ಮುದ ನೀಡಿದ ಲಗೋರಿ, ಕೊತ್ತಳಿಗೆ ಕ್ರಿಕೆಟ್‌!


Team Udayavani, Oct 22, 2018, 11:11 AM IST

22-october-5.gif

ಪುತ್ತೂರು: ತುಳುನಾಡಿನ ಸಂಪ್ರ ದಾಯ, ಸಂಸ್ಕೃತಿ ಸಮ್ಮಿಳಿತ ತುಳು ಜನ ಪದ ಕ್ರೀಡಾಕೂಟ ರವಿವಾರ ತುಳುವರ ಪಾಲ್ಗೊಳ್ಳುವಿಕೆಯೊಂದಿಗೆ ಕೊಂಬೆಟ್ಟು ತಾ| ಕ್ರೀಡಾಂಗಣದಲ್ಲಿ ವಿಶಿಷ್ಟ ರೀತಿಯಲ್ಲಿ ನಡೆದು ಗಮನ ಸೆಳೆಯಿತು. ನ. 3ರಂದು ಪುತ್ತೂರಿನಲ್ಲಿ ನಡೆಯಲಿರುವ ತಾ| ತುಳು ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಈ ತುಳು ಜನಪದ ಕ್ರೀಡಾಕೂಟವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾ| ತುಳು ಸಾಹಿತ್ಯ ಸಮ್ಮೇಳನ ಸಮಿತಿಯು ಆಯೋಜಿಸಿತು.

ತುಳು ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸುವ ಮೂಲಕ ಆರಂಭಗೊಂಡ ಕ್ರೀಡಾಕೂಟದಲ್ಲಿ ಲಗೋರಿ, ಕೊತ್ತಲಿಗೆ ಕ್ರಿಕೆಟ್‌, ಹಗ್ಗಜಗ್ಗಾಟ, ಚೆನ್ನೆಮಣೆ ಆಟ ಮೊದಲಾದ ಜನಪದ ಕ್ರೀಡಾ ಸ್ಪರ್ಧೆಗಳು ಮನರಂಜಿಸಿದವು. ತಾ|ನ ವಿವಿಧೆಡೆಯಿಂದ ಸ್ಪರ್ಧಾಳುಗಳು ತಂಡ ಕಟ್ಟಿಕೊಂಡು ಬಂದು ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸ್ಪರ್ಧೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು.

ಉದ್ಘಾಟನೆ
ಕ್ರೀಡಾಕೂಟವನ್ನು ಉದ್ಘಾಟಿಸಿದ ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಮಾತನಾಡಿ, ತಂತ್ರಜ್ಞಾನದ ವಿಪರೀತ ಬೆಳವಣಿಗೆಯಿಂದ ನಮ್ಮ ಮೂಲದಿಂದ ಬಂದ ಆಚರಣೆಗಳು ಮರೆಯಾಗುತ್ತಿವೆ. ಗತಕಾಲದ ತುಳುನಾಡಿನ ಜನಪದ ಕ್ರೀಡೆಗಳನ್ನು ನೆನಪಿಸುವ ಕಾರ್ಯಆಗುತ್ತಿರುವುದು ಮತ್ತು ಸಾಹಿತ್ಯ ಸಮ್ಮೇಳನ ಇದಕ್ಕೆ ಪ್ರೇರಣೆಯಾಗುತ್ತಿರುವುದು ಖುಷಿಯ ವಿಚಾರ. 

ಕ್ರೀಡೆಯ ವಿಶೇಷ 
1 ಅತಿಥಿ ಗಣ್ಯರು ಸಹಿತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಹಾಗೂ ತುಳುಜನಪದ ಕ್ರೀಡಾಕೂಟ ಮುದ್ರೆಯ ಟೋಪಿ ವಿತರಿಸಲಾಯಿತು.
2 ಕ್ರೀಡಾ ಕೂಟದಲ್ಲಿ ಕೃಷಿ ಚಟುವಟಿಕೆಗಳನ್ನು ನೆನಪಿಸುವ ಅಡಿಕೆ ಮರದ ಹಾಳೆಯಲ್ಲಿ ಮಕ್ಕಳನ್ನು ಕೂರಿಸಿ ಎಳೆದೊಯ್ಯುವ ಆಟಕ್ಕೆ ಚಾಲನೆ ನೀಡಿದರು.
3 ಕ್ರೀಡಾ ಕೂಟದಲ್ಲಿ ಹಿರಿಯ ನಾಗರಿಕರಿಗೆ ನಡಿಗೆ ಸ್ಪರ್ಧೆ, ಪುರುಷ ಹಾಗೂ ಮಹಿಳೆಯರಿಗೆ ಲಗೋರಿ, ಹಗ್ಗಜಗ್ಗಾಟ, ಚೆನ್ನೆಮಣೆ, ಪುರುಷರಿಗೆ ಕೊತ್ತಲಿಗೆ ಬ್ಯಾಟ್‌ ಕ್ರಿಕೆಟ್‌, ಪ್ರಾಥಮಿಕ ಶಾಲಾ ಹುಡುಗರಿಗೆ ಹಾಳೆ ಎಳೆಯುವುದು, ಟೈರ್‌ ತಿರುಗಿಸುವುದು, ಲಗೋರಿ, ಹುಡುಗಿಯರಿಗೆ ಕಲ್ಲಾಟ, ಜುಬಿಲಿ, ನಾಯಿಮೂಳೆ ಆಟ, ಪ್ರೌಢಶಾಲಾ ಹುಡುಗರಿಗೆ ಟೈರ್‌ ತಿಗಿಸುವುದು, ಗೋಣಿಚೀಲ ಓಟ, ಲಗೋರಿ, ಹುಡುಗಿಯರಿಗೆ ಕಲ್ಲಾಟ, ಜುಬಿಲಿ, ನಾಯಿ ಮೂಳೆ ಆಟ ಜರಗಿದವು.

ತುಳುನಾಡಿಗೆ ವಿಶೇಷ ಮನ್ನಣೆ
ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ತುಳು ಸಾಹಿತ್ಯ ಸಮ್ಮೇಳನದ ರೂವಾರಿಗಳು. ಅನಂತರದ ದಿನಗಳಲ್ಲಿ ಅಲ್ಲಲ್ಲಿ ತುಳು ಸಾಹಿತ್ಯ ಸಮ್ಮೇಳನ ಜರಗುವ ಮೂಲಕ ತುಳುನಾಡಿಗೆ ವಿಶೇಷ ಮನ್ನಣೆ ದೊರಕುತ್ತಿದೆ. ತುಳುನಾಡಿನ ವೈಶಿಷ್ಟ್ಯಗಳನ್ನು, ಧಾರ್ಮಿಕ, ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈಗಾಗಲೇ ಸುಳ್ಯ, ಬಂಟ್ವಾಳ ತಾ|ನಲ್ಲಿ ತುಳು ಸಾಹಿತ್ಯ ಸಮ್ಮೇಳನಗಳು ನಡೆದಿದ್ದು, ಪುತ್ತೂರಿನಲ್ಲಿ ನ.3ರಂದು ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಪದ್ಮನಾಭ ಶೆಟ್ಟಿ,
ಸಂಚಾಲಕರು, ತುಳು ಜನಪದ ಕ್ರೀಡಾಕೂಟ -2018

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.