![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 23, 2024, 8:37 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಮುಂಜಾನೆ ವೇಳೆ ಅಲ್ಲಲ್ಲಿ ಮಳೆ ಸುರಿದಿದ್ದು, ಬಳಿಕ ಮೋಡ ಕವಿದ ಬಿಸಿಲಿನ ವಾತಾವರಣವಿತ್ತು. ಸಂಜೆಯಾಗುತ್ತಲೇ ದಟ್ಟ ಮೋಡ ಕವಿದು ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಧ್ಯಾಹ್ನ ಬಳಿಕ ಸಾಧಾರಣ ಮಳೆಯಾಗಿದೆ. ಪುತ್ತೂರು, ಬೆಳ್ಳಾರೆ ಭಾಗದಲ್ಲಿ ಬಿರುಸಿನ ಮಳೆಯಾಗಿದೆ. ಬಂಟ್ವಾಳದಲ್ಲಿ ರಾತ್ರಿ ಮಳೆ ಆರಂಭವಾಗಿದೆ. ಮಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ಹಗಲು ವೇಳೆಯಲ್ಲಿ ಒಂದರೆಡು ಬಾರಿ ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆ ಮಳೆ ಪ್ರಮಾಣ ತುಸು ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಮಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ.
ರೆಡ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಸದ್ಯ ಬುಧವಾರಕ್ಕೆ ಎಲ್ಲೊ ಅಲರ್ಟ್ ನೀಡಲಾಗಿದೆ.
ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 29.1. ಡಿ.ಸೆ. ಮತ್ತು ಕನಿಷ್ಠ ತಾಪಮಾನ 23.4 ಡಿ.ಸೆ. ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.