Coastal ಮಳೆ: ಕಳೆದ ವರ್ಷ ಇಳಿಕೆ,ಈ ವರ್ಷ ಏರಿಕೆ

ಕರಾವಳಿಯಲ್ಲಿ ಇದುವರೆಗೆ ವಾಡಿಕೆಗಿಂತ ಶೇ. 30ರಷ್ಟು ಮಳೆ ಹೆಚ್ಚಳ

Team Udayavani, Aug 12, 2024, 6:55 AM IST

Coastal ಮಳೆ: ಕಳೆದ ವರ್ಷ ಇಳಿಕೆ,ಈ ವರ್ಷ ಏರಿಕೆ

ಮಂಗಳೂರು: ಮುಂಗಾರು ಅವಧಿ ಮುಗಿಯಲು ಇನ್ನೂ ಒಂದೂವರೆ ತಿಂಗಳು ಬಾಕಿ ಇರುವಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆ ವಾಡಿಕೆಯ ಗುರಿ ಸನಿಹಕ್ಕೆ ತಲುಪುತ್ತಿದೆ.

ಕರಾವಳಿಯಲ್ಲಿ ಜೂನ್‌ ತಿಂಗಳಿನಿಂದ ಸೆಪ್ಟಂಬರ್‌ ಅಂತ್ಯದ ವರೆಗೆ ಮುಂಗಾರು ಋತುವಿನಲ್ಲಿ 3,101 ಮಿ.ಮೀ. ಮಳೆಯಾಗಬೇಕು. ಆದರೆ ಆಗಸ್ಟ್‌ 9 ಆಗುವಷ್ಟರಲ್ಲೇ 2,939 ಮಿ.ಮೀ. ಮಳೆ ಸುರಿದಿದೆ. ಮುಂಗಾರು ಪೂರ್ಣಗೊಳ್ಳಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಸದ್ಯ ದ.ಕ. ಜಿಲ್ಲೆಯಲ್ಲಿ ಶೇ.17, ಉಡುಪಿಯಲ್ಲಿ ಶೇ.20 ಮತ್ತು ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಶೇ.42ರಷ್ಟು ಹೆಚ್ಚು ಮಳೆ ಸುರಿದಿದೆ. ಒಟ್ಟಾರೆ ಕರಾವಳಿ ಭಾಗದಲ್ಲಿ ಈ ವರೆಗೆ 2,268 ಮಿ.ಮೀ. ವಾಡಿಕೆ ಮಳೆಯಲ್ಲಿ 2939 ಮಿ.ಮೀ. ಮಳೆಯಾಗಿ ಶೇ.30ರಷ್ಟು ಅಧಿಕ ಸುರಿದಿದೆ.

ಕೇರಳ ಕರಾವಳಿ ತೀರಕ್ಕೆ ಮೇ 30ರಂದು ಪ್ರವೇಶಿಸಿದ ಮುಂಗಾರು ಜೂ.2ರಂದು ರಾಜ್ಯದ ಕರಾವಳಿ ಭಾಗಕ್ಕೆ ಅಪ್ಪಳಿಸಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜೂನ್‌ ಮಧ್ಯಭಾಗದವರೆಗೆ ಮಳೆಗಾಲದ ಯಾವುದೇ ಲಕ್ಷಣ ಕಾಣಿಸಿರಲಿಲ್ಲ. ಸಾಮಾನ್ಯವಾಗಿ ಮುಂಗಾರು ಆಗಮನದ ವೇಳೆ ಕೆಲವು ದಿನ ಮೋಡದ ವಾತಾವರಣ, ಗಾಳಿ ಸಹಿತ ಬಿರುಸಿನ ಮಳೆಯಾಗುತ್ತದೆ. ಆದರೆ ಎರಡರಿಂದ ಮೂರು ವಾರಗಳ ಕಾಲ ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ. ಜುಲೈಯಿಂದೀಚಿಗೆ ಕರಾವಳಿಯಲ್ಲಿ ಭಾರೀ ವರ್ಷಧಾರೆಯಾಗಿ ವಾಡಿಕೆಗಿಂತ ಶೇಕಡಾವಾರು ಹೆಚ್ಚಾಗಿದೆ.

ಯಾವ ತಾಲೂಕಿನಲ್ಲಿ ಎಷ್ಟು ಮಳೆ?
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ವಾಡಿಕೆಗಿಂತ ಶೇ.16ರಷ್ಟು ಹೆಚ್ಚಳ, ಬಂಟ್ವಾಳ-ಶೇ.10, ಮಂಗಳೂರು-ಶೇ.14, ಪುತ್ತೂರು-ಶೇ.2, ಸುಳ್ಯ-ಶೇ.25, ಮೂಡುಬಿದಿರೆ-ಶೇ.26, ಕಡಬ-ಶೇ.14, ಮೂಲ್ಕಿ-ಶೇ.14, ಉಳ್ಳಾಲ-ಶೇ.4, ಉಡುಪಿ ಜಿಲ್ಲೆಯ ಕಾರ್ಕಳ-ಶೇ.14, ಕುಂದಾಪುರ-ಶೇ.57, ಉಡುಪಿ-ಶೇ.19, ಬೈಂದೂರು-ಶೇ.26, ಬ್ರಹ್ಮಾವರ-ಶೇ.29 ಮತ್ತು ಹೆಬ್ರಿಯಲ್ಲಿ ಶೇ.17ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ.

ಕಳೆದ ವರ್ಷ ಕಡಿಮೆ, ಈ ವರ್ಷ ಅಧಿಕ
ಕಳೆದ ವರ್ಷ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ಇತ್ತು. ಒಟ್ಟಾರೆ ಋತುವಿನಲ್ಲಿ ಕರಾವಳಿಯಲ್ಲಿ ಶೇ.19ರಷ್ಟು ಮಳೆ ಕೊರತೆ ಉಂಟಾಗಿತ್ತು. 2023ರಲ್ಲಿ ಆ.9ರ ವರೆಗೆ ಶೇ.15ರಷ್ಟು ಮಳೆ ಕಡಿಮೆ ಸುರಿದಿತ್ತು. ಆದರೆ ಈ ಬಾರಿ ಶೇ.30ರಷ್ಟು ಹೆಚ್ಚಾಗಿದೆ.

 

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.