ಪುತ್ತೂರು: ನಾಳೆ ಜನಜಾಗೃತಿ ಸಮಾವೇಶ


Team Udayavani, Oct 2, 2017, 3:13 PM IST

2-Mng—-9.jpg

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಜನಜಾಗೃತಿ ಸಮಾವೇಶ ನಡೆಯಲಿದೆ. ಅ. 3ರಂದು ಪುತ್ತೂರಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯುವುದು ವಿಶೇಷ.

ಗ್ರಾಮೀಣಾಭಿವೃದ್ಧಿ, ಸಾಮಾಜಿಕ ಸ್ವಾಸ್ಥ್ಯದ ಪರಿಕಲ್ಪನೆಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ದೃಷ್ಟಿಕೋನದಿಂದ ಹುಟ್ಟಿಕೊಂಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮದ್ಯಪಾನಾದಿ ದುಶ್ಚಟಗಳಿಂದಾಗಿ ಮನೆ, ಕುಟುಂಬ, ಹೆಂಡತಿ-ಮಕ್ಕಳಿಂದ ಮಾನಸಿಕವಾಗಿ, ದೈಹಿಕವಾಗಿ ದೂರವಾದ ಜನರನ್ನು ದುಶ್ಚಟ ಮುಕ್ತಗೊಳಿಸಿ ಅವರ ಬದುಕಿನಲ್ಲೂ ಸಂತೃಪ್ತಿಯ ಬೆಳಕನ್ನು ಮೂಡಿಸುತ್ತಿದೆ. ಸಾರ್ವಜನಿಕ ಜನಜಾಗೃತಿಯ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಸಾಮಾಜಿಕ ನೆಲೆಯಲ್ಲಿ ಜನಜಾಗೃತಿ ವೇದಿಕೆ ಮುಖ್ಯ ಸ್ತರದಲ್ಲಿ ಗುರುತಿಸಿಕೊಂಡಿದೆ.

ತಾಲೂಕಿನಲ್ಲಿ ಜನಜಾಗೃತಿ
ಪುತ್ತೂರು ತಾಲೂಕಿನಲ್ಲಿ ಜನಜಾಗೃತಿ ಕಾರ್ಯಕ್ರಮವು 2002ರಿಂದ ಅನುಷ್ಠಾನಗೊಂಡು ನಿರಂತರ ಸಾಮಾಜಿಕ ಕಾರ್ಯ ಚಟುವಟಿಕೆ ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ 50 ಮದ್ಯವರ್ಜನ ಶಿಬಿರಗಳು ಆಯೋಜನೆಗೊಂಡು 3,420 ಶಿಬಿರಾರ್ಥಿಗಳು ಮದ್ಯ ಮುಕ್ತರಾಗಿದ್ದಾರೆ. ಸುಮಾರು 6,686 ನವಜೀವನ ಸಮಿತಿಗಳ ಸಭೆ ನಡೆಸಲಾಗಿದೆ. 

5367 ಮನೆ ಭೇಟಿ ಮಾಡಿಕೊಂಡು 233 ಸಮಿತಿ ರಚನೆ ಮಾಡಲಾಗಿದೆ. 162 ಸಮಾವೇಶ, ಜಾಥಾ, ಬೀದಿನಾಟಕ ಮತ್ತು ಮಾಹಿತಿ ಕಾರ್ಯಕ್ರಮಗಳು, 1056 ಗ್ರಾಮ ಸಮಿತಿಗಳ ಸಭೆ, ವಿದ್ಯಾರ್ಥಿಗಳಿಗೆ ದುಶ್ಚಟದ ವಿರುದ್ಧ ಅರಿವು ಮೂಡಿಸುವ ನಿಟ್ಟಿನಲ್ಲಿ 271 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿದ್ದು, ಸುಮಾರು 41,142 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಸಮಾಜಕ್ಕೆ ಅರಿವು
ಮಹಾತ್ಮ ಗಾಂಧೀಜಿಯವರ 18 ರಚನಾತ್ಮಕ ಅಂಶಗಳಲ್ಲಿ ಪಾನ ನಿಷೇಧವೂ ಒಂದಾಗಿದ್ದು, ಮದ್ಯಮುಕ್ತ ಭಾರತದ ಕನಸನ್ನು ಜನರಿಗೆ ನೆನಪು ಮಾಡಿಕೊಡುವ ಉದ್ದೇಶದಿಂದ ಅ. 2 ಗಾಂಧಿ ಜಯಂತಿಯಂದು ಜನಜಾಗೃತಿ ವೇದಿಕೆ ಸಮಾವೇಶಗಳನ್ನು ಸಂಘಟಿಸುತ್ತಿದೆ. ಸಮಾವೇಶದ ಮೂಲಕ ಮದ್ಯಪಾನ ದುರಂತಗಳ ಅರಿವು ಮೂಡಿಸುವ, ಮದ್ಯಮುಕ್ತರಿಗೆ ಅಭಿನಂದನೆ ಸಲ್ಲಿಸುವ, ಸಮಾಜದ ಗಣ್ಯರನ್ನು ಚಳವಳಿಯತ್ತ ಸೆಳೆಯುವ ದೃಷ್ಟಿಕೋನವನ್ನು ಹೊಂದಲಾಗಿದೆ.

ಜನಜಾಗೃತಿ ಸಮಾವೇಶ, ಅಭಿನಂದನೆ
ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ, ಅಖಿಲ  ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಅ. 3ರಂದು ಪುತ್ತೂರು ಪುರಭವನದಲ್ಲಿ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನ ಸಮಾರಂಭ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ.ಶೆಟ್ಟಿ ಉದ್ಘಾಟಿಸಲಿದ್ದಾರೆ. ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಭೆಗೆ ಮೊದಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಜಾಗೃತಿ ಜಾಥಾ ನಡೆಯಲಿದೆ.

ಖುಶಿಯ ವಿಚಾರ
ಧರ್ಮಸ್ಥಳ ಧರ್ಮಾಧಿಕಾರಿಗಳ ಪ್ರೇರಣೆಯಿಂದ ಕಾರ್ಯ ನಿರ್ವಹಿಸುತ್ತಿರುವ ಜನಜಾಗೃತಿ ವೇದಿಕೆಯ ಮೂಲಕ ಸಾವಿರಾರು ಮಂದಿ ಮದ್ಯ ವ್ಯಸನಮುಕ್ತರಾದ ಸಂತೃಪ್ತಿ ನಮಗಿದೆ. ಡಾ| ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಪುತ್ತೂರಿನಲ್ಲಿ ಸಮಾವೇಶ ನಡೆಯುತ್ತಿರುವುದು ನಮಗೆಲ್ಲ ಖುಶಿಯ ವಿಚಾರ. ಎಲ್ಲ ಸಿದ್ಧತೆಗಳನ್ನು ಮಾಡಿ ಕೊಂಡಿದ್ದೇವೆ.
ಪದ್ಮನಾಭ ಶೆಟ್ಟಿ, ಅಧ್ಯಕ್ಷರು,
ಜನಜಾಗೃತಿ ವೇದಿಕೆ ಪುತ್ತೂರು

ಟಾಪ್ ನ್ಯೂಸ್

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

11-bantwala

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ

3

Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ

2

Puttur:ಇಲ್ಲಿ ವೇಷಗಳಿಗೆ ಪ್ರವೇಶವಿಲ್ಲ;ನೇಮದ ದಿನ ವ್ಯಾಪಾರವಿಲ್ಲ, ಎಲ್ಲವೂ ಉಚಿತವಾಗಿ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.