Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು

ಪುತ್ತೂರು ನಗರದ ಮೊದಲ ಸ. ಪ್ರ. ದರ್ಜೆ ಕಾಲೇಜು; ಕಾಲೇಜಿಗೆ ಹೋಗಲು ಸೂಕ್ತ ವಾಹನ ವ್ಯವಸ್ಥೆಯೂ ಇಲ್ಲ

Team Udayavani, Oct 21, 2024, 1:09 PM IST

2

ಪುತ್ತೂರು: ಹದಿನೇಳು ವರ್ಷಗಳ ಹಿಂದೆ ಪ್ರಾರಂಭಗೊಂಡು ಪ್ರಸ್ತುತ ಜಿಡೆಕಲ್ಲಿನಲ್ಲಿರುವ ನಗರದ ಮೊದಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 40ಕ್ಕೆ ಇಳಿದಿದೆ.

ಕಳೆದ ಕೆಲವು ವರ್ಷಗಳಿಂದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಗಳ ಕೊರತೆ ಎದುರಿಸುತ್ತಿದೆ. ಮಂಗಳೂರು ವಿ.ವಿ.ವ್ಯಾಪ್ತಿಯ ಕೆಲವು ಸರಕಾರಿ ಕಾಲೇಜುಗಳ ಸ್ಥಿತಿಯು ಇದೇ ತೆರನಾಗಿದ್ದು ನಾನಾ ಕಾರಣಗಳಿಂದ ವಿದ್ಯಾರ್ಥಿಗಳ ದಾಖಲಾತಿ ಕ್ಷೀಣಿಸಿದೆ.

ಜಿಡೆಕಲ್ಲಿಗೆ ಸ್ಥಳಾಂತರ
2007 ರಲ್ಲಿ ಪುತ್ತೂರಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರಾಯಿತು. ಅಂದ ಹಾಗೆ, ಇದು ನಗರದ ಮೊದಲ ಸರಕಾರಿ ಪದವಿ ಕಾಲೇಜು. ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದಲ್ಲಿ ಪ್ರಾರಂಭಗೊಂಡು ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿತ್ತು. 2009 ರಲ್ಲಿ ನಗರದಿಂದ ಐದು ಕಿ.ಮೀ. ದೂರದಲ್ಲಿ ಇರುವ ಜಿಡೆಕಲ್ಲಿಗೆ ಸ್ಥಳಾಂತರಗೊಂಡು ಸ್ವಂತ ಕಟ್ಟಡದಲ್ಲಿ ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿತ್ತು.

500ರಿಂದ 40ಕ್ಕೆ ಇಳಿಯಿತು
ನೆಲ್ಲಿಕಟ್ಟೆಯಲ್ಲಿ ಇರುವಾಗ ಸುಮಾರು 500ರ ತನಕ ವಿದ್ಯಾರ್ಥಿ ಸಂಖ್ಯೆ ಹೊಂದಿದ್ದ ಈ ಕಾಲೇಜು ಪ್ರಸ್ತುತ ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಕೇವಲ 40 ವಿದ್ಯಾರ್ಥಿಗಳನ್ನಷ್ಟೇ ಹೊಂದಿದೆ. ಬಿಎ, ಬಿಕಾಂ, ಬಿಸಿಎ ವಿಭಾಗ ಇಲ್ಲಿದೆ. ಆದರೆ ಬಿಸಿಎ ವಿಭಾಗಕ್ಕೆ ವಿದ್ಯಾರ್ಥಿಗಳೇ ಇಲ್ಲದ ಕಾರಣ ಅದಿನ್ನು ತೆರದಿಲ್ಲ. ಬಿಎ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯ. ತೃತೀಯ ವರ್ಷದಲ್ಲಿ ಮಾತ್ರ ವಿದ್ಯಾರ್ಥಿಗಳು ಇದ್ದಾರೆ. ಬಿಕಾಂನಲ್ಲಿ ಪ್ರಥಮ ಮತ್ತು ತೃತೀಯ ವರ್ಷ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದರೆ ದ್ವಿತೀಯ ಬಿಕಾಂನಲ್ಲಿ ವಿದ್ಯಾರ್ಥಿ ಸಂಖ್ಯೆ ಶೂನ್ಯ.

