ಪುತ್ತೂರು: ನೀರು ಪೂರೈಕೆ ಉನ್ನತೀಕರಿಸಿದ ವ್ಯವಸ್ಥೆ 


Team Udayavani, Mar 2, 2019, 5:39 AM IST

2-march-4.jpg

ನಗರ : ಬೆಳೆಯುತ್ತಿರುವ ಪುತ್ತೂರು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಸಮರ್ಪಕಗೊಳಿಸುವ ಹೊಸ ಯೋಜನೆಯ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಗಿದೆ.

ಹಿಂದಿನ ಸರಕಾರದ ಅವಧಿಯಲ್ಲಿ ಎಡಿಬಿ ಯೋಜನೆಯಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜು ಕಾಮಗಾರಿಗೆ 71.41 ಕೋಟಿ ರೂ. ಗುತ್ತಿಗೆ ಮೊತ್ತ ಅನುಮೋದನೆಗೊಂಡಿದ್ದು, ನಗರಸಭೆ ಮತ್ತು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆ.ಯು.ಐ.ಡಿ.ಎಫ್‌.ಸಿ.) ಸಹಯೋಗದಲ್ಲಿ ನಡೆಯುವ ಈ ಕಾಮಗಾರಿಯನ್ನು 33 ತಿಂಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಅನಂತರ 3 ತಿಂಗಳು ಪ್ರಾಯೋಗಿಕ ಸರಬರಾಜು ನಡೆಯಲಿದೆ. ಮುಂದಿನ 3 ವರ್ಷಗಳಲ್ಲಿ 24×7 ನಿರಂತರ ನೀರು ಸರಬರಾಜಿನ ಉನ್ನತೀಕರಿಸಿದ ವ್ಯವಸ್ಥೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಸಾಕಷ್ಟು ಮುನ್ನೆಚ್ಚರಿಕೆ ಕ್ರಮ
ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕುಮಾರಧಾರಾ ನದಿಗೆ ಒಡ್ಡು ನಿರ್ಮಿಸಿ ಅದರಲ್ಲಿ ಸಂಗ್ರಹಗೊಂಡ ನೀರನ್ನು ಪೈಪ್‌ ಗಳ ಮೂಲಕ ಪುತ್ತೂರಿಗೆ ಮೂರು ದಶಕಗಳ ಕಾಲ ರವಾನಿಸಲಾಗುತ್ತಿತ್ತು. ಅನಂತರ 10 ವರ್ಷಗಳ ಹಿಂದೆ ಅನುಷ್ಠಾನಗೊಂಡ 38 ಕೋಟಿ ರೂ. ಮೊತ್ತದ ಎಡಿಬಿ ಕುಡಿಯುವ ನೀರು ಯೋಜನೆಯಲ್ಲಿ ಹಳೆಯ ಪೈಪ್‌ಲೈನ್‌ ಜತೆಗೆ ಹೊಸ ಪೈಪ್‌ಲೈನ್‌ ಅಳವಡಿಕೆ, ಹೊಸದಾಗಿ ಒವರ್‌ಹೆಡ್‌ ಟ್ಯಾಂಕ್‌ಗಳು, ರೇಚಕಸ್ಥಾವರ ನಿರ್ಮಾಣ ಇತ್ಯಾದಿ ಕಾಮಗಾರಿ ಜಾರಿಗೆ ಬಂದಿತ್ತಾದರೂ ಹಲವು ಹುಳುಕುಗಳು ಕಂಡುಬಂದ ಜತೆಗೆ ನಗರದ ಕೇವಲ ಶೇ. 60 ಪ್ರದೇಶಕ್ಕೆ ಮಾತ್ರ ನೀರು ಪೂರೈಕೆ ನಡೆದಿತ್ತು. ಈ ಕಾರಣದಿಂದ ಹೊಸ ಯೋಜನೆಯನ್ನು ಅಳವಡಿಸುವ ಸಂದರ್ಭ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಅನುಸರಿಸಲಾಗಿದೆ. ಹಲವು ಸುತ್ತಿನ ಸಭೆಗಳ ಮೂಲಕ ಚರ್ಚಿಸಲಾಗಿದೆ. ಸಾರ್ವಜನಿಕ ಅಭಿಪ್ರಾಯವನ್ನೂ ಪರಿಗಣಿಸಲಾಗಿದೆ. ಎಸ್‌ಪಿಪಿಎಲ್‌ -ಎಸ್‌ ಪಿಐಪಿಎಲ್‌-ಡಿಆರ್‌ಎಸ್‌ ಇನ್‌ಫ್ರಾಟೆಕ್‌ ಪೈ.ಲಿ. ಸಂಸ್ಥೆಯು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ.

