ಕೋವಿಡ್ 19 ಜಾಗೃತಿ: ಮಂಗಳೂರು ರಾಮಕೃಷ್ಣ ಮಠದಿಂದ Contact-10 ಚಾಲೆಂಜ್ ; ನಾವೇನು ಮಾಡಬೇಕು?

ಅಭಿಯಾನವನ್ನು ಬೆಂಬಲಿಸಿ ಕೋವಿಡ್ ಜಾಗೃತಿ ಸಂದೇಶವನ್ನು ಜನಸಾಮಾನ್ಯರಲ್ಲಿ ಹರಡಲು ಕರೆ

Team Udayavani, Mar 30, 2020, 5:40 PM IST

ಕೋವಿಡ್ 19 ಜಾಗೃತಿ: ಮಂಗಳೂರು ರಾಮಕೃಷ್ಣ ಮಠದಿಂದ Contact-10 ಚಾಲೆಂಜ್ ; ನಾವೇನು ಮಾಡಬೇಕು?

ಮಂಗಳೂರು: ಕೋವಿಡ್ 19 ಮಾರಕ ವೈರಸ್ ದೇಶವ್ಯಾಪಿಯಾಗುತ್ತಿರುವ ಈ ಸಂದರ್ಭದಲ್ಲಿ ಇದರ ನಿಯಂತ್ರಣ ನಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಇದಕ್ಕಾಗಿಯೇ ಕೇಂದ್ರ ಸರಕಾರ 21 ದಿನಗಳ ಸಂಪೂರ್ಣ ಲಾಕ್ ಡೌನ್ ಸ್ಥಿತಿಯನ್ನು ಘೋಷಿಸಿದೆ. ಆದರೂ ಜನರ ಓಡಾಟ ಸಂಪೂರ್ಣವಾಗಿ ನಿಂತಿಲ್ಲ. ‘ಮನೆಯಲ್ಲಿಯೇ ಇರಿ’ ಎಂದು ಪ್ರಧಾನಿ ಕರೆ ಕೊಟ್ಟರೂ ಜನರು ಮನೆಗಳನ್ನು ಬಿಟ್ಟು ಹೊರಬರುವುದು ಸಂಪೂರ್ಣವಾಗಿ ನಿಂತಿಲ್ಲ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಕೈಗಳನ್ನು ಸರಿಯಾಗಿ ತೊಳೆದುಕೊಳ್ಳುವುದು, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಸೇರಿದಂತೆ ಕೆಲವೊಂದು ಸರಳ ನಿಯಮಗಳನ್ನು ನಾವು ಅಳವಡಿಸಿಕೊಂಡದ್ದೇ ಆದಲ್ಲಿ ಈ ಕೋವಿಡ್ 19 ವೈರಸ್ ಮಹಾಮಾರಿಯನ್ನು ಶೀಘ್ರವಾಗಿ ಹೊಡೆದೋಡಿಸಬಹುದು.

ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ರಾಮಕೃಷ್ಣ ಮಿಷನ್ ವಿನೂತನ ಅಭಿಯಾನ ಒಂದನ್ನು ಪ್ರಾರಂಭಿಸಿದೆ. ‘ಕಾಂಟ್ಯಾಕ್ಟ್ 10’ ಎಂಬ ಹೆಸರಿನ ಈ ಅಭಿಯಾನದಲ್ಲಿ ನಾವು ನಮಗೆ ಪರಿಚಯವಿರುವ 10 ಜನರಿಗೆ ಕರೆಮಾಡಿ ಅವರಿಗೆ ಈ ಕೆಳಗಿನ ನಾಲ್ಕು ಅಂಶಗಳ ಕುರಿತಾಗಿ ಮನವರಿಕೆ ಮಾಡಿಕೊಡುವುದು.

1) ಕಡ್ಡಾಯವಾಗಿ ತಮ್ಮ ಮನೆಯಲ್ಲಿಯೇ ಇರುವಂತೆ ತಿಳಿಸಿ

2)ಯಾವುದೇ ಕಾರಣಕ್ಕೂ ಎಷ್ಟೇ ಆತ್ಮಿಯರಾದವರನ್ನೂ ಮನೆಯೊಳಗೆ ಸೇರಿಸಬೇಡಿ ಎಂದು ಬೇಡಿಕೊಳ್ಳಿ

3) ಅಗತ್ಯವಸ್ತು ಗಳಾದ ದಿನಸಿ, ಕಾಯಿಪಲ್ಯ ಹಣ್ಣು , ಮೆಡಿಸಿನ್ ಇತ್ಯಾದಿಗಳನ್ನುಗಳನ್ನು ಹತ್ತು ದಿನಕ್ಕೊಮ್ಮೆ ತರಲು ತಿಳಿಸಿ.