ಮುಚ್ಚುವ ಭೀತಿ
ಮೊದಲ ವರ್ಷದ ಬಿಎ, ಬಿಸಿಎಯಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಕ್ರಮೇಣ ಅವೆರೆಡು ಮುಚ್ಚುವ ಭೀತಿಯು ಇದೆ. ಬಿಕಾಂನಲ್ಲಿ ಬೆರಳೆಣಿಕೆಯಷ್ಟೇ ವಿದ್ಯಾರ್ಥಿಗಳಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಇಡೀ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯವಾಗಬಹುದು. ಹೀಗಾಗಿ ಇಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಪೂರಕವಾಗಿ ಸ್ನಾತಕೋತ್ತರ ವಿಭಾಗ ತೆರೆಯಬೇಕು, ಸಾರಿಗೆ ವ್ಯವಸ್ಥೆಯ ಸುಧಾರಣೆಯಾಗಬೇಕು ಅನ್ನುವ ಬೇಡಿಕೆ ಇದೆ.

ಎಲ್ಲ ಕಾಲೇಜುಗಳ ಕಥೆಯೇ ಇದೇ
ಪುತ್ತೂರು ಗಡಿಗೆ ಹೊಂದಿಕೊಂಡಿರುವ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಥೆಯೂ ಇಂತಹುದೆ. ಈ ವರ್ಷ ಇರುವ ವಿದ್ಯಾರ್ಥಿ ಸಂಖ್ಯೆ 92. ಕಳೆದ ವರ್ಷ 143 ಮಂದಿ ವಿದ್ಯಾರ್ಥಿಗಳಿದ್ದರು ಅನ್ನುತ್ತಿದೆ ಕಾಲೇಜಿನ ಮಾಹಿತಿ. ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯೇ ಇದೆ.

ಇಲ್ಲಿ ವಿದ್ಯಾರ್ಥಿಗಳಿದ್ದಾರೆ ಆದರೆ ಸ್ವಂತ ಕಟ್ಟಡ ಇಲ್ಲ
ಪುತ್ತೂರು ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ 600 ಕ್ಕೂ ಅಧಿಕ ಇದೆ. ಆದರೆ ಇಲ್ಲಿನ ಸಮಸ್ಯೆ ಸ್ವಂತ ಕಟ್ಟಡ ಇಲ್ಲದಿರುವುದು. ಹಳೆಯ ಜೈಲು ಕಟ್ಟಡದೊಳಗೆ ಇಲ್ಲಿ ವ್ಯಾಸಂಗ ಮಾಡಬೇಕಾದ ಸ್ಥಿತಿ ಇದೆ. ಹೊಸ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಂಡು ಹಲವು ವರ್ಷಗಳು ಕಳೆದಿದ್ದು ಜಾಗದ ಸಮಸ್ಯೆ ಕಾಡಿತ್ತು. ಅಂತೂ ಕಳೆದ ವರ್ಷ ಬೊಳುವಾರಿನಲ್ಲಿ ಜಾಗ ನಿಗದಿಪಡಿಸಲಾಗಿತ್ತು. ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನಡೆದಿದ್ದರೂ ಅದಿನ್ನೂ ಅಪೂರ್ಣ ಸ್ಥಿತಿಯಲ್ಲಿಯೇ ಇದೆ.

ಕಾಲೇಜಿಗೆ ಸಂಪರ್ಕವೇ ಕಷ್ಟ
ಕೇಂದ್ರ ಸ್ಥಾನದಲ್ಲಿದ್ದ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಅನ್ನು ಐದು ಕಿ.ಮೀ. ದೂರದ ಜಿಡೆಕಲ್ಲಿನ ಗುಡ್ಡದ ಮೇಲೆ ಸ್ಥಾಪನೆ ಮಾಡಲಾಯಿತು. ಹಚ್ಚ ಹಸುರಿನ ಪ್ರಶಾಂತ ವಾತಾವರಣವಾಗಿದ್ದರೂ ಇಲ್ಲಿ ಸಂಪರ್ಕಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲ. ಪುತ್ತೂರು ತಾಲೂಕಿನ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳು ನೇರವಾಗಿ ಜಿಡೆಕಲ್ಲಿಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ. ನಗರದ ಬಸ್‌ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಾಲೇಜಿನ ಸಂಪರ್ಕಕ್ಕೆಂದೇ ಮೀಸಲಿಟ್ಟಿರುವ ಬಸ್‌ನಲ್ಲಿ ಸಂಚರಿಸಬೇಕು. ಅದು ಕೈ ತಪ್ಪಿದರೆ ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕು. ಇದು ಕೂಡ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖಕ್ಕೆ ಕಾರಣ ಎನ್ನಲಾಗಿದೆ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

1-a-sidili

Puttur: ಸಿಡಿಲು ಬಡಿದು ಹಾನಿ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.