Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ರೆಡ್ ಅಲರ್ಟ್’
Team Udayavani, Jun 10, 2024, 6:45 AM IST
ಮಂಗಳೂರು/ ಉಡುಪಿ: ಕರಾವಳಿಯಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ಕೆಲವೆಡೆ ಸಣ್ಣ ಪುಟ್ಟ ಹಾನಿ ಸಂಭವಿಸಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಬಳಿಕ ಉತ್ತಮ ಮಳೆ ಸುರಿದಿದೆ. ದ.ಕ. ಜಿಲ್ಲೆಯಲ್ಲಿ ಶನಿವಾರಕ್ಕೆ ಹೋಲಿಸಿದರೆ ಮಳೆಯ ತೀವ್ರತೆ ತುಸು ಕಡಿಮೆ ಇತ್ತು. ಗಾಳಿಗೆ ನಗರದ ಕದ್ರಿ ಬಳಿ ವಾಹನಕ್ಕೆ ಮರ ಬಿದ್ದಿದೆ.
ದ.ಕ. ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜೂ. 10 ರಂದು “ರೆಡ್ ಅಲರ್ಟ್’ ಘೊಷಿಸಲಾಗಿದೆ.
ಈ ವೇಳೆ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಜೂ. 11ರಂದು “ಆರೆಂಜ್ ಅಲರ್ಟ್’ ಮತ್ತು ಜೂ. 12, 13ರಂದು “ಎಲ್ಲೋ ಅಲರ್ಟ್’ ಘೊಷಿಸಲಾಗಿದೆ.
ಉಡುಪಿಯಲ್ಲಿ 17 ಮನೆಗಳಿಗೆ ಹಾನಿ
ಉಡುಪಿ ಜಿಲ್ಲೆಯಲ್ಲಿ ರವಿವಾರ ಹಲವೆಡೆ ಉತ್ತಮ ಮಳೆಯಾಗಿದೆ. ಬೈಂದೂರು, ಕುಂದಾಪುರ ಹೆಚ್ಚು ಮಳೆಯಾಗಿದ್ದು, ಶನಿವಾರ ತಡರಾತ್ರಿ, ರವಿವಾರ ಬಿಟ್ಟುಬಿಟ್ಟು ನಿರಂತರ ಮಳೆ ಸುರಿದಿದ್ದು, ಉಡುಪಿ, ಮಣಿಪಾಲ, ಮಲ್ಪೆ ಪರಿಸರದಲ್ಲಿ ಮಧ್ಯಾಹ್ನ ಅನಂತರ ಕೆಲಕಾಲ ಮಳೆ ಸುರಿದಿದೆ.
ಶನಿವಾರ ತಡರಾತ್ರಿ ಸುರಿದ ಗಾಳಿಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ಜಿಲ್ಲೆಯ ಗುಜ್ಜಾಡಿ, ಶಂಕರನಾರಾಯಣ, ಹೊಸಂಗಡಿ,ಕನ್ಯಾನ, ತೆಕ್ಕಟ್ಟೆ, ಗಂಗೊಳ್ಳಿ, ಕಳತ್ತೂರು, ಮೂಡಬೆಟ್ಟು, ಹೆಜಮಾಡಿ, ಬಿಜೂರು, ಉಪ್ಪುಂದ, ಉಳ್ಳೂರು, ಅಂಬಲಪಾಡಿಯಲ್ಲಿ 17 ಮನೆಗಳಿಗೆ ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.