ಪ್ರಸ್ತಾವಿತ ಘಟಕಗಳು
 ಮುರ, ಶಾಂತಿನಗರ, ಪಟ್ನೂರು -ಮೇಲ್ಮಟ್ಟದ ಜಲಸಂಗ್ರಹಗಾರ (3 ಲಕ್ಷ ಲೀ. ಸಾಮರ್ಥ್ಯ).
 ಮೈಕ್ರೋವೇವ್‌ ಸ್ಟೇಷನ್‌ ಮಂಜಲ್ಪಡು³ – ಮೇಲ್ಮಟ್ಟದ ಜಲಸಂಗ್ರಹಗಾರ (1 ಲಕ್ಷ ಲೀ.
ಸಾಮರ್ಥ್ಯ).
 ಸಿಟಿಗುಡ್ಡೆ – ನೆಲಮಟ್ಟದ ಜಲಸಂಗ್ರಹಗಾರ (10 ಲಕ್ಷ ಲೀ. ಸಾಮರ್ಥ್ಯ).
 ಸಿಟಿಒ, ದರ್ಬೆ – ಮೇಲ್ಮಟ್ಟದ ಜಲಸಂಗ್ರಹಗಾರ (6 ಲಕ್ಷ ಲೀ. ಸಾಮರ್ಥ್ಯ).
 ಲಿಂಗದಗುಡ್ಡ – ಮೇಲ್ಮಟ್ಟದ ಜಲಸಂಗ್ರಹಗಾರ (2.5 ಲಕ್ಷ ಲೀ. ಸಾಮರ್ಥ್ಯ).
 ಬಲ್ನಾಡ್‌ ಹೆಲಿಪ್ಯಾಡ್‌ – ಮೇಲ್ಮಟ್ಟದ ಜಲಸಂಗ್ರಹಗಾರ (2 ಲಕ್ಷ ಲೀ. ಸಾಮರ್ಥ್ಯ).
 ಬಲ್ನಾಡ್‌ ಕೆಲ್ಯಾಡಿ – ಮೇಲ್ಮಟ್ಟದ ಜಲಸಂಗ್ರಹಗಾರ (1 ಲಕ್ಷ ಲೀ. ಸಾಮರ್ಥ್ಯ).
 ಕೆಎಚ್‌ಬಿ ಸೈಟ್‌, ತೆಂಕಿಲ – ಮೇಲ್ಮಟ್ಟದ ಜಲಸಂಗ್ರಹಗಾರ (20 ಲಕ್ಷ ಲೀ. ಸಾಮರ್ಥ್ಯ).
 ನೆಕ್ಕಿಲಾಡಿ – ನೀರು ಶುದ್ಧೀಕರಣ ಘಟಕ (8.7 ಎಂಎಲ್‌ಡಿ).
 ನೆಕ್ಕಿಲಾಡಿ – ಮರು ನೀರು ಶುದ್ಧೀಕರಣ ಘಟಕ (15 ಎಂಎಲ್‌ಡಿ).

ಕಾಮಗಾರಿಗಳು ಹೀಗಿವೆ 
 1.68 ಕಿ.ಮೀ. ಉದ್ದದ 400 ಮಿ.ಮೀ. ವ್ಯಾಸದ ಕಚ್ಚಾ ನೀರು ಏರು ಕೊಳವೆಯು ಜ್ಯಾಕ್‌
ವೆಲ್‌ನಿಂದ ನೀರು ಶುದ್ಧೀಕರಣ ಘಟಕದವರೆಗೆ ವಿಸ್ತರಣೆಗೊಳ್ಳಲಿದೆ.
 ನೆಕ್ಕಿಲಾಡಿಯಲ್ಲಿ 8.7 ಎಂ.ಎಲ್‌.ಡಿ. ನೀರು ಶುದ್ಧೀಕರಣ ಘಟಕ ನಿರ್ಮಾಣಗೊಳ್ಳಲಿದೆ.
 12.42 ಕಿ.ಮೀ. ಉದ್ದ 400 ಮಿ.ಮೀ. ವ್ಯಾಸದ ಶುದ್ಧ ನೀರು ಏರು ಕೊಳವೆ ಮಾರ್ಗ- ನೀರು
ಶುದ್ಧೀಕರಣ ಘಟಕದಿಂದ ತೆಂಕಿಲದ 20 ಲಕ್ಷ ಲೀ. ನೆಲಮಟ್ಟದ ಸಂಗ್ರಹದವರೆಗೆ.
 6 ಮೇಲ್ಮಟ್ಟದ ಜಲಸಂಗ್ರಹಗಾರ ಮತ್ತು 2 ನೆಲಮಟ್ಟದ ಜಲಸಂಗ್ರಹಗಾರ
ನಿರ್ಮಾಣಗೊಳ್ಳಲಿದೆ.
 132. 62 ಕಿ.ಮೀ ಉದ್ದದ ವಿತರಣ ಕೊಳವೆ ಜಾಲ ನಿರ್ಮಾಣ. 
 29 ಬಲ್ಕ್ ವಾಟರ್‌ ಮೀಟರ್‌.
 4,500 ಹೊಸ ಮನೆ ಸಂಪರ್ಕಗಳು ಮತ್ತು ಹಾಲಿ ಇರುವ 9,226 ಹಳೆಯ ಮಾಪಕಗಳ ಬದಲಾವಣೆ.
 ಜ್ಯಾಕ್‌ ವೆಲ್‌ (ನೆಕ್ಕಿಲಾಡಿ), ನೀರು ಶುದ್ಧೀಕರಣ ಘಟಕ (ನೆಕ್ಕಿಲಾಡಿ), ಮಧ್ಯಂತರ ರೇಚಕ ಸ್ವಾವರ
(ಸಿಟಿಗುಡ್ಡ) ಗಳಲ್ಲಿ ಡೀಸೆಲ್‌ ಜನರೇಟರ್‌ ಅಳವಡಿಕೆ. 
 ಹಾಲಿ ಇರುವ ಜ್ಯಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕದಲ್ಲಿ ಅಗತ್ಯವಿರುವ ಮೆಕ್ಯಾನಿಕಲ್‌ ಹಾಗೂ ವಿದ್ಯುತ್‌ ಉಪಕರಣಗಳ
ಬದಲಾವಣೆ.

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

5

Mukka: ಈಜಾಡುತ್ತಿದ್ದ ಯುವಕ ಸಮುದ್ರಪಾಲು

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

accident

Udupi: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆಗೆ ಗಾಯ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.