Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ


Team Udayavani, Sep 25, 2024, 1:02 AM IST

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

ಮಂಗಳೂರು: ನೈಋತ್ಯ ಮುಂಗಾರು ಕರಾವಳಿಯಲ್ಲಿ ಮತ್ತೆ ಚುರುಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿಟ್ಟ ಬಿಟ್ಟು ಉತ್ತಮ ಮಳೆಯಾಗಿದೆ.

ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ ದಿನವಿಡೀ ಮಳೆ ವಾತಾವರಣ ಕಂಡು ಬಂದಿತ್ತು. ಜಿಲ್ಲೆಯ ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕುಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಬೆಳಗ್ಗೆಉತ್ತಮ ಮಳೆಯಾಗಿದ್ದು, ಬಳಿಕ ಆಗಾಗ್ಗೆ ಮಳೆಯಾಗಿದೆ. ಸಂಜೆ ವೇಳೆ ಮತ್ತೆ ಮಳೆ ಬಿರುಸಾಗಿದೆ.

ಭಾರತೀಯ ಹವಾಮಾನ ಇಲಾಖೆ ಬುಧವಾರ ಕರಾವಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸದ್ಯ ಗುರುವಾರದಿಂದ ಯಾವುದೇ ಅಲರ್ಟ್‌ ಇಲ್ಲ. ಕರ್ನಾಟಕ ಕರಾವಳಿಯ ಸಮುದ್ರ ತೀರ ಪ್ರದೇಶದಲ್ಲಿ ಗಂಟೆಗೆ 35-45 ಕಿ.ಮೀ. ನಿಂದ ಗರಿಷ್ಠ 55 ಕಿ.ಮೀ. ವೇಗದ ವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮಂಗಳವಾರ ಬೆಳಗ್ಗೆ 8.30ರಿಂದ ಸಂಜೆ ವರೆಗಿನ ಅಂಕಿ ಅಂಶದ ಪ್ರಕಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ 28.4 ಮಿ.ಮೀ. ಪಣಂಬೂರಿನಲ್ಲಿ 26 ಮಿ.ಮೀ, ಮಂಗಳೂರಿನಲ್ಲಿ 11 ಮಿ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 26.8 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಂಟ್ವಾಳ: ಉತ್ತಮ ಮಳೆ
ಬಂಟ್ವಾಳ: ತಾಲೂಕಿನಾದ್ಯಂತ ಸೋಮವಾರ ಸಂಜೆಯಿಂದ ಆರಂಭಗೊಂಡ ಮಳೆ ಮಂಗಳವಾರವೂ ಮುಂದುವರಿದಿತ್ತು. ಇದರಿಂದಾಗಿ ಶಾಲೆಗೆ ತೆರಳುವ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಯಿತು. ದಿನವಿಡೀ ಮಳೆ ಸುರಿದಿದ್ದು, ಇದು ಜನಜೀವನದ ಮೇಲೂ ಹೊಡೆದ ನೀಡಿದೆ. ಜೋರು ಮಳೆಯಿಂದ ಕೃಷಿ ಚಟುವಟಿಕೆಯ ಮೇಲೂ ಹೊಡೆದ ನೀಡಿದೆ.

ನಿರಂತರ ಮಳೆಯ ಪರಿಣಾಮ ನದಿಯಲ್ಲಿ ನೀರಿನ ಮಟ್ಟ ಕೂಡ ಹೆಚ್ಚಾಗಿದ್ದು, ಶಂಭೂರು ಎಎಂಆರ್‌ ಡ್ಯಾಮ್‌ನಿಂದ ನೀರು ಹೊರ ಬಿಟ್ಟ ಕಾರಣದಿಂದ ಬಂಟ್ವಾಳ, ಪಾಣೆಮಂಗಳೂರು ಭಾಗದಲ್ಲಿ ನದಿಯ ನೀರಿನ ಹರಿವು ಹೆಚ್ಚಾಗಿತ್ತು.

ಮನೆಯ ಆವರಣ ಗೋಡೆ ಕುಸಿತ
ಉಳ್ಳಾಲ: ಸೋಮವಾರ ರಾತ್ರಿ ಸುರಿದ ಮಳೆಗೆ ಉಳ್ಳಾಲದ ಟಿ.ಸಿ. ರೋಡ್‌ ಬಳಿ ಮನೆಯ ಆವರಣ ಗೋಡೆ ಕುಸಿದು ಮನೆಯೊಂದು ಕುಸಿಯುವ ಭೀತಿಯಲ್ಲಿದೆ. ಮುಂಜಾಗೃತ ಕ್ರಮವಾಗಿ ಮನೆಯ ಕುಟುಂಬದ ಸದಸ್ಯರು ಸ್ಥಳಾಂತರಗೊಂಡಿದ್ದಾರೆ. ಉಳ್ಳಾಲದಾದ್ಯಂತ ಸೋಮವಾರ ತಡರಾತ್ರಿ ಭಾರೀ ಮಳೆ ಸುರಿದಿದ್ದು ಸುಮಾರು ಎರಡು ಗಂಟೆಯ ವೇಳೆಗೆ ಮನೆಯ ಆವರಣ ಗೋಡೆ ಕುಸಿದಿದೆ. ಸ್ಥಳಕ್ಕೆ ಉಳ್ಳಾಲ ನಗರಸಭಾ ಪೌರಾಯುಕ್ತ ಮತ್ತಡಿ, ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಉಡುಪಿ: ಮತ್ತೆ ಮಳೆ ಬಿರುಸು
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಮತ್ತೆ ಬಿರುಸುಗೊಂಡಿದ್ದು, ಮಂಗಳವಾರ ಹಲವೆಡೆ ಉತ್ತಮ ಮಳೆಯಾಗಿದೆ. ಕಾರ್ಕಳ, ಉಡುಪಿ, ಹೆಬ್ರಿ, ಕುಂದಾಪುರ, ಬೈಂದೂರು, ಬ್ರಹ್ಮಾವರ ಭಾಗದಲ್ಲಿ ಹಲವೆಡೆ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಸೋಮವಾರ ತಡರಾತ್ರಿ, ಮಂಗಳವಾರ ಮುಂಜಾನೆ ಕೆಲಕಾಲ ಉತ್ತಮ ಮಳೆಯಾಗಿದೆ.

ಹೆಬ್ರಿ ಸುತ್ತಮುತ್ತ ಭಾರೀ ಮಳೆ
ಹೆಬ್ರಿ: ಕಳೆದ ಎರಡು ದಿನಗಳಿಂದ ಹೆಬ್ರಿ ಸುತ್ತ ಮುತ್ತ ಭಾರೀ ಮಳೆ ಸುರಿದಿದ್ದು ಜನರು ಸಮಸ್ಯೆಗೆ ಸಿಲುಕಿದರು. ಹೆದ್ದಾರಿ ಕಾಮಗಾರಿ ಸಹಿತ ಕೆಲವಡೆ ಮಳೆ ನೀರು ರಸ್ತೆಯಲ್ಲಿ ಹರಿದ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು.

ಮೆಸ್ಕಾಂ ವಿರುದ್ಧ ಆಕ್ರೋಶ
ಭಾರೀ ಮಳೆಯಿಂದ ಹೆಬ್ರಿ ಸುತ್ತ ಮುತ್ತ ಸೆ. 24ರಂದು ಬೆಳಗ್ಗೆಯಿಂದ ವಿದ್ಯುತ್‌ ಇಲ್ಲದೆ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು ಜನರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಕಾರಣ ವಿದ್ಯುತ್‌ ಇಲ್ಲದೇ ಓದಲು ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.