4) ಅಕಸ್ಮಾತ್ ಹೊರಹೋಗಿ ಬಂದರೆ ತಂದಂತಹ ಸಾಮಾನುಗಳನ್ನು ಅಗತ್ಯಗನುಸಾರ ಶುಚಿಮಾಡಿ. ಮತ್ತು ಹೊರಹೋಗಿ ಬಂದ ತತಕ್ಷಣ ಮನೆಯಲ್ಲಿನ ಯಾವುದೇ ವಸ್ತು ಅಥವಾ ವ್ಯಕ್ತಿಯನ್ನು ಸ್ಪರ್ಶಿಸದೇ ನೇರವಾಗಿ ಸ್ನಾನದ ಕೋಣೆಗೆ ತೆರಳಿ ಸ್ನಾನಮಾಡುವಂತೆ ತಿಳಿಸಿ.

ಇಷ್ಟು ವಿಷಯಗಳನ್ನು ಅವರಿಗೆ ಮನವರಿಕೆ ಮಾಡಿಕೊಟ್ಟ ಬಳಿಕ ಈ ಅಂಶಗಳನ್ನು ಅವರು ಮತ್ತೆ ಹತ್ತು ಜನರಿಗೆ ಕರೆ ಮಾಡಿ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳಬೇಕು. ಇದೇ ರೀತಿ ನಾವು ಪ್ರತೀ ದಿನ ಹತ್ತು ಜನರಿಗೆ ಕರೆ ಮಾಡಿ ಈ ಜಾಗೃತಿ ಸಂದೇಶಗಳನ್ನು ಹರಡುವುದೇ ಈ ‘ಕಾಂಟ್ಯಾಕ್ಟ್ 10’ ಪಂಥಾಹ್ವಾನದ (ಚಾಲೆಂಜ್) ಉದ್ದೇಶ.

ಈ ಸವಾಲನ್ನು ಸ್ವೀಕರಿಸಿದವರು ತಾವು ಕರೆ ಮಾಡಿದ ಹತ್ತ ಜನರ ಹೆಸರನ್ನು (ಗಮನಿಸಿ, ಅವರ ಮೊಬೈಲ್ ಸಂಖ್ಯೆಯನ್ನು ಅಲ್ಲ) 93530  29103 ಈ ಸಂಖ್ಯೆಗೆ ವಾಟ್ಸ್ಯಾಪ್ ಮಾಡುವಂತೆ ಮತ್ತು ಈ ಮೂಲಕ ರಾಮಕೃಷ್ಣ ಮಠಕ್ಕೆ ‘ಕರೆ ದೇಣಿಗೆ’ಯನ್ನು ಸಲ್ಲಿಸುವಂತೆ ಸ್ವಾಮೀಜಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಮೊಬೈಲ್ ಸಂಖ್ಯೆಯನ್ನು ಖುದ್ದು ಸ್ವಾಮಿ ಏಕಗಮ್ಯಾನಂದ ಅವರೇ ನೋಡಿಕೊಳ್ಳುತ್ತಿರುವುದಾಗಿ ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಅವರು ತಿಳಿಸಿದ್ದಾರೆ.

ಹಾಗಾದರೆ ಇನ್ನೇಕೆ ತಡ, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಕುಳಿತು ಏನನ್ನು ಮಾಡುವುದು ಎಂದು ಯೋಚಿಸುತ್ತಿರುವವರು ಈಗಲೇ ತಮ್ಮ ಆತ್ಮೀಯ ಹತ್ತು ಜನರಿಗೆ ಕರೆ ಮಾಡಿ ಈ ಜಾಗೃತಿ ಸಂದೇಶವನ್ನು ಅವರಿಗೆಲ್ಲಾ ತಿಳಿಸೋಣ ಹಾಗೂ ಈ ಮೂಲಕ ಕೋವಿಡ್ 19 ವೈರಸ್ ಮಹಾಮಾರಿಯಾಗಿ ಹಬ್ಬುವುದನ್ನು ತಡೆಯುವಲ್ಲಿ ನಮ್ಮ ಪಾಲಿನ ಕೊಡುಗೆಯನ್ನು ಸಲ್ಲಿಸೋಣ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.