ ರಾತ್ರಿ 10.30ಕ್ಕೆ ನಾಲ್ವರು ಅಧಿಕಾರಿಗಳು, ಕಾರ್ಪೊ ರೇಟರ್‌ಗಳು, ನಾಲ್ವರು ನಾಮ ನಿರ್ದೇಶಿತ ಸದಸ್ಯರು ಸಹಿತ ಒಟ್ಟು ಸುಮಾರು 33ಕ್ಕೂ ಹೆಚ್ಚು ಮಂದಿ ಯನ್ನೊಳಗೊಂಡ ತಂಡ ಚೆನ್ನೈಗೆ ತೆರಳಲಿದೆ. ಒಟ್ಟು ಮೂರು ದಿನಗಳ ಪ್ರವಾಸ ಇದಾಗಿದ್ದು, ಫೆ. 12ರಂದು ಸಂಜೆ ತಂಡ ನಗರಕ್ಕೆ ಹಿಂದಿರುಗಲಿದೆ. ತಂಡದ ಈ ಪ್ರವಾಸದ ಖರ್ಚು ವೆಚ್ಚಗಳನ್ನು ಪಾಲಿಕೆ ಭರಿಸುತ್ತಿ¨.

ಮಹತ್ವದ ಹೆಜ್ಜೆ
ಸಮುದ್ರ ನೀರು ಸಂಸ್ಕರಿಸಿ ಮಂಗಳೂರು ನಗರಕ್ಕೆ ಒದಗಿಸುವ ಮೂಲಕ ನೀರಿನ ಸಮಸ್ಯೆಗೆ ಮುಕ್ತಿ ಹಾಡಬೇಕೆಂಬ ಪ್ರಸ್ತಾವ ಒಂದೂವರೆ ವರ್ಷದ ಹಿಂದೆಯೇ ಚರ್ಚೆಗೆ ಬಂದಿತ್ತು. ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎ.ಬಿ. ಇಬ್ರಾಹಿಂ ಅವರು 2016ರ ಮೇ 25ರಂದು ಮಂಗಳೂರಿನ ಕೈಗಾರಿಕೆಗಳ ಪ್ರಮುಖರ ಸಭೆ ಕರೆದು ಸಮುದ್ರದ ನೀರು ಸಂಸ್ಕರಿಸಿ ಸಿಹಿ ನೀರು ಪಡೆಯುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವ ಬಗ್ಗೆ ಚರ್ಚಿಸಿದ್ದರು. ಆಗ ರಾಜ್ಯ ನಗರಾಭಿವೃದ್ಧಿ ಸಚಿವರಾಗಿದ್ದ ಆರ್‌. ರೋಶನ್‌ ಬೇಗ್‌ ಕೂಡ ಆಸಕ್ತಿ ಪ್ರದರ್ಶಿಸಿ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ತಂಡ ಚೆನ್ನೈಗೆ ಭೇಟಿ ನೀಡಿ ಪರಿಶೀಲಿಸುವಂತೆ ಸಲಹೆ ನೀಡಿದ್ದರು. ಆದರೆ ಅನಂತರ ಯಾವುದೇ ಪ್ರಗತಿ ಆಗಿರಲಿಲ್ಲ. ಒಂದೂವರೆ ವರ್ಷದ ಬಳಿಕ ಈಗ ಹಿಂದಿನ ಚಿಂತನೆಗೆ ಮರುಜೀವ ದೊರಕಿದ್ದು, ಪಾಲಿಕೆ ಪ್ರಮುಖರ ಚೆನ್ನೈ ಭೇಟಿ ಮಹತ್ವದ ಹೆಜ್ಜೆಯಾಗಲಿದೆ.

ಸಮುದ್ರ ನೀರು ಸಂಸ್ಕರಣೆಗೆ
871 ಕೋ.ರೂ. ಮಂಗಳೂರಿನಲ್ಲಿ ಪ್ರತೀ ಬೇಸಗೆಯಲ್ಲಿ ತಲೆದೋರುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮುದ್ರ ನೀರು ಸಂಸ್ಕರಣೆಗೆಂದೇ ರಾಜ್ಯ ಬಜೆಟ್‌ ನಲ್ಲಿ ಅಂದಾಜು 871 ಕೋ.ರೂ.ಗಳನ್ನು ಕಾಯ್ದಿರಿಸಲಾಗಿದೆ. ಉಪ್ಪು ನೀರು ಸಂಸ್ಕರಣೆಯ ಅವ ಕಾಶ  ಗಳನ್ನು ತಿಳಿದು ಕೊಳ್ಳಲು ಚೆನ್ನೈಗೆ ಭೇಟಿ ನೀಡ ಲಾಗುತ್ತಿದೆ.
– ಮೊಹಮ್ಮದ್‌ ನಝೀರ್‌ ಪಾಲಿಕೆ ಆಯುಕ್ತ
 
ನೀರಿನ ಸಮಸ್ಯೆ ತಲೆದೋರದು
ಈಗಾಗಲೇ ತುಂಬೆ ನೂತನ ವೆಂಟೆಡ್‌ ಡ್ಯಾಂನಲ್ಲಿ 6 ಮೀಟರ್‌ ನೀರು ನಿಲುಗಡೆ ಮಾಡಿರುವುದರಿಂದ ನಗರಕ್ಕೆ ನೀರಿನ ಸಮಸ್ಯೆ ತಲೆದೋರದು. ಆದರೂ ಭವಿಷ್ಯದಲ್ಲಿ ನೀರಿನ ಅಭಾವ ಉಂಟಾಗದಂತೆ ಶಾಶ್ವತ ಪರಿಹಾರ ಅಗತ್ಯವಾಗಿದೆ. ಹೀಗಾಗಿ ಚೆನ್ನೈಗೆ ಭೇಟಿ ನೀಡಿ ಸಮುದ್ರ ನೀರು ಸಂಸ್ಕರಣೆಯ ಸಾಧಕ-ಬಾಧಕ ಗಳನ್ನು ಅಧ್ಯಯನ ಮಾಡಲಿದ್ದೇವೆ’.
– ಕವಿತಾ ಸನಿಲ್‌ ಮಂಗಳೂರು ಮೇಯರ್‌

„ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.