ಕರಾವಳಿಯ ಹಲವೆಡೆ ಭಾರೀ ಮಳೆ, ಉಡುಪಿಯಲ್ಲಿ ಸಾಧಾರಣ ಮಳೆ
Team Udayavani, Aug 23, 2022, 8:55 AM IST
ಮಂಗಳೂರು/ಉಡುಪಿ : ಕರಾವಳಿಯಲ್ಲಿ ಮುಂಗಾರು ತುಸು ಕ್ಷೀಣಗೊಂಡಿದ್ದರೂ ಉಭಯ ಜಿಲ್ಲೆಗಳ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ.
ದ.ಕ. ಜಿಲ್ಲೆಯ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಮುಂಜಾನೆ ದಿಢೀರ್ ಆಗಿ ಕೆಲವು ನಿಮಿಷ ಕಾಲ ಉತ್ತಮ ಮಳೆಯಾಗಿದೆ.
ಸಂಜೆ, ರಾತ್ರಿಯ ವೇಳೆಗೆ ಸುಳ್ಯ, ಬಂಟ್ವಾಳ, ಪುತ್ತೂರು ತಾಲೂಕುಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಬಂಟಮಲೆ ಭಾಗದ ಪಂಜ, ಪಂಬೆತ್ತಾಡಿ ಭಾಗದಲ್ಲಿ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದು, ಕೆಲವೆಡೆ ಗುಡ್ಡ ಜರಿತ ಸಂಭವಿಸಿದೆ. ಉಳಿದಂತೆ ವಿಟ್ಲ, ಕಬಕ ಭಾಗದಲ್ಲಿಯೂ ರಾತ್ರಿ ಒಳ್ಳೆಯ ಮಳೆಯಾಗಿದೆ.
ಉಡುಪಿ: ಬಿಟ್ಟು ಬಿಟ್ಟು ಮಳೆ
ಉಡುಪಿ : ಜಿಲ್ಲೆಯಲ್ಲಿ ರವಿವಾರ ತಡರಾತ್ರಿ ಸೋಮವಾರ ಹಗಲಿಡೀ ಬಿಟ್ಟುಬಿಟ್ಟು ಮಳೆಯಾಗಿದೆ. ಬೈಂದೂರು, ಕಾರ್ಕಳ ಭಾಗದಲ್ಲಿ ಹೆಚ್ಚು ಮಳೆ ಸುರಿದಿದ್ದು, ಉಡುಪಿ, ಮಣಿಪಾಲ, ಮಲ್ಪೆ ಭಾಗದಲ್ಲಿ ಮೋಡ, ಬಿಸಿಲ ವಾತಾವರಣದ ನಡುವೆ ಸಾಧರಣ ಮಳೆಯಾಗಿದೆ.
ಉಡುಪಿ 8.2, ಬ್ರಹ್ಮಾವರ 15.5, ಕಾಪು 15.2, ಕುಂದಾಪುರ 34.2, ಬೈಂದೂರು 48.4, ಕಾರ್ಕಳ 31.4, ಹೆಬ್ರಿ 64.8 ಮಿ .ಮೀ. ಮಳೆಯಾಗಿದೆ. ಆ. 24ರಂದು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದ್ದು ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.